AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ಕುರಿತು ರಾಹುಲ್ ಗಾಂಧಿ ಕೇಳಿದ್ದ ಪ್ರಶ್ನೆಗೆ ಪ್ರಧಾನಿ ಮೋದಿ ಕೊಟ್ಟ ಉತ್ತರವೇನು?

ಡೊನಾಲ್ಡ್​ ಟ್ರಂಪ್ ಕುರಿತು ರಾಹುಲ್ ಗಾಂಧಿ(Rahul Gandhi) ಕೇಳಿದ್ದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ. ಇಂದು ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಮಾತನಾಡಿದರು. ಆಪರೇಷನ್ ಸಿಂಧೂರ್​ ಕುರಿತು ಚರ್ಚೆಗೆ ಕಾಂಗ್ರೆಸ್​ ಹಠಹಿಡಿದಿತ್ತು. ಟ್ರಂಪ್ ಹೇಳಿಕೆಯನ್ನು ವಿವಾದ ಮಾಡಲಾಗಿತ್ತು. ಅದನ್ನೇ ಅಸ್ತ್ರವಾಗಿ ಬಳಸಿಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆದಿತ್ತು.

ಟ್ರಂಪ್ ಕುರಿತು ರಾಹುಲ್ ಗಾಂಧಿ ಕೇಳಿದ್ದ ಪ್ರಶ್ನೆಗೆ ಪ್ರಧಾನಿ ಮೋದಿ ಕೊಟ್ಟ ಉತ್ತರವೇನು?
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on:Jul 29, 2025 | 9:24 PM

Share

ನವದೆಹಲಿ, ಜುಲೈ 29: ಡೊನಾಲ್ಡ್​ ಟ್ರಂಪ್ ಕುರಿತು ರಾಹುಲ್ ಗಾಂಧಿ(Rahul Gandhi) ಕೇಳಿದ್ದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ. ಇಂದು ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಲೋಕಸಭೆಯಲ್ಲಿ ಮಾತನಾಡಿದರು. ಆಪರೇಷನ್ ಸಿಂಧೂರ್​ ಕುರಿತು ಚರ್ಚೆಗೆ ಕಾಂಗ್ರೆಸ್​ ಹಠಹಿಡಿದಿತ್ತು. ಟ್ರಂಪ್ ಹೇಳಿಕೆಯನ್ನು ವಿವಾದ ಮಾಡಲಾಗಿತ್ತು. ಅದನ್ನೇ ಅಸ್ತ್ರವಾಗಿ ಬಳಸಿಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆದಿತ್ತು.

ಕದನ ವಿರಾಮದ ಬಳಿಕ ವಿಶೇಷವಾಗಿ ರಾಹುಲ್ ಗಾಂಧಿ ಟೀಕಾ ಪ್ರಹಾರ ಮಾಡಿದ್ದರು. ಡೊನಾಲ್ಡ್​ ಟ್ರಂಪ್ 29 ಬಾರಿ ಕದನ ವಿರಾಮದ ಪ್ರಸ್ತಾಪವನ್ನು ಮಾಡಿದ್ದರು ಎಂಬುದನ್ನು ಸುಳ್ಳು ಎಂದು ಒಪ್ಪಿಕೊಳ್ಳಲು ನಾವು ಸಿದ್ಧರಿದ್ದೇವೆ. ಆದರೆ ತನ್ನ ಅಜ್ಜಿ ಇಂದಿರಾ ಬಗ್ಗೆ ಮಾತನಾಡಿ ಅವರಿಗಿರುವ ಅರ್ಧದಷ್ಟು ಧೈರ್ಯ ಇದ್ದರೆ ಪ್ರಧಾನಿ ಮೋದಿ ಧೈರ್ಯದಿಂದ ಇದು ಸುಳ್ಳೆಂದು ಹೇಳಲಿ ಎಂದು ಮೇಜು ತಟ್ಟಿ ಪಂಥಾಹ್ವಾನ ಮಾಡಿದ್ದರು.

ಅದಕ್ಕೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ಕೊಟ್ಟಿದ್ದು, ಮೇ 9 ರ ರಾತ್ರಿ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಅವರಿಂದ 3-4 ಬಾರಿ ಕರೆ ಬಂದಿತ್ತು. ನಾನು ಮೀಟಿಂಗ್​​ನಲ್ಲಿದ್ದೆ. ನಂತರ, ಅವರು ಮತ್ತೆ ಕರೆ ಮಾಡಿದಾಗ, ಪಾಕಿಸ್ತಾನವು ದೊಡ್ಡ ದಾಳಿಯನ್ನು ಯೋಜಿಸುತ್ತಿದೆ ಎಂದು ತಿಳಿಸಿದ್ದರು. ಪಾಕಿಸ್ತಾನವು ಅಂತಹ ಉದ್ದೇಶಗಳನ್ನು ಹೊಂದಿದ್ದರೆ, ಅದು ಅವರಿಗೆ ಭಾರಿ ಬೆಲೆ ತೆರಬೇಕಾಗುತ್ತದೆ.

ಮತ್ತಷ್ಟು ಓದಿ: ಭಾರತಕ್ಕೆ ಇಡೀ ವಿಶ್ವದಿಂದಲೇ ಬೆಂಬಲ ಸಿಕ್ಕಿತ್ತು ಆದರೆ ಕಾಂಗ್ರೆಸ್​​ನಿಂದ ಸಿಗಲಿಲ್ಲ: ಮೋದಿ

ಅವರು ಗುಂಡುಗಳನ್ನು ಹಾರಿಸಿದರೆ, ನಾವು ಬಾಂಬ್‌ಗಳಿಂದ ಪ್ರತಿಕ್ರಿಯಿಸುತ್ತೇವೆ ಎಂದು ನಾನು ಅವರಿಗೆ ಉತ್ತರಿಸಿದ್ದೆ. ಈ ಸಂಭಾಷಣೆ ಮೇ 9 ರ ರಾತ್ರಿ ನಡೆದಿದ್ದು, ಮೇ 10 ರ ಬೆಳಗ್ಗೆ ಭಾರತವು ಪಾಕಿಸ್ತಾನದ ಮಿಲಿಟರಿ ಸಾಮರ್ಥ್ಯಗಳನ್ನು ನಾಶಮಾಡಿದೆ ಎಂದರು.

ಮೇ 10 ರ ರಾತ್ರಿ ಪಾಕಿಸ್ತಾನ ಕದನ ವಿರಾಮಕ್ಕೆ ಮನವಿ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಬಹಿರಂಗಪಡಿಸಿದರು. ಭಾರತದ ದಾಳಿಯ ತೀವ್ರತೆಯನ್ನು ಇನ್ನು ಮುಂದೆ ತಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ. ನಡೆದಿದ್ದು ಇಷ್ಟೇ ಬಿಟ್ಟರೆ ಯಾವುದೇ ಜಾಗತಿಕ ನಾಯಕರೂ ಆಪರೇಷನ್ ಸಿಂಧೂರ್ ನಿಲ್ಲಿಸುವಂತೆ ಕೇಳಲಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:17 pm, Tue, 29 July 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!