AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಸೋಷಿಯಲ್ ಮೀಡಿಯಾ ಪ್ರೊಫೈಲ್​ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ
Narendra ModiImage Credit source: ANI
TV9 Web
| Edited By: |

Updated on:Jul 31, 2022 | 11:29 AM

Share

ನವದೆಹಲಿ: ಸೋಷಿಯಲ್ ಮೀಡಿಯಾ ಪ್ರೊಫೈಲ್​ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಮನ್​ಕಿ ಬಾತ್​ನಲ್ಲಿ ಈ ವಿಷಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್​ 2ರಿಂದ 15ನೇ ಆಗಸ್ಟ್​ವರೆಗೆ ನಾವೆಲ್ಲರೂ ನಮ್ಮ ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ಬದಲಿಸಿಕೊಳ್ಳೋಣವೇ? ತ್ರಿವರ್ಣದ ನಮ್ಮ ರಾಷ್ಟ್ರಧ್ವಜದೊಂದಿಗೆ ನಮ್ಮ ಪ್ರೊಫೈಲ್ ಚಿತ್ರ ಬರುವಂತೆ ಮಾಡೋಣ ಎಂದು ಕರೆ ನೀಡಿದ್ದಾರೆ.

ಭಾರತದ ವಿವಿಧೆಡೆ ಹಲವು ರೈಲು ನಿಲ್ದಾಣಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ನಾಮಕಾರಣ ಮಾಡಲಾಗಿದೆ. ಇವು ದೇಶದ ಸ್ವಾತಂತ್ರ್ಯ ಹೋರಾಟದ ಕಥೆ ಹೇಳುತ್ತವೆ. ನಾನು ವಿದ್ಯಾರ್ಥಿಗಳನ್ನು ಇಂಥ ರೈಲು ನಿಲ್ದಾಣಗಳಿಗೆ ಕರೆದೊಯ್ಯಬೇಕೆಂದು ಶಿಕ್ಷಕರನ್ನು ಆಗ್ರಹಿಸುತ್ತೇನೆ ಎಂದರು.

ಔಷಧ ಸಂಶೋಧನೆ ಕುರಿತು ಮಾತನಾಡಿರುವ ಅವರು, ಕೊರೊನಾ ಸಂಕಷ್ಟವು ಭಾರತೀಯ ಪದ್ಧತಿಯ ಔಷಧಿಗಳ ಸಂಶೋಧನೆಯಲ್ಲಿಯೂ ಹಲವು ಮಹತ್ವದ ಮೈಲಿಗಲ್ಲುಗಳಿಗೆ ಕಾರಣವಾಯಿತು. ಆಯುಷ್​ ಇಲಾಖೆಯು ನಿರ್ವಹಿಸುವ ಚಿಕಿತ್ಸಾ ಪದ್ಧತಿಯ ಬಗ್ಗೆ ಇಡೀ ಜಗತ್ತು ಗಮನ ಹರಿಸಿತು. ಆಯುರ್ವೇದದ ಬಗ್ಗೆ ಎಲ್ಲರೂ ಗಮನಹರಿಸಲು ಆರಂಭಿಸಿದರು ಎಂದರು.

ನಿಮ್ಮ ಇಷ್ಟದ ಹ್ಯಾಷ್​ಟ್ಯಾಗ್​ಗಳೊಂದಿಗೆ ಭಾರತದ ಅತ್ಯುತ್ತಮ ಸ್ಥಳೀಯ ಮೇಳ ಅಥವಾ ಸಂಪ್ರದಾಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ. ಸಂಸ್ಕೃತಿ ಸಚಿವಾಲಯವು ಇಂಥ ಚಿತ್ರಗಳನ್ನು ಹಂಚಿಕೊಳ್ಳುವವರಿಗಾಗಿ ಸ್ಪರ್ಧೆಯನ್ನು ಆಯೋಜಿಸಿದೆ. ಅತ್ಯುತ್ತಮ ಚಿತ್ರ ಹಂಚಿಕೊಳ್ಳುವವರಿಗೆ ಬಹುಮಾನವನ್ನೂ ಕೊಡಲಿದೆ ಎಂದು ಹೇಳಿದರು.

Published On - 11:20 am, Sun, 31 July 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು