AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​ಗೆ ಸಚಿವ ಮುಖ್ತರ್​ ಅಬ್ಬಾಸ್ ನಖ್ವಿ ಮೂಲಕ ಚಾದರ್​ ಕಳಿಸಿಕೊಟ್ಟ ಪ್ರಧಾನಿ ಮೋದಿ

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​​ನಂದು, ದರ್ಗಾಕ್ಕೆ  ಸಾಮಾನ್ಯವಾಗಿ ಹಿಂದು ಮತ್ತು ಮುಸ್ಲಿಂ ಎರಡೂ ಸಮುದಾಯದವರು ಚಾದರ್ ಸಮರ್ಪಿಸುತ್ತಾರೆ. ದೇಶಾದ್ಯಂತ ಇರುವ ಅನೇಕರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ.

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​ಗೆ ಸಚಿವ ಮುಖ್ತರ್​ ಅಬ್ಬಾಸ್ ನಖ್ವಿ ಮೂಲಕ ಚಾದರ್​ ಕಳಿಸಿಕೊಟ್ಟ ಪ್ರಧಾನಿ ಮೋದಿ
ಚಾದರ್​ ನೀಡಿದ ಪ್ರಧಾನಿ ಮೋದಿ
TV9 Web
| Edited By: |

Updated on:Feb 03, 2022 | 8:52 AM

Share

ಖ್ವಾಜಾ ಮೊಯಿನುದ್ದೀನ್ ಚಿಸ್ತಿ 810ನೇ ಉರುಸ್ ಹಿನ್ನೆಲೆಯಲ್ಲಿ ಅಜ್ಮೀರ್​ ಶರಿಫ್​ ದರ್ಗಾಕ್ಕೆ ಅರ್ಪಿಸಲೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾದರ್​​ವೊಂದನ್ನು, ಅಲ್ಪಸಂಖ್ಯಾತ ಇಲಾಖೆ ಸಚಿವ ಮುಖ್ತರ್​ ಅಬ್ಬಾಸ್ ನಖ್ವಿಯವರಿಗೆ ನೀಡಿದ್ದಾರೆ. ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ತಾವು ನಖ್ವಿಯವರಿಗೆ ಚಾದರ್​ ನೀಡುತ್ತಿರುವ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ. ಈ ಚಾದರ್​​ ಅಜ್ಮೇರ್​ ದರ್ಗಾಕ್ಕೆ ಅರ್ಪಿತವಾಗಲಿದೆ ಎಂದು ಹೇಳಿದ್ದಾರೆ. ಈ ಬಾರಿ ಅಜ್ಮೇರ್​ ದರ್ಗಾದಲ್ಲಿ ಸೂಫಿ ಸಂತ​ ಖ್ವಾಜಾ ಮೊಯಿನುದ್ದೀನ್ ಚಿಸ್ತಿಯವರ 810ನೇ ಉರುಸ್ ಅಂದರೆ ಪುಣ್ಯತಿಥಿ​ ನಡೆಯುತ್ತಿದೆ.  ಅಂದಹಾಗೆ, ಪ್ರಧಾನಿ ಮೋದಿಯವರು ಇದೇ ಮೊದಲ ಬಾರಿಯಲ್ಲ. ಹಿಂದೆ ಕೂಡ ಮುಖ್ತರ್​ ಅಬ್ಬಾಸ್ ನಖ್ವಿಯವರ ಮೂಲಕವೇ ದರ್ಗಾಕ್ಕೆ ಚಾದರ್​ ನೀಡಿದ್ದಾರೆ.  

ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​​ನಂದು, ದರ್ಗಾಕ್ಕೆ  ಸಾಮಾನ್ಯವಾಗಿ ಹಿಂದು ಮತ್ತು ಮುಸ್ಲಿಂ ಎರಡೂ ಸಮುದಾಯದವರು ಚಾದರ್ ಸಮರ್ಪಿಸುತ್ತಾರೆ. ದೇಶಾದ್ಯಂತ ಇರುವ ಅನೇಕರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಮುಸ್ಲಿಂ ಸಮುದಾಯದ ಜನಸಾಮಾನ್ಯರು, ನಟರು, ರಾಜಕಾರಣಿಗಳು ಉರುಸ್​ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ. ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಕೂಡ ಮಂಗಳವಾರ ದರ್ಗಾಕ್ಕೆ ಚಾದರ್​ ಕಳಿಸಿಕೊಟ್ಟಿದ್ದಾರೆ. ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರುಸ್​​ಗಾಗಿ ರಾಹುಲ್​ ಗಾಂಧಿಯವರು ಚಾದರ್​ ಕೊಟ್ಟಿದ್ದನ್ನು ಕಾಂಗ್ರೆಸ್​​ನ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಇಮ್ರಾನ್​ ಪ್ರತಾಪ್​ಗಢಿ ದೃಢಪಡಿಸಿದ್ದಾರೆ.

ಖ್ವಾಜಾ ಗರೀಬ್ ನವಾಜ್ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಸೂಫಿ ಸಂತರಾಗಿದ್ದರು. ಇವರು ಪ್ರವಾದಿ ಮುಹಮ್ಮದ್ ಅವರ ನೇರ ವಂಶಸ್ಥರು ಎಂದೂ ಹೇಳಲಾಗಿದೆ. ಇವರು ಹುಟ್ಟಿದ್ದು ಸಿಸ್ತಾನ್​​ನಲ್ಲಿ.  ಇಂದಿನ ಪೂರ್ವ ಇರಾನ್ ಮತ್ತು ದಕ್ಷಿಣ ಅಫ್ಘಾನಿಸ್ತಾನದ ಪ್ರದೇಶದಲ್ಲ ಈ ಸಿಸ್ತಾನ್​ ಇದೆ. ಸಿಸ್ತಾನ್​​ನಿಂದ ಲಾಹೋರ್​ಗೆ ಬಂದು, ಅಲ್ಲಿಂದ ದೆಹಲಿಗೆ ತಲುಪಿದ್ದರು. ಕೊನೆಗೆ ರಾಜಸ್ಥಾನದ ಅಜ್ಮೇರ್​​ನಲ್ಲಿ ಶಾಶ್ವತವಾಗಿ ನೆಲೆಸಿದರು. ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅಜ್ಮೇರ್​​ನಲ್ಲಿಯೇ ಇದೆ. ಅವರು ನಿಧನರಾದ ದಿನವನ್ನು ಉರುಸ್​ ಎಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಇನ್​ಸ್ಟಾಗ್ರಾಂನಲ್ಲಿ ಹೊಸ ಪೋಸ್ಟ್ ಶೇರ್ ಮಾಡಿ, ಡಿಲೀಟ್ ಮಾಡಿದ ಕಂಗನಾ; ಅದರಲ್ಲಿತ್ತು ಹೊಸ ಸಮಾಚಾರ!

Published On - 8:23 am, Thu, 3 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ