AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ಹರಡುವುದಲ್ಲ, ಸ್ವಚ್ಛತೆಯು ನಿತ್ಯದ ಕಾಯಕವಾಗಬೇಕು: ನರೇಂದ್ರ ಮೋದಿ

Swachh Bharat Mission: ಎಲ್ಲೆಂದರಲ್ಲಿ ಕಸ ಹರಡುವುದಲ್ಲ ಸ್ವಚ್ಛತೆ ಕೂಡ ನಿತ್ಯದ ಕಾಯಕವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಚ್ಛಭಾರತ ಅಭಿಯಾನ 10 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನಾವು ನಿತ್ಯ ನಮ್ಮ ಪರಿಸರವನ್ನು ಒಂದಲ್ಲಾ ಒಂದು ರೀತಿಯಿಂದ ಹಾಳು ಮಾಡುತ್ತೇವೆ, ಆದರೆ ಪರಿಸರವನ್ನು ನಿತ್ಯ ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ಪಣ ತೊಡಬೇಕು.

ಕಸ ಹರಡುವುದಲ್ಲ, ಸ್ವಚ್ಛತೆಯು ನಿತ್ಯದ ಕಾಯಕವಾಗಬೇಕು: ನರೇಂದ್ರ ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Oct 02, 2024 | 11:41 AM

ಎಲ್ಲೆಂದರಲ್ಲಿ ಕಸ ಹರಡುವುದಲ್ಲ ಸ್ವಚ್ಛತೆ ಕೂಡ ನಿತ್ಯದ ಕಾಯಕವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಚ್ಛಭಾರತ ಅಭಿಯಾನ 10 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನಾವು ನಿತ್ಯ ನಮ್ಮ ಪರಿಸರವನ್ನು ಒಂದಲ್ಲಾ ಒಂದು ರೀತಿಯಿಂದ ಹಾಳು ಮಾಡುತ್ತೇವೆ, ಆದರೆ ಪರಿಸರವನ್ನು ನಿತ್ಯ ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ಪಣ ತೊಡಬೇಕು.

ಭಾರತ ಸರ್ಕಾರವು ದೇಶದ ಮೂಲೆ ಮೂಲೆಗೆ ಹೋಗಿ ಸ್ವಚ್ಛತೆಯ ಪಾಠ ಮಾಡಿ ಅಥವಾ ಸ್ಪರ್ಧೆ ನಡೆಸಲು ಸಾಧ್ಯವಿಲ್ಲ, ಅಲ್ಲಿಯ ಸ್ಥಳೀಯರು ಆಸ್ಪತ್ರೆಗಳು, ಶಾಲೆಗಳು, ಕಚೇರಿಗಳು, ಬಾವಿ, ನದಿಗಳನ್ನು ಶುಚಿಗೊಳಿಸುವುದು ಸೇರಿದಂತೆ ಸ್ವಚ್ಛತೆಗೆ ಸಂಬಂಧಿಸಿದಂತೆ ಸ್ಪರ್ಧೆ ಏರ್ಪಡಿಸಬೇಕು. ಆಗ ಪ್ರತಿಯೊಂದು ಬೀದಿ, ಪ್ರತಿಯೊಂದು ಹಳ್ಳಿಯೂ ಶುದ್ಧವಾಗಿರಲು ಸಾಧ್ಯ ಎಂದರು.

ಸ್ವಚ್ಛತೆಗೆ ಸಂಬಂಧಿಸಿದಂತೆ ನಿತ್ಯ ಸವಾಲುಗಳು ಹೆಚ್ಚಾಗುತ್ತಿವೆ, ಯೂಸ್​ ಆ್ಯಂಡ್ ಥ್ರೋ ಉತ್ಪನ್ನಗಳು ಕೂಡ ಹೆಚ್ಚಾಗಿವೆ, ಇದರಿಂದ ಎಲೆಕ್ಟ್ರಾನಿಕ್ ವೇಸ್ಟ್​ ಕೂಡ ಹೆಚ್ಚಾಗಲಿದ್ದು, ಅದರ ನಿರ್ವಹಣೆಗೆ ಯೋಜನೆ ರೂಪಿಸಲೇಬೇಕಿದೆ. ಇನ್ನು ನೀರಿನ ವಿಚಾರಕ್ಕೆ ಬಂದರೆ ನಮಾಮಿ ಗಂಎ ಅಭಿಯಾನದ ಮೂಲಕ ಗಂಗಾ ನದಿಯನ್ನು ಸ್ವಚ್ಛಗೊಳಿಸಲಾಗಿದೆ. ಅಮೃತ ಮಿಷನ್ ಅಡಿಯಲ್ಲಿ ಸಾಕಷ್ಟು ನದಿಗಳು ಶುಚಿಗೊಂಡಿವೆ. ನೀರಿನ ಬಳಕೆ ಕುರಿತು ಕೂಡ ಜನರಿಗೆ ಕಿವಿಮಾತು ಹೇಳಲೇಬೇಕಿದೆ.

ಮತ್ತಷ್ಟು ಓದಿ: ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ನೀವು ನಿಮ್ಮ ಮನೆ ನಿರ್ಮಾಣ ಮಾಡುವಾಗ ಬಳಕೆ ಮಾಡುವ ನೀರಿನ ಕುರಿತು ಎಚ್ಚರಿಕೆ ಇರಬೇಕು. ಹೆಚ್ಚಿನ ನೀರು ಪೋಲಾಗದಂತೆ ನೋಡಿಕೊಳ್ಳಬೇಕು.

ಸ್ವಚ್ಛತಾ ಕಾರ್ಯ ಇಂದು ನಾಳೆಯದಲ್ಲ ಮುಂದಿನ ಪೀಳಿಗೆಗೂ ಅರಿವು ಮೂಡಿಸಿ ಯುಗಯುಗಗಳವರೆಗೆ ಇದು ಮುಂದುವರೆಯುವಂತೆ ನೋಡಿಕೊಳ್ಳಬೇಕು ಇದರಿಂದ ದೇಶವು ಬೇಗ ವಿಕಸಿತ ಭಾರತವಾಗಿ ನಿರ್ಮಾಣವಾಗಲು ಸಾಧ್ಯ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ