AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಬರುವನು…ಬರುವನು ಸ್ವಾತಿ ಮಿಶ್ರಾ ಹಾಡಿಗೆ ಮೋದಿ ಫಿದಾ

ರಾಮಲಲ್ಲಾನ್ನು ಅಯೋಧ್ಯೆಗೆ ಸ್ವಾಗತಿಸುವ ಹಾಡೊಂದನ್ನು ಮೋದಿ ಅವರು ಹಂಚಿಕೊಂಡಿದ್ದಾರೆ. ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಸ್ವಾತಿ ಮಿಶ್ರಾ ಅವರ ರಾಮ್​​​​ ಆಯೇಂಗೆ.. ಆಯೇಂಗೆ ಎಂಬ ಹಾಡಿಗೆ ಪ್ರಧಾನಿ ಮೋದಿ ಫಿದಾ ಆಗಿದ್ದಾರೆ.

ರಾಮ ಬರುವನು...ಬರುವನು ಸ್ವಾತಿ ಮಿಶ್ರಾ ಹಾಡಿಗೆ ಮೋದಿ ಫಿದಾ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 03, 2024 | 10:59 AM

ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ (Ram Lala Pran Pratistha) ನೆರವೇರಲಿದೆ. ಈಗಾಗಲೇ ಎಲ್ಲ ಸಿದ್ದತೆಗಳನ್ನು ರಾಮಜನ್ಮ ಭೂಮಿ ಟ್ರಸ್ಟ್​​​​​ ನಡೆಸಿದೆ. ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮನ ಜಪ ಈಡಿ ದೇಶದಲ್ಲಿ ಹಬ್ಬಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಕರ್ನಾಟಕದ ಮೈಸೂರಿನ ಶಿಲ್ಪಿ ಕೆತ್ತಿದ ಮೂರ್ತಿಯೇ ಫೈನಲ್​​​ ಆಗಿದ್ದು ಇದು ಇನ್ನು ವಿಶೇಷವಾಗಿದೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (NarendraModi)  ಅವರು ಅಯೋಧ್ಯೆಯಲ್ಲಿ ಅನೇಕ ಕಾರ್ಯಕ್ರಮಗಳಿಗೆ ಹಾಗೂ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದರ ನಡುವೆ ಮೋದಿ ಅವರು ಒಂದು ವಿಶೇಷ ವಿಚಾರವೊಂದನ್ನು ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಲಲ್ಲಾನ್ನು ಅಯೋಧ್ಯೆಗೆ ಸ್ವಾಗತಿಸುವ ಹಾಡೊಂದನ್ನು ಮೋದಿ ಅವರು ಹಂಚಿಕೊಂಡಿದ್ದಾರೆ. ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಸ್ವಾತಿ ಮಿಶ್ರಾ ಅವರ ರಾಮ್​​​​ ಆಯೇಂಗೆ.. ಆಯೇಂಗೆ ಎಂಬ ಹಾಡಿಗೆ ಪ್ರಧಾನಿ ಮೋದಿ ಫಿದಾ ಆಗಿದ್ದಾರೆ

ಈ ಹಾಡು ಎಲ್ಲರನ್ನೂ ಒಂದು ಬಾರಿ ಮಂತ್ರಮುಗ್ಧಗೊಳಿಸುತ್ತದೆ ಎಂದು ಹೇಳಿದ್ದಾರೆ. ಹಾಡಿನ ಯೂಟ್ಯೂಬ್​​​​ ಲಿಂಕ್​ನ್ನು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಶ್ರೀ ರಾಮಲಲ್ಲಾ ಅವರನ್ನು ಸ್ವಾಗತಿಸುವ ಸ್ವಾತಿ ಮಿಶ್ರಾ ಜಿಯವರ ಈ ಭಕ್ತಿ ಭಜನೆ ಮಂತ್ರಮುಗ್ಧಗೊಳಿಸುತ್ತದೆ ಎಂದು ಎಕ್ಸ್​​ನಲ್ಲಿ ಮೋದಿ ಬರೆದುಕೊಂಡಿದ್ದಾರೆ.

ಸ್ವಾತಿ ಮಿಶ್ರಾ ಬಿಹಾರದ ಮೂಲದವರು, ಖ್ಯಾತ ಹಾಡುಗಾರ್ತಿಯಾಗಿರುವ ಸ್ವಾತಿ ಮಿಶ್ರಾ, ತಮ್ಮ ಯೂಟ್ಯೂಬ್​​​​ ಚಾನಲ್​​ನಲ್ಲಿ ಅನೇಕ ಇಂತಹ ಭಕ್ತಿಗೀತೆಗಳನ್ನು ಹಂಚಿಕೊಂಡಿದ್ದಾರೆ. ಇವರ ಹಲವು ಹಾಡುಗಳು ಭಾರೀ ವೈರಲ್​​​ ಆಗಿವೆ. ಇದೀಗ ಅಯೋಧ್ಯೆ ರಾಮಮಂದಿರಕ್ಕೆ ರಾಮಲಲ್ಲಾನ್ನು ಸ್ವಾಗತಿಸುವ ಹಾಡನ್ನು ಹಾಡಿದ್ದಾರೆ. ಇದನ್ನು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸಾವಿರ ವರ್ಷಗಳವರೆಗೆ ದುರಸ್ತಿ ಅಗತ್ಯವಿಲ್ಲ, ಭೂಕಂಪಕ್ಕೂ ಅಲ್ಲಾಡಲ್ಲ ರಾಮ ಮಂದಿರ

ಸ್ವಾತಿ ಮಿಶ್ರಾ ಸದ್ಯ ಮುಂಬೈನಲ್ಲಿದ್ದು ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ರಾಮಲಲ್ಲಾನ ಬಗ್ಗೆ ಹಾಡಿರುವ ಈ ಹಾಡು ಅಷ್ಟೊಂದು ವೈರಲ್​​ ಆಗಿರಲಿಲ್ಲ, ಆದರೆ ಇದೀಗ ಭಾರೀ ವೈರಲ್​​ ಆಗಿದೆ. ಇದನ್ನು ಪ್ರಧಾನಿ ಮೋದಿ ಕೂಡ ಹಂಚಿಕೊಂಡಿರುವುದು ಇನ್ನು ವಿಶೇಷವಾಗಿದ್ದು, ಇದರಿಂದ ಸ್ವಾತಿ ಮಿಶ್ರಾ ಅವರಿಗೆ ಮತ್ತಷ್ಟು ಪೋತ್ಸಾಹ ನೀಡಿದ್ದಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ