AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​ಗೆ ಸಚಿವ ಮುಖ್ತರ್​ ಅಬ್ಬಾಸ್ ನಖ್ವಿ ಮೂಲಕ ಚಾದರ್​ ಕಳಿಸಿಕೊಟ್ಟ ಪ್ರಧಾನಿ ಮೋದಿ

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​​ನಂದು, ದರ್ಗಾಕ್ಕೆ  ಸಾಮಾನ್ಯವಾಗಿ ಹಿಂದು ಮತ್ತು ಮುಸ್ಲಿಂ ಎರಡೂ ಸಮುದಾಯದವರು ಚಾದರ್ ಸಮರ್ಪಿಸುತ್ತಾರೆ. ದೇಶಾದ್ಯಂತ ಇರುವ ಅನೇಕರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ.

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​ಗೆ ಸಚಿವ ಮುಖ್ತರ್​ ಅಬ್ಬಾಸ್ ನಖ್ವಿ ಮೂಲಕ ಚಾದರ್​ ಕಳಿಸಿಕೊಟ್ಟ ಪ್ರಧಾನಿ ಮೋದಿ
ಚಾದರ್​ ನೀಡಿದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Feb 03, 2022 | 8:52 AM

ಖ್ವಾಜಾ ಮೊಯಿನುದ್ದೀನ್ ಚಿಸ್ತಿ 810ನೇ ಉರುಸ್ ಹಿನ್ನೆಲೆಯಲ್ಲಿ ಅಜ್ಮೀರ್​ ಶರಿಫ್​ ದರ್ಗಾಕ್ಕೆ ಅರ್ಪಿಸಲೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾದರ್​​ವೊಂದನ್ನು, ಅಲ್ಪಸಂಖ್ಯಾತ ಇಲಾಖೆ ಸಚಿವ ಮುಖ್ತರ್​ ಅಬ್ಬಾಸ್ ನಖ್ವಿಯವರಿಗೆ ನೀಡಿದ್ದಾರೆ. ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ತಾವು ನಖ್ವಿಯವರಿಗೆ ಚಾದರ್​ ನೀಡುತ್ತಿರುವ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ. ಈ ಚಾದರ್​​ ಅಜ್ಮೇರ್​ ದರ್ಗಾಕ್ಕೆ ಅರ್ಪಿತವಾಗಲಿದೆ ಎಂದು ಹೇಳಿದ್ದಾರೆ. ಈ ಬಾರಿ ಅಜ್ಮೇರ್​ ದರ್ಗಾದಲ್ಲಿ ಸೂಫಿ ಸಂತ​ ಖ್ವಾಜಾ ಮೊಯಿನುದ್ದೀನ್ ಚಿಸ್ತಿಯವರ 810ನೇ ಉರುಸ್ ಅಂದರೆ ಪುಣ್ಯತಿಥಿ​ ನಡೆಯುತ್ತಿದೆ.  ಅಂದಹಾಗೆ, ಪ್ರಧಾನಿ ಮೋದಿಯವರು ಇದೇ ಮೊದಲ ಬಾರಿಯಲ್ಲ. ಹಿಂದೆ ಕೂಡ ಮುಖ್ತರ್​ ಅಬ್ಬಾಸ್ ನಖ್ವಿಯವರ ಮೂಲಕವೇ ದರ್ಗಾಕ್ಕೆ ಚಾದರ್​ ನೀಡಿದ್ದಾರೆ.  

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​​ನಂದು, ದರ್ಗಾಕ್ಕೆ  ಸಾಮಾನ್ಯವಾಗಿ ಹಿಂದು ಮತ್ತು ಮುಸ್ಲಿಂ ಎರಡೂ ಸಮುದಾಯದವರು ಚಾದರ್ ಸಮರ್ಪಿಸುತ್ತಾರೆ. ದೇಶಾದ್ಯಂತ ಇರುವ ಅನೇಕರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಮುಸ್ಲಿಂ ಸಮುದಾಯದ ಜನಸಾಮಾನ್ಯರು, ನಟರು, ರಾಜಕಾರಣಿಗಳು ಉರುಸ್​ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ. ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಕೂಡ ಮಂಗಳವಾರ ದರ್ಗಾಕ್ಕೆ ಚಾದರ್​ ಕಳಿಸಿಕೊಟ್ಟಿದ್ದಾರೆ. ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​​ಗಾಗಿ ರಾಹುಲ್​ ಗಾಂಧಿಯವರು ಚಾದರ್​ ಕೊಟ್ಟಿದ್ದನ್ನು ಕಾಂಗ್ರೆಸ್​​ನ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಇಮ್ರಾನ್​ ಪ್ರತಾಪ್​ಗಢಿ ದೃಢಪಡಿಸಿದ್ದಾರೆ.

ಖ್ವಾಜಾ ಗರೀಬ್ ನವಾಜ್ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಸೂಫಿ ಸಂತರಾಗಿದ್ದರು. ಇವರು ಪ್ರವಾದಿ ಮುಹಮ್ಮದ್ ಅವರ ನೇರ ವಂಶಸ್ಥರು ಎಂದೂ ಹೇಳಲಾಗಿದೆ. ಇವರು ಹುಟ್ಟಿದ್ದು ಸಿಸ್ತಾನ್​​ನಲ್ಲಿ.  ಇಂದಿನ ಪೂರ್ವ ಇರಾನ್ ಮತ್ತು ದಕ್ಷಿಣ ಅಫ್ಘಾನಿಸ್ತಾನದ ಪ್ರದೇಶದಲ್ಲ ಈ ಸಿಸ್ತಾನ್​ ಇದೆ. ಸಿಸ್ತಾನ್​​ನಿಂದ ಲಾಹೋರ್​ಗೆ ಬಂದು, ಅಲ್ಲಿಂದ ದೆಹಲಿಗೆ ತಲುಪಿದ್ದರು. ಕೊನೆಗೆ ರಾಜಸ್ಥಾನದ ಅಜ್ಮೇರ್​​ನಲ್ಲಿ ಶಾಶ್ವತವಾಗಿ ನೆಲೆಸಿದರು. ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅಜ್ಮೇರ್​​ನಲ್ಲಿಯೇ ಇದೆ. ಅವರು ನಿಧನರಾದ ದಿನವನ್ನು ಉರುಸ್​ ಎಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಇನ್​ಸ್ಟಾಗ್ರಾಂನಲ್ಲಿ ಹೊಸ ಪೋಸ್ಟ್ ಶೇರ್ ಮಾಡಿ, ಡಿಲೀಟ್ ಮಾಡಿದ ಕಂಗನಾ; ಅದರಲ್ಲಿತ್ತು ಹೊಸ ಸಮಾಚಾರ!

Published On - 8:23 am, Thu, 3 February 22

ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ