AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆನ್ಮಾರ್ಕ್​ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಹೊರಡುವುದಕ್ಕೂ ಮೊದಲು ಜರ್ಮನಿ ಸರ್ಕಾರಕ್ಕೆ ಕೃತಜ್ಞತೆ

ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬರ್ಲಿಗೆ ಬಂದಿದ್ದರು.ಅಂತರ-ಸರ್ಕಾರಿ ಸಮಾಲೋಚನೆಯ (ಐಜಿಸಿ) ಆರನೇ ಸರ್ವಾಂಗೀಣ ಅಧಿವೇಶನದಲ್ಲಿ ಚಾನ್ಸೆಲರ್ ಸ್ಕೋಲ್ಜ್ ಅವರೊಂದಿಗೆ ಸಹ-ಅಧ್ಯಕ್ಷತೆ ವಹಿಸಿದ್ದರು.

ಡೆನ್ಮಾರ್ಕ್​ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಹೊರಡುವುದಕ್ಕೂ ಮೊದಲು ಜರ್ಮನಿ ಸರ್ಕಾರಕ್ಕೆ ಕೃತಜ್ಞತೆ
ಡೆನ್ಮಾರ್ಕ್​ಗೆ ತಲುಪಿದ ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: May 03, 2022 | 2:48 PM

Share

ಪ್ರಧಾನಿ ನರೇಂದ್ರ ಮೋದಿಯವರ ಯುರೋಪ್​ ದೇಶಗಳ ಪ್ರವಾಸದ ಎರಡನೇ ಹಂತ ಪ್ರಾರಂಭವಾಗಿದ್ದು, ಅವರಿಂದು ಜರ್ಮನ್​​ನಿಂದ ಹೊರಟು ಡೆನ್ಮಾರ್ಕ್​ ತಲುಪಿದ್ದಾರೆ. ಈ ಬಗ್ಗೆ ಕೇಂದ್ರ ವಿದೇಶಾಂಗ ಇಲಾಖೆ ವಕ್ತಾರ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಯುರೋಪ್​​ನ ಮೂರು ದೇಶಗಳ ಪ್ರವಾಸದ ಮೊದಲ ಹಂತ ಮುಕ್ತಾಯಗೊಂಡಿದೆ. ಈ ಭೇಟಿ ಭಾರತ-ಜರ್ಮನಿಯ ಸಂಬಂಧವನ್ನ ಬಲಗೊಳಿಸಿದೆ. ಮುಂದಿನ ನಿಲ್ದಾಣ, ಡೆನ್ಮಾರ್ಕ್​-ಕೋಪನ್ ಹ್ಯಾಗನ್ ಎಂದು ಹೇಳಿದ್ದು, ಎರಡು ಫೋಟೋಗಳನ್ನೂ ಶೇರ್ ಮಾಡಿಕೊಂಡಿದ್ದಾರೆ. 

ಹಾಗೇ, ಪ್ರಧಾನಿ ನರೇಂದ್ರ ಮೋದಿ ತಾವು ಜರ್ಮನಿಯಿಂದ ಹೊರಡುವುದಕ್ಕೂ ಮೊದಲು ಜರ್ಮನಿಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಆತಿಥ್ಯ ನೀಡಿ ಗೌರವಿಸಿದ್ದಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ. ‘ನಾನು ಜರ್ಮನಿಗೆ ಭೇಟಿ ಕೊಟ್ಟಿದ್ದು ಫಲಪ್ರದವಾಗಿದೆ. ಇಲ್ಲಿನ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ವಿಸ್ತಾರವಾಗಿ  ದ್ವಿಪಕ್ಷೀಯ ಮಾತುಕತೆ ನಡೆಸಲಾಯಿತು. ಅಂತರ್​ ಸರ್ಕಾರ ಸಮಾಲೋಚನೆಗಳು ನಡೆದವು. ಹಾಗೇ, ಇಲ್ಲಿರುವ ಭಾರತೀಯ ಉದ್ಯಮಿಗಳು, ಸಮುದಾಯದ ಮುಖಂಡರ ಜತೆಗೆ ಮಾತುಕತೆಗೆ ಅವಕಾಶ ಸಿಕ್ಕಿದ್ದು ಖುಷಿಯಾಯಿತು ಎಂದು ಹೇಳಿದ್ದಾರೆ.  ವಿಡಿಯೋ ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬರ್ಲಿಗೆ ಬಂದಿದ್ದರು.ಅಂತರ-ಸರ್ಕಾರಿ ಸಮಾಲೋಚನೆಯ (ಐಜಿಸಿ) ಆರನೇ ಸರ್ವಾಂಗೀಣ ಅಧಿವೇಶನದಲ್ಲಿ ಚಾನ್ಸೆಲರ್ ಸ್ಕೋಲ್ಜ್ ಅವರೊಂದಿಗೆ ಸಹ-ಅಧ್ಯಕ್ಷತೆ ವಹಿಸಿದ್ದರು. ಈ ಅಧಿವೇಶನದಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿ ಮೋದಿ, ಭಾರತದ ಆತ್ಮನಿರ್ಭರ ಭಾರತ ಅಭಿಯಾನದಲ್ಲಿ ಭಾಗವಹಿಸುವಂತೆ ಜರ್ಮನಿಗೆ ಆಹ್ವಾನ ನೀಡಿದರು.  ಇದೇ ವೇಳೆ ಭಾರತ ಮತ್ತು ಜರ್ಮನಿಯ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಅದರಡಿಯಲ್ಲಿ, ಭಾರತ 2023ರ ಹೊತ್ತಿಗೆ ಶುದ್ಧ ಇಂಧನ ಬಳಕೆಯನ್ನು ಹೆಚ್ಚಿಸಲು ಜರ್ಮನಿಯಿಂದ 10.5 ಬಿಲಿಯನ್​  ಡಾಲರ್​​ಗಳಷ್ಟು ನೆರವು ಪಡೆಯಲಿದೆ.

ಇದನ್ನೂ ಓದಿ: Video: ಟ್ವೆಂಟಿ ಟ್ವೆಂಟಿ ಫೋರ್, ಮೋದಿ ಒನ್ಸ್​ ಮೋರ್​-ಬಿಜೆಪಿಗೆ ಮುಂದಿನ ಚುನಾವಣೆಯ ಸ್ಲೋಗನ್​ ಕೊಟ್ಟ ಬರ್ಲಿನ್​ನಲ್ಲಿರುವ ಭಾರತೀಯರು !

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?