AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ ಇಂಡಿಯಾ ಬಗ್ಗೆ ಸರ್ಕಾರ ತೆಗೆದುಕೊಂಡ ನಿರ್ಧಾರ ವೈಮಾನಿಕ ಕ್ಷೇತ್ರಕ್ಕೆ ಹೊಸ ಬಲ ನೀಡಲಿದೆ: ನರೇಂದ್ರ ಮೋದಿ

ಸರ್ಕಾರದ ಅಧೀನದಲ್ಲಿದ್ದ ಏರ್​ ಇಂಡಿಯಾ ಹಸ್ತಾಂತರ ಪ್ರಕ್ರಿಯೆಯು ದೇಶದ ವೈಮಾನಿಕ ಕ್ಷೇತ್ರಕ್ಕೆ ಹೊಸ ಬಲ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು

ಏರ್​ ಇಂಡಿಯಾ ಬಗ್ಗೆ ಸರ್ಕಾರ ತೆಗೆದುಕೊಂಡ ನಿರ್ಧಾರ ವೈಮಾನಿಕ ಕ್ಷೇತ್ರಕ್ಕೆ ಹೊಸ ಬಲ ನೀಡಲಿದೆ: ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Oct 20, 2021 | 4:40 PM

Share

ಕುಶಿನಗರ: ಏರ್ ಇಂಡಿಯಾ ಕಂಪನಿಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಟಾಟಾ ಗ್ರೂಪ್​ ಸಿದ್ಧವಾಗುತ್ತಿದೆ. ಸರ್ಕಾರದ ಅಧೀನದಲ್ಲಿದ್ದ ಏರ್​ ಇಂಡಿಯಾ ಹಸ್ತಾಂತರ ಪ್ರಕ್ರಿಯೆಯು ದೇಶದ ವೈಮಾನಿಕ ಕ್ಷೇತ್ರಕ್ಕೆ ಹೊಸ ಬಲ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಏರ್​ ಇಂಡಿಯಾದ ಯಶಸ್ವಿ ಬಿಡ್ಡರ್ ಆಗಿ ಟಾಟಾ ಗ್ರೂಪ್ ಹೊರಹೊಮ್ಮಿದ ನಂತರ ಪ್ರಧಾನಿ ವೈಮಾನಿಕ ಕ್ಷೇತ್ರದ ಬೆಳವಣಿಗೆ ಬಗ್ಗೆ ಹೇಳಿಕೆ ನೀಡಿದ್ದಾರೆ. ನಷ್ಟದಲ್ಲಿದ್ದ ಏರ್ ಇಂಡಿಯಾ ವಿಲೇವಾರಿ ಮಾಡುವ ಮೂಲಕ ಬಂಡವಾಳ ಹಿಂಪಡೆಯುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿತ್ತು.

ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಮಾತನಾಡಿದ ಮೋದಿ, ಏರ್​ ಇಂಡಿಯಾ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರವು ದೇಶದ ವೈಮಾನಿಕ ರಂಗವನ್ನು ವೃತ್ತಿಪರವಾಗಿ ನಡೆಸಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಏರ್​ ಇಂಡಿಯಾ ಖರೀದಿಗೆ ಟಾಟಾ ಗ್ರೂಪ್​ ಮಾಡಿದ್ದ ಬಿಡ್ ಅನ್ನು ಸರ್ಕಾರ ಒಪ್ಪಿಕೊಂಡಿತ್ತು. ಕಳೆದ ಅಕ್ಟೋಬರ್ 11ರಂದು ಟಾಟಾ ಗ್ರೂಪ್​ಗೆ ಹಸ್ತಾಂತರ ಪ್ರಸ್ತಾವನ್ನು ಸರ್ಕಾರ ಪತ್ರ ನೀಡಿತ್ತು. ಏರ್ ಇಂಡಿಯಾ ಖರೀದಿಗೆ ಟಾಟಾ ಗ್ರೂಪ್​ ₹ 2,700 ನಗದು ಪಾವತಿಸಲಿದೆ. ಇದರ ಜೊತೆಗೆ ಏರ್​ಇಂಡಿಯಾದ ಸಾಲದಲ್ಲಿ ₹ 15,300 ಕೋಟಿ ಮೊತ್ತದ ಜವಾಬ್ದಾರಿ ವಹಿಸಿಕೊಳ್ಳಲಿದೆ.

ಏರ್​ ಇಂಡಿಯಾ ಜೊತೆಗೆ ಕಡಿಮೆ ವೆಚ್ಚದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವ ಕಂಪೆನಿ ಏರ್​ ಇಂಡಿಯಾ ಎಕ್ಸ್​ಪ್ರೆಸ್​ ಮತ್ತು ವಿಮಾನ ನಿಲ್ದಾಣಗಳಲ್ಲಿರುವ ಏರ್​ ಇಂಡಿಯಾದ ಆಸ್ತಿ ನಿರ್ವಹಿಸುವ ‘ಅಸಿಟ್ಸ್​’ ಉದ್ಯಮದಲ್ಲಿ ಅರ್ಧದಷ್ಟು ಪಾಲನ್ನು ಟಾಟಾ ಕಂಪೆನಿ ತನ್ನ ಸುಪರ್ದಿಗೆ ಪಡೆದುಕೊಳ್ಳಲಿದೆ.

ಇದನ್ನೂ ಓದಿ: Air India: ಏರ್​ ಇಂಡಿಯಾದ ಬಾಕಿ ಬಿಲ್​ ಮೊತ್ತ 16 ಸಾವಿರ ಕೋಟಿ ರೂಪಾಯಿ AIAHLಗೆ ವರ್ಗಾಯಿಸಬೇಕಿದೆ ಸರ್ಕಾರ ಇದನ್ನೂ ಓದಿ: Air India Bid Winner: ವೆಲ್​ಕಮ್ ಬ್ಯಾಕ್ ಏರ್​ ಇಂಡಿಯಾ: ಬಿಡ್ ವಿಜೇತ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಭಾವುಕ ಪತ್ರ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ