Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಬರುವನು…ಬರುವನು ಸ್ವಾತಿ ಮಿಶ್ರಾ ಹಾಡಿಗೆ ಮೋದಿ ಫಿದಾ

ರಾಮಲಲ್ಲಾನ್ನು ಅಯೋಧ್ಯೆಗೆ ಸ್ವಾಗತಿಸುವ ಹಾಡೊಂದನ್ನು ಮೋದಿ ಅವರು ಹಂಚಿಕೊಂಡಿದ್ದಾರೆ. ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಸ್ವಾತಿ ಮಿಶ್ರಾ ಅವರ ರಾಮ್​​​​ ಆಯೇಂಗೆ.. ಆಯೇಂಗೆ ಎಂಬ ಹಾಡಿಗೆ ಪ್ರಧಾನಿ ಮೋದಿ ಫಿದಾ ಆಗಿದ್ದಾರೆ.

ರಾಮ ಬರುವನು...ಬರುವನು ಸ್ವಾತಿ ಮಿಶ್ರಾ ಹಾಡಿಗೆ ಮೋದಿ ಫಿದಾ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 03, 2024 | 10:59 AM

ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ (Ram Lala Pran Pratistha) ನೆರವೇರಲಿದೆ. ಈಗಾಗಲೇ ಎಲ್ಲ ಸಿದ್ದತೆಗಳನ್ನು ರಾಮಜನ್ಮ ಭೂಮಿ ಟ್ರಸ್ಟ್​​​​​ ನಡೆಸಿದೆ. ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮನ ಜಪ ಈಡಿ ದೇಶದಲ್ಲಿ ಹಬ್ಬಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಕರ್ನಾಟಕದ ಮೈಸೂರಿನ ಶಿಲ್ಪಿ ಕೆತ್ತಿದ ಮೂರ್ತಿಯೇ ಫೈನಲ್​​​ ಆಗಿದ್ದು ಇದು ಇನ್ನು ವಿಶೇಷವಾಗಿದೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (NarendraModi)  ಅವರು ಅಯೋಧ್ಯೆಯಲ್ಲಿ ಅನೇಕ ಕಾರ್ಯಕ್ರಮಗಳಿಗೆ ಹಾಗೂ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದರ ನಡುವೆ ಮೋದಿ ಅವರು ಒಂದು ವಿಶೇಷ ವಿಚಾರವೊಂದನ್ನು ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಲಲ್ಲಾನ್ನು ಅಯೋಧ್ಯೆಗೆ ಸ್ವಾಗತಿಸುವ ಹಾಡೊಂದನ್ನು ಮೋದಿ ಅವರು ಹಂಚಿಕೊಂಡಿದ್ದಾರೆ. ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಸ್ವಾತಿ ಮಿಶ್ರಾ ಅವರ ರಾಮ್​​​​ ಆಯೇಂಗೆ.. ಆಯೇಂಗೆ ಎಂಬ ಹಾಡಿಗೆ ಪ್ರಧಾನಿ ಮೋದಿ ಫಿದಾ ಆಗಿದ್ದಾರೆ

ಈ ಹಾಡು ಎಲ್ಲರನ್ನೂ ಒಂದು ಬಾರಿ ಮಂತ್ರಮುಗ್ಧಗೊಳಿಸುತ್ತದೆ ಎಂದು ಹೇಳಿದ್ದಾರೆ. ಹಾಡಿನ ಯೂಟ್ಯೂಬ್​​​​ ಲಿಂಕ್​ನ್ನು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಶ್ರೀ ರಾಮಲಲ್ಲಾ ಅವರನ್ನು ಸ್ವಾಗತಿಸುವ ಸ್ವಾತಿ ಮಿಶ್ರಾ ಜಿಯವರ ಈ ಭಕ್ತಿ ಭಜನೆ ಮಂತ್ರಮುಗ್ಧಗೊಳಿಸುತ್ತದೆ ಎಂದು ಎಕ್ಸ್​​ನಲ್ಲಿ ಮೋದಿ ಬರೆದುಕೊಂಡಿದ್ದಾರೆ.

ಸ್ವಾತಿ ಮಿಶ್ರಾ ಬಿಹಾರದ ಮೂಲದವರು, ಖ್ಯಾತ ಹಾಡುಗಾರ್ತಿಯಾಗಿರುವ ಸ್ವಾತಿ ಮಿಶ್ರಾ, ತಮ್ಮ ಯೂಟ್ಯೂಬ್​​​​ ಚಾನಲ್​​ನಲ್ಲಿ ಅನೇಕ ಇಂತಹ ಭಕ್ತಿಗೀತೆಗಳನ್ನು ಹಂಚಿಕೊಂಡಿದ್ದಾರೆ. ಇವರ ಹಲವು ಹಾಡುಗಳು ಭಾರೀ ವೈರಲ್​​​ ಆಗಿವೆ. ಇದೀಗ ಅಯೋಧ್ಯೆ ರಾಮಮಂದಿರಕ್ಕೆ ರಾಮಲಲ್ಲಾನ್ನು ಸ್ವಾಗತಿಸುವ ಹಾಡನ್ನು ಹಾಡಿದ್ದಾರೆ. ಇದನ್ನು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸಾವಿರ ವರ್ಷಗಳವರೆಗೆ ದುರಸ್ತಿ ಅಗತ್ಯವಿಲ್ಲ, ಭೂಕಂಪಕ್ಕೂ ಅಲ್ಲಾಡಲ್ಲ ರಾಮ ಮಂದಿರ

ಸ್ವಾತಿ ಮಿಶ್ರಾ ಸದ್ಯ ಮುಂಬೈನಲ್ಲಿದ್ದು ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ರಾಮಲಲ್ಲಾನ ಬಗ್ಗೆ ಹಾಡಿರುವ ಈ ಹಾಡು ಅಷ್ಟೊಂದು ವೈರಲ್​​ ಆಗಿರಲಿಲ್ಲ, ಆದರೆ ಇದೀಗ ಭಾರೀ ವೈರಲ್​​ ಆಗಿದೆ. ಇದನ್ನು ಪ್ರಧಾನಿ ಮೋದಿ ಕೂಡ ಹಂಚಿಕೊಂಡಿರುವುದು ಇನ್ನು ವಿಶೇಷವಾಗಿದ್ದು, ಇದರಿಂದ ಸ್ವಾತಿ ಮಿಶ್ರಾ ಅವರಿಗೆ ಮತ್ತಷ್ಟು ಪೋತ್ಸಾಹ ನೀಡಿದ್ದಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್