AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onam 2021: ದೇಶದ ಜನರಿಗೆ ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್​

ಓಣಂ ಮಲಯಾಳಿಗಳಿಗೆ ದೊಡ್ಡ ಹಬ್ಬವಾಗಿದ್ದು, ನಮ್ಮ ದೇಶದಲ್ಲಿ ಕೇರಳದಲ್ಲಿ ಅತ್ಯಂತ ಸಂಭ್ರಮದಿಂದ, ವಿಶೇಷವಾಗಿ ಆಚರಿಸಲ್ಪಡುತ್ತದೆ. ಜಗತ್ತಿನಾದ್ಯಂತ ಇರುವ ಮಲಯಾಳಿಗಳು ಈ ಹಬ್ಬವನ್ನು ಸಡಗರದಿಂದ ಆಚರಿಸುತ್ತಾರೆ.

Onam 2021: ದೇಶದ ಜನರಿಗೆ ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್​
ಓಣಂ ಹಬ್ಬದ ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 21, 2021 | 10:13 AM

Share

ಪ್ರಧಾನಿ ನರೇಂದ್ರ ಮೋದಿ PM Narendra Modi) ಯವರು ಇಂದು ದೇಶದ ಜನರಿಗೆ ಓಣಂ ಹಬ್ಬ (Onam Festival)ದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್ (Tweet) ಮಾಡಿರುವ ಪ್ರಧಾನಿ ಮೋದಿ, ಸಕಾರಾತ್ಮಕತೆ, ಉತ್ಸಾಹ, ಭ್ರಾತೃತ್ವ ಮತ್ತು ಸಾಮರಸ್ಯವನ್ನು ಸಾರುವ ಓಣಂ ಹಬ್ಬದ ಶುಭಾಶಯಗಳನ್ನು ದೇಶದ ಜನರಿಗೆ ತಿಳಿಸಲು ಬಯಸುತ್ತೇನೆ. ಪ್ರತಿಯೊಬ್ಬರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಹಾಗೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೂ ಸಹ ಟ್ವೀಟ್ ಮಾಡಿ ಓಣಂ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಓಣಂ ಸಂಭ್ರಮದಲ್ಲಿರುವ ಎಲ್ಲರಿಗೂ ಹಬ್ಬದ ಶುಭಾಶಯಗಳು. ಓಣಂ, ಪೃಕೃತಿ ಮಾತೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಆಚರಿಸುವ ಹಬ್ಬವಾಗಿದೆ. ಈ ಶುಭದಿನದಂದು ಪ್ರತಿಯೊಬ್ಬ ನಾಗರಿಕನ ಆಯುರಾರೋಗ್ಯ, ಸಮೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಟ್ವೀಟ್ ಮೂಲಕ ಓಣಂ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಓಣಂ ಹಬ್ಬದ ಈ ಶುಭ ಸಂದರ್ಭದಲ್ಲಿ ನಾನು ಪ್ರತಿಯೊಬ್ಬರಿಗೂ ಹಾರ್ದಿಕವಾದ ಶುಭಾಶಯ ಕೋರುತ್ತಿದ್ದೇನೆ. ದೇಶದ ಹಲವು ಭಾಗಗಳಲ್ಲಿ ಆಚರಿಸಲ್ಪಡುವ ಓಣಂ ಹಬ್ಬ, ಸುಗ್ಗಿಯ ಪ್ರಾರಂಭವನ್ನು ಸಂಕೇತಿಸುತ್ತದೆ. ಹಾಗೇ, ಕೇರಳದ ಮಹಾನ್​ ರಾಜ ಮಹಾಬಲಿಯ ಸ್ಮರಣೆಯೂ ಹೌದು. ರಾಜ ಬಹಾಬಲಿ ತನ್ನ ಉದಾರತೆ, ಉದಾತ್ತತೆಗಾಗಿಯೇ ಹೆಸರು ಮಾಡಿದ್ದ ಎಂದು ವೆಂಕಯ್ಯ ನಾಯ್ಡು ಪುರಾಣವನ್ನು ನೆನಪಿಸಿಕೊಂಡಿದ್ದಾರೆ. ಮತ್ತೊಂದು ಟ್ವೀಟ್​​ನಲ್ಲಿ, ಉತ್ಸಾಹ, ಹುರುಪು ತುಂಬ ಓಣಂ ಹಬ್ಬ, ಶಾಂತಿ, ಸಮೃದ್ಧಿ, ಸಂತೋಷವನ್ನು ಹೊತ್ತು ತರಲಿ ಎಂದಿದ್ದಾರೆ.

ಓಣಂ ಮಲಯಾಳಿಗಳಿಗೆ ದೊಡ್ಡ ಹಬ್ಬವಾಗಿದ್ದು, ನಮ್ಮ ದೇಶದಲ್ಲಿ ಕೇರಳದಲ್ಲಿ ಅತ್ಯಂತ ಸಂಭ್ರಮದಿಂದ, ವಿಶೇಷವಾಗಿ ಆಚರಿಸಲ್ಪಡುತ್ತದೆ. ಜಗತ್ತಿನಾದ್ಯಂತ ಇರುವ ಮಲಯಾಳಿಗಳು ಈ ಹಬ್ಬವನ್ನು ಸಡಗರದಿಂದ ಆಚರಿಸುತ್ತಾರೆ. ಇದು 10 ದಿನಗಳ ಹಬ್ಬವಾಗಿದೆ. ಸುಗ್ಗಿಯ ಪ್ರಾರಂಭದಿಂದ ಹಿಡಿದು ವಿಷ್ಣುವಿನ ವಾಮನ ಅವತಾರ, ಮಹಾಬಲಿ ರಾಜನ ಪೂಜೆಗಳನ್ನು ಮಾಡಲಾಗುತ್ತದೆ. ಆಗಸ್ಟ್​ 12ರಿಂದಲೇ ಓಣಂ ಶುರುವಾಗಿದ್ದು, ಆಗಸ್ಟ್​ 23ಕ್ಕೆ ಮುಕ್ತಾಯವಾಗುತ್ತದೆ.

ಇದನ್ನೂ ಓದಿ: ‘ಪ್ರಭಾಕರ್​ ಕಾಲಿಗೆ ಹುಳ ಆಗಿತ್ತು ಎಂಬುದೆಲ್ಲ ಸುಳ್ಳು, ಆದರೆ ಪೆಟ್ಟಾಗಿದ್ದು ನಿಜ’; ಸರಿಗಮ ವಿಜಿ ತೆರೆದಿಟ್ಟ ಸತ್ಯ

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

Published On - 9:53 am, Sat, 21 August 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ