GDP Growth: ಜಿಡಿಪಿ ಬೆಳವಣಿಗೆ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ; ಜಾಗತಿಕ ಸವಾಲುಗಳ ನಡುವೆ ಭಾರತದ ಆರ್ಥಿಕತೆ ಸ್ಥಿರ

ಜನವರಿಯಿಂದ ಮಾರ್ಚ್​ವರೆಗಿನ ತ್ರೈಮಾಸಿಕ ಅವಧಿಯ ಜಿಡಿಪಿ ದತ್ತಾಂಶ ಬಿಡುಗಡೆ ಆಗಿದ್ದು, ಈ ಸಮಯದಲ್ಲಿ ಶೇ. 6.1ರಷ್ಟು ಬೆಳವಣಿಗೆ ಸಾಧಿಸಿರುವುದು ತಿಳಿದುಬಂದಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, 2022-23 ಜಿಡಿಪಿ ಬೆಳವಣಿಗೆಯ ಅಂಕಿಅಂಶಗಳು ದೇಶದ ಆರ್ಥಿಕತೆಯ ಸ್ಥಿರತೆಯನ್ನು ತೋರಿಸುತ್ತದೆ ಎಂದು ಬಣ್ಣಿಸಿದ್ದಾರೆ.

GDP Growth: ಜಿಡಿಪಿ ಬೆಳವಣಿಗೆ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ; ಜಾಗತಿಕ ಸವಾಲುಗಳ ನಡುವೆ ಭಾರತದ ಆರ್ಥಿಕತೆ ಸ್ಥಿರ
ಪ್ರಧಾನಿ ನರೇಂದ್ರ ಮೋದಿ
Follow us
|

Updated on: May 31, 2023 | 9:23 PM

ನವದೆಹಲಿ: ಜನವರಿಯಿಂದ ಮಾರ್ಚ್​ವರೆಗಿನ ತ್ರೈಮಾಸಿಕ ಅವಧಿಯ ಜಿಡಿಪಿ ದತ್ತಾಂಶ (GDP Data) ಬಿಡುಗಡೆ ಆಗಿದ್ದು, ಈ ಸಮಯದಲ್ಲಿ ಶೇ. 6.1ರಷ್ಟು ಬೆಳವಣಿಗೆ ಸಾಧಿಸಿರುವುದು ತಿಳಿದುಬಂದಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, 2022-23 ಜಿಡಿಪಿ ಬೆಳವಣಿಗೆಯ ಅಂಕಿಅಂಶಗಳು ದೇಶದ ಆರ್ಥಿಕತೆಯ ಸ್ಥಿರತೆಯನ್ನು ತೋರಿಸುತ್ತದೆ ಎಂದು ಬಣ್ಣಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 2022-23 ಜಿಡಿಪಿ ಬೆಳವಣಿಗೆಯ ಅಂಕಿಅಂಶಗಳು ಜಾಗತಿಕ ಸವಾಲುಗಳ ನಡುವೆ ಭಾರತೀಯ ಆರ್ಥಿಕತೆಯ ಸ್ಥಿತಿಸ್ಥಾಪಕತ್ವವನ್ನು ಒತ್ತಿ ಹೇಳಿದೆ. ಒಟ್ಟಾರೆ ಆಶಾವಾದ, ಬಲವಾದ ಸ್ಥೂಲ-ಆರ್ಥಿಕ ಸೂಚಕಗಳ ಜೊತೆಗೆ ಈ ದೃಢವಾದ ಕಾರ್ಯಕ್ಷಮತೆಯು ನಮ್ಮ ಆರ್ಥಿಕತೆಯ ಭರವಸೆಯ ಪಥಕ್ಕೆ ಮತ್ತು ನಮ್ಮ ಜನರ ಸ್ಥಿರತೆಗೆ ಉದಾಹರಣೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯ ಮೇ 31ರಂದು ಜಿಡಿಪಿ ದತ್ತಾಂಶದ ವರದಿ ಬಿಡುಗಡೆ ಮಾಡಿದೆ. ಇದರ ಪ್ರಕಾರ, 2023ರ ಜನವರಿಯಿಂದ ಮಾರ್ಚ್​ವರೆಗಿನ ತ್ರೈಮಾಸಿಕ ಅವಧಿಯಲ್ಲಿ ಭಾರತದ ಜಿಡಿಪಿ 43.62 ಲಕ್ಷ ಕೋಟಿ ಆಗಿದೆ. ಹಿಂದಿನ ವರ್ಷದ ಈ ಅವಧಿಗೆ ಹೋಲಿಸಿದರೆ ಶೇ. 6.1ರಷ್ಟು ಹೆಚ್ಚಾಗಿದೆ. 2022-23ರ ಹಣಕಾಸು ವರ್ಷದಲ್ಲಿ ಜಿಡಿಪಿ ವೃದ್ಧಿ ಶೇ. 7.2ರಷ್ಟಿದೆ.

ಈ ಮಧ್ಯೆ, ನಗರ ಪ್ರದೇಶಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಒತ್ತು ನೀಡುವ ‘ಸಿಟಿ ಇನ್ವೆಸ್ಟ್‌ಮೆಂಟ್ಸ್‌ ಟು ಇನ್ನೋವೇಟ್‌, ಇಂಟಿಗ್ರೇಟ್‌ ಅಂಡ್‌ ಸಸ್ಟೇನ್‌ (ಸಿಐಟಿಐಐಎಸ್‌) 2.0’ ಎಂಬ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಮೋದಿ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: GDP Data: ಇಗೋ ನೋಡಿ ಭಾರತದ ಆರ್ಥಿಕ ಬೆಳವಣಿಗೆ; ಕೊನೆಯ ಕ್ವಾರ್ಟರ್​ನಲ್ಲಿ ಶೇ 6.1, ಇಡೀ ವರ್ಷದಲ್ಲಿ ಶೇ. 7.2 ಜಿಡಿಪಿ ವೃದ್ಧಿ

ಸಿಐಟಿಐಐಎಸ್‌ 2.0 ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದರಿಂದ ನಮ್ಮ ನಗರಗಳಾದ್ಯಂತ ಆರ್ಥಿಕತೆ ಮತ್ತು ಹವಾಮಾನ ಸ್ಥಿತಿಸ್ಥಾಪಕತ್ವ ಹೆಚ್ಚಾಗಲಿದೆ ಎಂದು ಮೋದಿ ಅವರು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಿಂದ ನಾಲ್ಕು ವರ್ಷಗಳ ವರೆಗೆ ಈ ಯೋಜನೆ ಜಾರಿಯಲ್ಲಿರಲಿದ್ದು, ಫ್ರೆಂಚ್‌ ಅಭಿವೃದ್ಧಿ ಸಂಸ್ಥೆ (ಎಎಫ್‌ಡಿ), ಕೆಎಫ್‌ಡಬ್ಲ್ಯು, ಐರೋಪ್ಯ ಒಕ್ಕೂಟ ಹಾಗೂ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಅರ್ಬನ್‌ ಅಫೇರ್ಸ್‌ (ಎನ್‌ಐಯುಎ) ಸಹಭಾಗಿತ್ವದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!