AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಇದೇ ಮೋದಿ ಗ್ಯಾರಂಟಿ ಎಂದ ಪ್ರಧಾನಿ

ಬಿಜೆಪಿಯು ಎರಡು ದಿನಗಳ ರಾಷ್ಟ್ರೀಯ ಸಮಾವೇಶವನ್ನು ಹಮ್ಮಿಕೊಂಡಿತ್ತು. ಬಿಜೆಪಿಯ 10 ವರ್ಷಗಳ ಆಡಳಿತದ ಸಾಧನೆಗಳನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ರಾಮಮಂದಿರ, ಕಲಂ 370 ರದ್ದತಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ, ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ, ತ್ರಿವಳಿ ತಲಾಖ್ ವಿರುದ್ಧದ ಕಾನೂನು ಮತ್ತು ಹೊಸ ಸಂಸತ್ತಿನ ಕಟ್ಟಡದ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದರು.

2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಇದೇ ಮೋದಿ ಗ್ಯಾರಂಟಿ ಎಂದ ಪ್ರಧಾನಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Feb 18, 2024 | 3:32 PM

Share

ನಮ್ಮ ಕನಸುಗಳು ಹಿರಿದಾಗಿದ್ದಾಗ ಅದಕ್ಕೆ ಮಾಡುವ ಸಂಕಲ್ಪಗಳು ಕೂಡ ದೊಡ್ಡದಾಗಿರುತ್ತದೆ. 20147ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಇದೇ ಮೋದಿ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಸಮಾವೇಶದ ಎರಡನೇ ದಿನ. ಇಂದು ಪಕ್ಷದ ಹಿರಿಯ ನಾಯಕರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮುಂದಿನ 100 ದಿನಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲ ಮತದಾರರನ್ನು ತಲುಪಬೇಕು. ಪ್ರತಿಯೊಂದು ವರ್ಗವನ್ನು ತಲುಪಬೇಕು. ಎಲ್ಲರ ವಿಶ್ವಾಸ ಗಳಿಸಬೇಕು. ಮತ್ತು ಇದು ಎಲ್ಲರ ಪ್ರಯತ್ನವಾಗಿದ್ದರೆ, ದೇಶಕ್ಕೆ ಸೇವೆ ಸಲ್ಲಿಸಲು ಬಿಜೆಪಿ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಪಡೆಯುತ್ತದೆ ಎಂದರು.

ಈ ಬಾರಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭೆ ಚುನಾವಣೆ ಗೆಲುವಿಗೆ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಕಾರ್ಯಕರ್ತರು ಮತ್ತು ಅಧಿಕಾರಿಗಳಲ್ಲಿ ಉತ್ಸಾಹ ತುಂಬಿದ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರು ವರ್ಷದ 24 ಗಂಟೆಗಳ ಕಾಲ ದೇಶ ಸೇವೆ ಮಾಡುತ್ತಿರುತ್ತಾರೆ.

ಆದರೆ ಈಗ ಮುಂದಿನ 100 ದಿನಗಳು ಹೊಸ ಶಕ್ತಿ, ಹೊಸ ಉತ್ಸಾಹ, ಹೊಸ ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕಿದೆ. ಪ್ರತಿಯೊಬ್ಬ ಹೊಸ ಮತದಾರ, ಪ್ರತಿಯೊಬ್ಬ ಫಲಾನುಭವಿ, ಪ್ರತಿವರ್ಗ, ಸಮಾಜ, ಪಂಥ, ಸಂಪ್ರದಾಯವನ್ನು ತಲುಪಬೇಕು. ಎಲ್ಲರ ವಿಶ್ವಾಸ ಗಳಿಸಬೇಕು ಎಂದು ಹೇಳಿದರು.

ಮತ್ತಷ್ಟು ಓದಿ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗ್ತಾರೆ, ದೇಶದಿಂದ ಭಯೋತ್ಪಾದನೆ, ನಕ್ಸಲಿಸಂ ಸಂಪೂರ್ಣವಾಗಿ ನಿರ್ಮೂಲನೆ ಮಾಡ್ತಾರೆ: ಅಮಿತ್ ಶಾ

ಕಳೆದ 10 ವರ್ಷಗಳಲ್ಲಿ ಬಿಜೆಪಿ ಸಾಧಿಸಿದ ವೇಗ, ದೊಡ್ಡ ಗುರಿಗಳನ್ನು ಸಾಧಿಸುವ ಧೈರ್ಯ ಅಭೂತಪೂರ್ವವಾಗಿದೆ. ಭಾರತವು ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಸಾಧಿಸಿದ ಎತ್ತರವು ದೇಶವನ್ನು ದೊಡ್ಡ ಸಂಕಲ್ಪದೊಂದಿಗೆ ಒಗ್ಗೂಡಿಸಿದೆ.ನಾವು ಭಾರತವನ್ನು ಅಭಿವೃದ್ಧಿಪಡಿಸಬೇಕು ಎಂಬುದು ನಮ್ಮ ಕನಸು ಮತ್ತು ಸಂಕಲ್ಪವಾಗಿದೆ.

ಇದೇ ಸಂದರ್ಭದಲ್ಲಿ ಆಚಾರ್ಯ  ವಿದ್ಯಾಸಾಗರ ಜೀ ಮಹಾರಾಜರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ಇದರೊಂದಿಗೆ ವಿದ್ಯಾಸಾಗರ್ ಅವರನ್ನು ಸ್ಮರಿಸುತ್ತಾ ಪ್ರಧಾನಿ ಮೋದಿ ಭಾವುಕರಾದರು. 10 ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ, ನಾವು ರಾಜಕೀಯಕ್ಕಾಗಿ ಅಲ್ಲ, ರಾಷ್ಟ್ರೀಯ ನೀತಿಗಾಗಿ ಹೊರಬಂದಿದ್ದೇವೆ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮಾಡಿದ ಕೆಲಸಗಳ ಕುರಿತು ಮಾತನಾಡಿದ ಮೋದಿ, ಇಂದು ಬಿಜೆಪಿ ಯುವ ಶಕ್ತಿ, ಮಹಿಳಾ ಶಕ್ತಿ, ಬಡವರ ಶಕ್ತಿ ಹಾಗೂ ರೈತರನ್ನು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಶಕ್ತಿಯನ್ನಾಗಿ ಮಾಡುತ್ತಿದೆ. ನಮ್ಮ ವಿರೋಧ ಪಕ್ಷಗಳಿಗೆ ಯೋಜನೆಗಳನ್ನು ಹೇಗೆ ಪೂರ್ಣಗೊಳಿಸಬೇಕು ಎಂದು ತಿಳಿದಿಲ್ಲದಿರಬಹುದು. ಆದರೆ ಸುಳ್ಳು ಭರವಸೆಗಳಿಗೆ ಅವರ ಬಳಿ ಉತ್ತರವಿಲ್ಲ.ಇಂದು ಎಲ್ಲಾ ರಾಜಕೀಯ ಪಕ್ಷಗಳು ಭರವಸೆ ನೀಡಲು ಹೆದರುತ್ತಿವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ