AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರದಾನ

ಪ್ರಧಾನಿ ನರೇಂದ್ರ ಮೋದಿ ಕುವೈತ್‌ನ ಅತ್ಯುನ್ನತ ಗೌರವ ಸಿಕ್ಕಿದೆ. ಈ ಮೂಲಕ ಪ್ರಧಾನಿ ಮೋದಿ ದೇಶವೊಂದರಿಂದ 20ನೇ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ಕುವೈತ್‌ನ ನೈಟ್‌ಹುಡ್ ಆರ್ಡರ್ ಆಗಿದೆ. ಇದನ್ನು ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಗಣ್ಯರು ಮತ್ತು ವಿದೇಶಿ ರಾಜಮನೆತನದ ಸದಸ್ಯರಿಗೆ ನೀಡಲಾಗುತ್ತದೆ.

ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ 'ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್' ಪ್ರದಾನ
Pm Narendra Modi Receives Kuwait's Highest Honour
ಸುಷ್ಮಾ ಚಕ್ರೆ
|

Updated on: Dec 22, 2024 | 5:03 PM

Share

ನವದೆಹಲಿ: ಕುವೈತ್​ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಇಂದು ಬಯಾನ್ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್‌ನ ಅತ್ಯುನ್ನತ ನಾಗರಿಕ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಿದರು. ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಅನ್ನು ಸಾಮಾನ್ಯವಾಗಿ ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಗಣ್ಯರು ಮತ್ತು ರಾಜಮನೆತನದ ಸದಸ್ಯರಿಗೆ ಸ್ನೇಹದ ಸೂಚಕವಾಗಿ ನೀಡಲಾಗುತ್ತದೆ.

ಇಲ್ಲಿಯವರೆಗೆ 20ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಗೌರವಗಳನ್ನು ಪಡೆದಿರುವ ಪ್ರಧಾನಿ ನರೇಂದ್ರ ಮೋದಿ, ಯುಎಸ್ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಬುಷ್, ಯುಕೆ ರಾಜ ರಾಜ ಚಾರ್ಲ್ಸ್ III ಅವರಂತಹವರ ಸಾಲಿಗೆ ಸೇರಿಕೊಂಡಿದ್ದಾರೆ. ಇವರೆಲ್ಲರೂ ಈ ಹಿಂದೆ ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನೂ ಓದಿ: ಕುವೈತ್​ನಲ್ಲಿ ಭಾರತೀಯ ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ ಸಂವಾದ

ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದ್ದಕ್ಕಾಗಿ ಮೋದಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕುವೈತ್‌ನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇಂದು ಪ್ರಧಾನಿ ಮೋದಿಯವರಿಗೆ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಕುವೈತ್‌ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆಗೆ ಮುನ್ನ ಪ್ರಧಾನಿ ಮೋದಿ ಅವರಿಗೆ ಬಯಾನ್ ಅರಮನೆಯಲ್ಲಿ ವಿದ್ಯುಕ್ತ ಸ್ವಾಗತ ಮತ್ತು ಗೌರವ ಗಾರ್ಡ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಅಮೀರ್, ಕ್ರೌನ್ ಪ್ರಿನ್ಸ್ ಸಬಾಹ್ ಅಲ್-ಖಾಲಿದ್ ಅಲ್-ಸಬಾಹ್ ಮತ್ತು ಅವರ ಕುವೈತ್ ಕೌಂಟರ್‌ನೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಗಯಾನಾ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ‘ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಅನ್ನು ಸ್ವೀಕರಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ