AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಸೋಷಿಯಲ್ ಮೀಡಿಯಾ ಪ್ರೊಫೈಲ್​ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ
Narendra ModiImage Credit source: ANI
TV9 Web
| Updated By: ನಯನಾ ರಾಜೀವ್|

Updated on:Jul 31, 2022 | 11:29 AM

Share

ನವದೆಹಲಿ: ಸೋಷಿಯಲ್ ಮೀಡಿಯಾ ಪ್ರೊಫೈಲ್​ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಮನ್​ಕಿ ಬಾತ್​ನಲ್ಲಿ ಈ ವಿಷಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್​ 2ರಿಂದ 15ನೇ ಆಗಸ್ಟ್​ವರೆಗೆ ನಾವೆಲ್ಲರೂ ನಮ್ಮ ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ಬದಲಿಸಿಕೊಳ್ಳೋಣವೇ? ತ್ರಿವರ್ಣದ ನಮ್ಮ ರಾಷ್ಟ್ರಧ್ವಜದೊಂದಿಗೆ ನಮ್ಮ ಪ್ರೊಫೈಲ್ ಚಿತ್ರ ಬರುವಂತೆ ಮಾಡೋಣ ಎಂದು ಕರೆ ನೀಡಿದ್ದಾರೆ.

ಭಾರತದ ವಿವಿಧೆಡೆ ಹಲವು ರೈಲು ನಿಲ್ದಾಣಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ನಾಮಕಾರಣ ಮಾಡಲಾಗಿದೆ. ಇವು ದೇಶದ ಸ್ವಾತಂತ್ರ್ಯ ಹೋರಾಟದ ಕಥೆ ಹೇಳುತ್ತವೆ. ನಾನು ವಿದ್ಯಾರ್ಥಿಗಳನ್ನು ಇಂಥ ರೈಲು ನಿಲ್ದಾಣಗಳಿಗೆ ಕರೆದೊಯ್ಯಬೇಕೆಂದು ಶಿಕ್ಷಕರನ್ನು ಆಗ್ರಹಿಸುತ್ತೇನೆ ಎಂದರು.

ಔಷಧ ಸಂಶೋಧನೆ ಕುರಿತು ಮಾತನಾಡಿರುವ ಅವರು, ಕೊರೊನಾ ಸಂಕಷ್ಟವು ಭಾರತೀಯ ಪದ್ಧತಿಯ ಔಷಧಿಗಳ ಸಂಶೋಧನೆಯಲ್ಲಿಯೂ ಹಲವು ಮಹತ್ವದ ಮೈಲಿಗಲ್ಲುಗಳಿಗೆ ಕಾರಣವಾಯಿತು. ಆಯುಷ್​ ಇಲಾಖೆಯು ನಿರ್ವಹಿಸುವ ಚಿಕಿತ್ಸಾ ಪದ್ಧತಿಯ ಬಗ್ಗೆ ಇಡೀ ಜಗತ್ತು ಗಮನ ಹರಿಸಿತು. ಆಯುರ್ವೇದದ ಬಗ್ಗೆ ಎಲ್ಲರೂ ಗಮನಹರಿಸಲು ಆರಂಭಿಸಿದರು ಎಂದರು.

ನಿಮ್ಮ ಇಷ್ಟದ ಹ್ಯಾಷ್​ಟ್ಯಾಗ್​ಗಳೊಂದಿಗೆ ಭಾರತದ ಅತ್ಯುತ್ತಮ ಸ್ಥಳೀಯ ಮೇಳ ಅಥವಾ ಸಂಪ್ರದಾಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ. ಸಂಸ್ಕೃತಿ ಸಚಿವಾಲಯವು ಇಂಥ ಚಿತ್ರಗಳನ್ನು ಹಂಚಿಕೊಳ್ಳುವವರಿಗಾಗಿ ಸ್ಪರ್ಧೆಯನ್ನು ಆಯೋಜಿಸಿದೆ. ಅತ್ಯುತ್ತಮ ಚಿತ್ರ ಹಂಚಿಕೊಳ್ಳುವವರಿಗೆ ಬಹುಮಾನವನ್ನೂ ಕೊಡಲಿದೆ ಎಂದು ಹೇಳಿದರು.

Published On - 11:20 am, Sun, 31 July 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ