AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಸೋಷಿಯಲ್ ಮೀಡಿಯಾ ಪ್ರೊಫೈಲ್​ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ
Narendra ModiImage Credit source: ANI
TV9 Web
| Edited By: |

Updated on:Jul 31, 2022 | 11:29 AM

Share

ನವದೆಹಲಿ: ಸೋಷಿಯಲ್ ಮೀಡಿಯಾ ಪ್ರೊಫೈಲ್​ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಮನ್​ಕಿ ಬಾತ್​ನಲ್ಲಿ ಈ ವಿಷಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್​ 2ರಿಂದ 15ನೇ ಆಗಸ್ಟ್​ವರೆಗೆ ನಾವೆಲ್ಲರೂ ನಮ್ಮ ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ಬದಲಿಸಿಕೊಳ್ಳೋಣವೇ? ತ್ರಿವರ್ಣದ ನಮ್ಮ ರಾಷ್ಟ್ರಧ್ವಜದೊಂದಿಗೆ ನಮ್ಮ ಪ್ರೊಫೈಲ್ ಚಿತ್ರ ಬರುವಂತೆ ಮಾಡೋಣ ಎಂದು ಕರೆ ನೀಡಿದ್ದಾರೆ.

ಭಾರತದ ವಿವಿಧೆಡೆ ಹಲವು ರೈಲು ನಿಲ್ದಾಣಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ನಾಮಕಾರಣ ಮಾಡಲಾಗಿದೆ. ಇವು ದೇಶದ ಸ್ವಾತಂತ್ರ್ಯ ಹೋರಾಟದ ಕಥೆ ಹೇಳುತ್ತವೆ. ನಾನು ವಿದ್ಯಾರ್ಥಿಗಳನ್ನು ಇಂಥ ರೈಲು ನಿಲ್ದಾಣಗಳಿಗೆ ಕರೆದೊಯ್ಯಬೇಕೆಂದು ಶಿಕ್ಷಕರನ್ನು ಆಗ್ರಹಿಸುತ್ತೇನೆ ಎಂದರು.

ಔಷಧ ಸಂಶೋಧನೆ ಕುರಿತು ಮಾತನಾಡಿರುವ ಅವರು, ಕೊರೊನಾ ಸಂಕಷ್ಟವು ಭಾರತೀಯ ಪದ್ಧತಿಯ ಔಷಧಿಗಳ ಸಂಶೋಧನೆಯಲ್ಲಿಯೂ ಹಲವು ಮಹತ್ವದ ಮೈಲಿಗಲ್ಲುಗಳಿಗೆ ಕಾರಣವಾಯಿತು. ಆಯುಷ್​ ಇಲಾಖೆಯು ನಿರ್ವಹಿಸುವ ಚಿಕಿತ್ಸಾ ಪದ್ಧತಿಯ ಬಗ್ಗೆ ಇಡೀ ಜಗತ್ತು ಗಮನ ಹರಿಸಿತು. ಆಯುರ್ವೇದದ ಬಗ್ಗೆ ಎಲ್ಲರೂ ಗಮನಹರಿಸಲು ಆರಂಭಿಸಿದರು ಎಂದರು.

ನಿಮ್ಮ ಇಷ್ಟದ ಹ್ಯಾಷ್​ಟ್ಯಾಗ್​ಗಳೊಂದಿಗೆ ಭಾರತದ ಅತ್ಯುತ್ತಮ ಸ್ಥಳೀಯ ಮೇಳ ಅಥವಾ ಸಂಪ್ರದಾಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ. ಸಂಸ್ಕೃತಿ ಸಚಿವಾಲಯವು ಇಂಥ ಚಿತ್ರಗಳನ್ನು ಹಂಚಿಕೊಳ್ಳುವವರಿಗಾಗಿ ಸ್ಪರ್ಧೆಯನ್ನು ಆಯೋಜಿಸಿದೆ. ಅತ್ಯುತ್ತಮ ಚಿತ್ರ ಹಂಚಿಕೊಳ್ಳುವವರಿಗೆ ಬಹುಮಾನವನ್ನೂ ಕೊಡಲಿದೆ ಎಂದು ಹೇಳಿದರು.

Published On - 11:20 am, Sun, 31 July 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?