AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ: ಮೋದಿ

ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯನ್ನು ಟೀಕಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧ ವ್ಯಂಗ್ಯವಾಡಿದ್ದಾರೆ.

Narendra Modi: ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ: ಮೋದಿ
ಪ್ರಧಾನಿ ನರೇಂದ್ರ ಮೋದಿImage Credit source: Telegraph
ನಯನಾ ರಾಜೀವ್
|

Updated on: Mar 19, 2023 | 8:41 AM

Share

ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯನ್ನು ಟೀಕಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ‘ಇಂಡಿಯಾ ಟುಡೇ ಕಾನ್‌ಕ್ಲೇವ್‌’ನಲ್ಲಿ ಮಾತನಾಡಿದ ಮೋದಿ, ದೇಶವು ಆತ್ಮವಿಶ್ವಾಸ ಮತ್ತು ಸಂಕಲ್ಪದಿಂದ ತುಂಬಿರುವಾಗ ಮತ್ತು ವಿಶ್ವದ ಬುದ್ಧಿಜೀವಿಗಳು ಭಾರತದ ಬಗ್ಗೆ ಆಶಾವಾದಿಯಾಗಿರುವಾಗ, ನಿರಾಶಾವಾದದ ಬಗ್ಗೆ ಮಾತನಾಡುತ್ತಾರೆ, ದೇಶವನ್ನು ಕೆಟ್ಟದಾಗಿ ತೋರಿಸುತ್ತಾರೆ ಮತ್ತು ದೇಶದ ನೈತಿಕತೆಯನ್ನು ಘಾಸಿಗೊಳಿಸುತ್ತಾರೆ ಎಂದಿದ್ದಾರೆ.

ಯಾರನ್ನೂ ಹೆಸರಿಸದ ಮೋದಿ, ಕೆಲವು ಶುಭ ಕಾರ್ಯಗಳು ನಡೆಯುವಾಗ ದೃಷ್ಟಿಬೊಟ್ಟು ಇಡುವುದು ಸಂಪ್ರದಾಯ. ಹೀಗೆ ಹಲವು ಶುಭ ಕಾರ್ಯಗಳು ನಡೆಯುವಾಗ ಕೆಲವರು ಈ ಕಪ್ಪು ಟೀಕೆಗಳು ಇದ್ದೇ ಇರುತ್ತವೆ ಎಂದಿದ್ದಾರೆ.

ಮತ್ತಷ್ಟು ಓದಿ: Rahul Gandhi: ನಾನು ಲಂಡನ್​​ನಲ್ಲಿ ಭಾರತದ ವಿರುದ್ಧ ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ

ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳ ಯಶಸ್ಸು ಕೆಲವು ಜನರನ್ನು ನೋಯಿಸುತ್ತಿದೆ ಮತ್ತು ಅದಕ್ಕಾಗಿಯೇ ಅವರು ದಾಳಿ ಮಾಡುತ್ತಿದ್ದಾರೆ. ಇಂತಹ ದಾಳಿಗಳ ಹೊರತಾಗಿಯೂ ದೇಶವು ತನ್ನ ಗುರಿಗಳನ್ನು ಈಡೇರಿಸಿಕೊಳ್ಳುವತ್ತ ಧೈರ್ಯದಿಂದ ಮುನ್ನುಗ್ಗಲಿದೆ ಎಂಬ ವಿಶ್ವಾಸವಿದೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಲಂಡನ್​ಗೆ ತೆರಳಿದ್ದಾಗ, ನಮ್ಮ ಸಂಸತ್​ನಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ, ನಮಗೆ ಮಾತನಾಡಲು ಅವಕಾಶವೇ ಸಿಗುವುದಿಲ್ಲ, ಮಾತನಾಡುತ್ತಿರುವಾಗ ಆಗಾಗ ಮೈಕ್ ಆಫ್ ಮಾಡಲಾಗುತ್ತದೆ ಎಂದು ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ