TV9 Kannada News Live: ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ; ಹಿರಿಯ ಅಧಿಕಾರಿಗಳ ಹೆಸರು ಹೇಳಿದ ಆರೋಪಿ, ಈ ಜಿಲೆಟಿನ್​ ಕಡ್ಡಿಗಳು ಎಲ್ಲಿಂದ ಬಂತು ಗೊತ್ತಾ?

ಮೇ 11ರ ಪ್ರಮುಖ ಸುದ್ದಿಗಳು: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ, ಸ್ಫೋಟಕ ಪತ್ತೆ. ಚಿನ್ನ ಖರೀದಿಸಬೇಡಿ ಎಂಬ ಮೋದಿ ಮನವಿ. ತಮಿಳುನಾಡು ಚುನಾವಣೆಯಲ್ಲಿ ಗೆದ್ದ ಟಿವಿಕೆ ನಾಯಕ ಜೋಸೆಫ್ ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ 13ರಿಂದ ಚೀನಾಕ್ಕೆ ಭೇಟಿ, ಜಾಗತಿಕ ಗಮನ.

TV9 Kannada News Live: ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ; ಹಿರಿಯ ಅಧಿಕಾರಿಗಳ ಹೆಸರು ಹೇಳಿದ ಆರೋಪಿ, ಈ ಜಿಲೆಟಿನ್​ ಕಡ್ಡಿಗಳು ಎಲ್ಲಿಂದ ಬಂತು ಗೊತ್ತಾ?
ಸಾಂದರ್ಭಿಕ ಚಿತ್ರ

Updated on: May 11, 2026 | 1:31 PM

ಬೆಂಗಳೂರು, ಮೇ,11: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಇದೀಗ ಈ ಬಗ್ಗೆ ಮಹತ್ವ ಬೆಳವಣಿಗಳು ನಡೆದಿದೆ. ಈ ಪ್ರಕರಣಕ್ಕೆ ಎನ್​​ಐಎ ಎಂಟ್ರಿಯಾಗಿದೆ. ಇದರ ಜತೆಗೆ ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬನ್ನು ಬಂಧನ ಮಾಡಲಾಗಿದೆ. ಇದೀಗ ಆತ ತನಿಖೆ ವೇಳೆ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾನೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿರುವ ಟಿವಿಕೆ (TVK) ಪಕ್ಷದ ನಾಯಕ, ನಟ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಜಗತ್ತು ಬಿಕ್ಕಟ್ಟಿನಲ್ಲಿದ್ದು, ದೇಶದ ಹಿತಕ್ಕಾಗಿ ತ್ಯಾಗಗಳನ್ನು ಮಾಡಲು ಸಿದ್ಧರಾಗಿ ಎಂದು ಅವರು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಣನೀಯವಾಗಿ ಹೆಚ್ಚಾಗಿರುವುದರಿಂದ, ವಿದೇಶಿ ವಿನಿಮಯವನ್ನು ಉಳಿಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಈ ನಿಟ್ಟಿನಲ್ಲಿ, ನಾಗರಿಕರು ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇ 13 ರಿಂದ 15 ರವರೆಗೆ ಚೀನಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.

ಮೋದಿ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ: ಬಂಧಿತ ವಯಕ್ತಿಯಿಂದ ಸ್ಫೋಟಕ ಹೇಳಿಕೆ:

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಇದೀಗ ಈ ಬಗ್ಗೆ ಮಹತ್ವ ಬೆಳವಣಿಗಳು ನಡೆದಿದೆ. ಈ ಪ್ರಕರಣಕ್ಕೆ ಎನ್​​ಐಎ ಎಂಟ್ರಿಯಾಗಿದೆ. ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಇನ್ನು ಈ ವ್ಯಕ್ತಿಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಹೇಳಿದ್ದಾರೆ. ಈ ವ್ಯಕ್ತಿಯ ಹೆಸರು ಲೋಹಿತ್​​ ಎಂದು ಗುರುತಿಸಲಾಗಿದೆ. ಲೋಹಿತ್​​
ಆರೋಪಿ ಬಳಿ ಪೊಲೀಸ್ ಇಲಾಖೆ, ತನಿಖಾ ಸಂಸ್ಥೆಗಳ ನಂಬರ್ ಇದೆ. ಸುಖಾಸುಮ್ಮನೆ ಹುಸಿ ಬೆದರಿಕೆ ಕರೆ ಮಾಡಿದ್ದ ಮಾಹಿತಿ ಬಹಿರಂಗವಾಗಿದೆ. ವಿಚಾರಣೆ ವೇಳೆ ಆರೋಪಿ ದೊಡ್ಡ ದೊಡ್ಡವರ ಹೆಸರು ಹೇಳುತ್ತಾನೆ. ನನಗೆ ಅಜಿತ್ ದೋವಲ್ ಗೊತ್ತು, ಎನ್​ಐಎ ನಿರ್ದೇಶಕ ಗೊತ್ತು, ಸಿಬಿಐ ಡೈರೆಕ್ಟರ್ ಗೊತ್ತು, ಡಿಜಿ-ಐಜಿಪಿ, ಕಮಿಷನರ್ ಹೆಸರು ಹೇಳ್ತಾನೆ. ಎಲ್ಲಾ ತನಿಖಾ ಸಂಸ್ಥೆಗಳ ಕಂಟ್ರೊಲ್ ರೂಂ ನಂಬರ್ ಇಟ್ಟುಕೊಂಡಿದ್ದಾನೆ. ಮನಸ್ಸಿಗೆ ಬಂದ ಹಾಗೆ ಕರೆ ಮಾಡಿ ಬೆದರಿಕೆ ಸಂದೇಶಗಳನ್ನು ಹಾಕ್ತಾನೆ ಎಂದು ಹೇಳಲಾಗಿದೆ.

ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಆಹ್ವಾನ!:

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ (TVK) ನಾಯಕ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ. ಈ ಸುದೀರ್ಘ ಸಂಭಾಷಣೆಯ ತುಣುಕುಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಮೂಡಿಸಿವೆ.

ಇದನ್ನೂ ಓದಿ: ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಶಂಕಿತರ ಪತ್ತೆಗೆ ನೆರವಾದ ‘UPI’ ಪೇಮೆಂಟ್

ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ:

ಜಾಗತಿಕ ಇಂಧನ ಬಿಕ್ಕಟ್ಟು ಮತ್ತು ಆರ್ಥಿಕ ಏರಿಳಿತಗಳ ನಡುವೆ ಭಾರತದ ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕೆಲವು ಮಹತ್ವದ ಮತ್ತು ಕಟ್ಟುನಿಟ್ಟಾದ ಸಲಹೆಗಳನ್ನು ನೀಡಿದ್ದಾರೆ. ವಿದೇಶಿ ವಿನಿಮಯವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕನು ಸಣ್ಣ ತ್ಯಾಗಗಳಿಗೆ ಸಿದ್ಧರಾಗಬೇಕೆಂದು ಅವರು ವಿನಂತಿಸಿದ್ದಾರೆ.

ಟ್ರಂಪ್-ಕ್ಸಿ ಜಿನ್‌ಪಿಂಗ್ ಭೇಟಿಯ ಮೇಲೆ ಜಗತ್ತಿನ ಕಣ್ಣು!:

ಜಾಗತಿಕ ರಾಜತಾಂತ್ರಿಕತೆಯಲ್ಲಿ ಮಹತ್ವದ ಬದಲಾವಣೆಯಾಗುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇ 13 ರಿಂದ 15 ರವರೆಗೆ ಚೀನಾಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ವಿಶೇಷ ಆಹ್ವಾನದ ಮೇರೆಗೆ ಈ ಭೇಟಿ ನಡೆಯುತ್ತಿದ್ದು, ಕಳೆದ ಒಂಬತ್ತು ವರ್ಷಗಳಲ್ಲಿ ಅಮೆರಿಕದ ಅಧ್ಯಕ್ಷರೊಬ್ಬರು ಚೀನಾಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

 

 

 

 

Published On - 1:28 pm, Mon, 11 May 26

Follow Us