AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀ ಮೀಟಿಂಗ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಭಾಗಿ

ಸಚಿವರಾದ ಕಿರಣ್ ರಿಜಿಜು, ಕಿಂಜರಾಪು ರಾಮಮೋಹನ್ ನಾಯ್ಡು, ಚಿರಾಗ್ ಪಾಸ್ವಾನ್, ಪಿಯೂಷ್ ಗೋಯಲ್ ಮತ್ತು ವಿರೋಧ ಪಕ್ಷದ ಸಂಸದರಾದ ಸುದೀಪ್ ಬಂಡೋಪಾಧ್ಯಾಯ, ಕನಿಮೋಳಿ ಮೊದಲಾದವ ರಾಹುಲ್ ಗಾಂಧಿಯವರ ಸಾಲಿನಲ್ಲಿ ಕುಳಿತಿದ್ದರು. ಪ್ರತಿಪಕ್ಷ ನಾಯಕನ ಇನ್ನೊಂದು ಬದಿಯಲ್ಲಿ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಕುಳಿತಿದ್ದರು.

ಟೀ ಮೀಟಿಂಗ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಭಾಗಿ
ಟೀ ಮೀಟಿಂಗ್
ರಶ್ಮಿ ಕಲ್ಲಕಟ್ಟ
|

Updated on: Aug 09, 2024 | 8:27 PM

Share

ದೆಹಲಿ ಆಗಸ್ಟ್ 09: ಲೋಕಸಭೆ (Lok Sabha) ಕಲಾಪ ಶುಕ್ರವಾರ ಮುಂದೂಡಲ್ಪಟ್ಟ ನಂತರ ಸಂಸತ್ತಿನ ಸಂಕೀರ್ಣದಲ್ಲಿ ನಡೆದ ಅನಧಿಕೃತ ಚಹಾ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ರಾಹುಲ್ ಗಾಂಧಿ (Rahul Gandhi) ಪರಸ್ಪರ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಬಜೆಟ್ ಅಧಿವೇಶನದ ನಿಗದಿತ ಅಂತ್ಯಕ್ಕೆ ಒಂದು ದಿನ ಮೊದಲು ಈ ಸಭೆ ನಡೆದಿದೆ.  ಸಂಸತ್ತಿನ ಪ್ರಸ್ತುತ ಅಧಿವೇಶನವು ಆಗಸ್ಟ್ 12 ರಂದು ಕೊನೆಗೊಳ್ಳಬೇಕಿತ್ತು ಆದರೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು (ಅನಿರ್ದಿಷ್ಟ ಅವಧಿಗೆ) ಮುಂದೂಡಿದರು.

ನಾಯಕರು ನಮಸ್ತೆ ಎಂದು ಹೇಳಿ ಪರಸ್ಪರ ಶುಭಾಶಯ ಕೋರಿ, ನಗುತ್ತಾ ಸ್ವೀಕರಿಸಿದ್ದಾರೆ ಎಂದು ಸಭೆಯಲ್ಲಿದ್ದ ಜನರು ಎನ್‌ಡಿಟಿವಿಗೆ ತಿಳಿಸಿದರು. ಪ್ರಧಾನಿಯವರು ಸೋಫಾದಲ್ಲಿ ಆಸೀನರಾಗಿದ್ದು ಅವರ ಪಕ್ಕದಲ್ಲಿ ಸ್ಪೀಕರ್ ಓಂ ಬಿರ್ಲಾ ಇದ್ದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯವರ ಬಲಭಾಗದ ಕುರ್ಚಿಯಲ್ಲಿದ್ದರು.

ಸಚಿವರಾದ ಕಿರಣ್ ರಿಜಿಜು, ಕಿಂಜರಾಪು ರಾಮಮೋಹನ್ ನಾಯ್ಡು, ಚಿರಾಗ್ ಪಾಸ್ವಾನ್, ಪಿಯೂಷ್ ಗೋಯಲ್ ಮತ್ತು ವಿರೋಧ ಪಕ್ಷದ ಸಂಸದರಾದ ಸುದೀಪ್ ಬಂಡೋಪಾಧ್ಯಾಯ, ಕನಿಮೋಳಿ ಮೊದಲಾದವ ರಾಹುಲ್ ಗಾಂಧಿಯವರ ಸಾಲಿನಲ್ಲಿ ಕುಳಿತಿದ್ದರು. ಪ್ರತಿಪಕ್ಷ ನಾಯಕನ ಇನ್ನೊಂದು ಬದಿಯಲ್ಲಿ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಕುಳಿತಿದ್ದರು.

ಇದನ್ನೂ ಓದಿ: Manish Sisodia:17 ತಿಂಗಳ ನಂತರ ಜೈಲಿನಿಂದ ಹೊರಬಂದ ಮನೀಶ್ ಸಿಸೋಡಿಯಾ

ಮುಖಂಡರು ತಮ್ಮ ತಮ್ಮಲ್ಲೇ ಮಾತನಾಡಿಕೊಳ್ಳುತ್ತಿದ್ದಂತೆ ಸರ್ವರ್ ಟೀ ಟ್ರೇಯೊಂದಿಗೆ ಘಟನಾ ಸ್ಥಳಕ್ಕೆ ಬರುತ್ತಿರುವುದು ಕಂಡು ಬಂತು. ಕೆಲವು ವಾರಗಳ ಹಿಂದೆ, ಲೋಕಸಭೆಯಲ್ಲಿ ಮಾತನಾಡುವಾಗ ನಾಯಕರು, ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ತೀಕ್ಷ್ಣವಾದ ಮಾತುಗಳನ್ನು ವಿನಿಮಯ ಮಾಡಿಕೊಂಡಿದ್ದರು. ಪರಸ್ಪರ ಎದುರಾಳಿಯಾಗಿ ಕುಳಿತಿರುವ ನಾಯಕರ ಚಿತ್ರಣವು ಬಿರುಸಿನ ಚುನಾವಣಾ ಪ್ರಚಾರ ಮತ್ತು ಎರಡು ಪ್ರತಿಸ್ಪರ್ಧಿ ಪಕ್ಷಗಳ ನಡುವೆ ನಡೆಯುತ್ತಿರುವ ಕಹಿಯುದ್ದಕ್ಕೆ ವ್ಯತಿರಿಕ್ತವಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ