ರಾಮ ಬರುವನು…ಬರುವನು ಸ್ವಾತಿ ಮಿಶ್ರಾ ಹಾಡಿಗೆ ಮೋದಿ ಫಿದಾ

ರಾಮಲಲ್ಲಾನ್ನು ಅಯೋಧ್ಯೆಗೆ ಸ್ವಾಗತಿಸುವ ಹಾಡೊಂದನ್ನು ಮೋದಿ ಅವರು ಹಂಚಿಕೊಂಡಿದ್ದಾರೆ. ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಸ್ವಾತಿ ಮಿಶ್ರಾ ಅವರ ರಾಮ್​​​​ ಆಯೇಂಗೆ.. ಆಯೇಂಗೆ ಎಂಬ ಹಾಡಿಗೆ ಪ್ರಧಾನಿ ಮೋದಿ ಫಿದಾ ಆಗಿದ್ದಾರೆ.

ರಾಮ ಬರುವನು...ಬರುವನು ಸ್ವಾತಿ ಮಿಶ್ರಾ ಹಾಡಿಗೆ ಮೋದಿ ಫಿದಾ

Updated on: Jan 03, 2024 | 10:59 AM

ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ (Ram Lala Pran Pratistha) ನೆರವೇರಲಿದೆ. ಈಗಾಗಲೇ ಎಲ್ಲ ಸಿದ್ದತೆಗಳನ್ನು ರಾಮಜನ್ಮ ಭೂಮಿ ಟ್ರಸ್ಟ್​​​​​ ನಡೆಸಿದೆ. ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮನ ಜಪ ಈಡಿ ದೇಶದಲ್ಲಿ ಹಬ್ಬಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಕರ್ನಾಟಕದ ಮೈಸೂರಿನ ಶಿಲ್ಪಿ ಕೆತ್ತಿದ ಮೂರ್ತಿಯೇ ಫೈನಲ್​​​ ಆಗಿದ್ದು ಇದು ಇನ್ನು ವಿಶೇಷವಾಗಿದೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (NarendraModi)  ಅವರು ಅಯೋಧ್ಯೆಯಲ್ಲಿ ಅನೇಕ ಕಾರ್ಯಕ್ರಮಗಳಿಗೆ ಹಾಗೂ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದರ ನಡುವೆ ಮೋದಿ ಅವರು ಒಂದು ವಿಶೇಷ ವಿಚಾರವೊಂದನ್ನು ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಲಲ್ಲಾನ್ನು ಅಯೋಧ್ಯೆಗೆ ಸ್ವಾಗತಿಸುವ ಹಾಡೊಂದನ್ನು ಮೋದಿ ಅವರು ಹಂಚಿಕೊಂಡಿದ್ದಾರೆ. ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಸ್ವಾತಿ ಮಿಶ್ರಾ ಅವರ ರಾಮ್​​​​ ಆಯೇಂಗೆ.. ಆಯೇಂಗೆ ಎಂಬ ಹಾಡಿಗೆ ಪ್ರಧಾನಿ ಮೋದಿ ಫಿದಾ ಆಗಿದ್ದಾರೆ

ಈ ಹಾಡು ಎಲ್ಲರನ್ನೂ ಒಂದು ಬಾರಿ ಮಂತ್ರಮುಗ್ಧಗೊಳಿಸುತ್ತದೆ ಎಂದು ಹೇಳಿದ್ದಾರೆ. ಹಾಡಿನ ಯೂಟ್ಯೂಬ್​​​​ ಲಿಂಕ್​ನ್ನು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಶ್ರೀ ರಾಮಲಲ್ಲಾ ಅವರನ್ನು ಸ್ವಾಗತಿಸುವ ಸ್ವಾತಿ ಮಿಶ್ರಾ ಜಿಯವರ ಈ ಭಕ್ತಿ ಭಜನೆ ಮಂತ್ರಮುಗ್ಧಗೊಳಿಸುತ್ತದೆ ಎಂದು ಎಕ್ಸ್​​ನಲ್ಲಿ ಮೋದಿ ಬರೆದುಕೊಂಡಿದ್ದಾರೆ.

ಸ್ವಾತಿ ಮಿಶ್ರಾ ಬಿಹಾರದ ಮೂಲದವರು, ಖ್ಯಾತ ಹಾಡುಗಾರ್ತಿಯಾಗಿರುವ ಸ್ವಾತಿ ಮಿಶ್ರಾ, ತಮ್ಮ ಯೂಟ್ಯೂಬ್​​​​ ಚಾನಲ್​​ನಲ್ಲಿ ಅನೇಕ ಇಂತಹ ಭಕ್ತಿಗೀತೆಗಳನ್ನು ಹಂಚಿಕೊಂಡಿದ್ದಾರೆ. ಇವರ ಹಲವು ಹಾಡುಗಳು ಭಾರೀ ವೈರಲ್​​​ ಆಗಿವೆ. ಇದೀಗ ಅಯೋಧ್ಯೆ ರಾಮಮಂದಿರಕ್ಕೆ ರಾಮಲಲ್ಲಾನ್ನು ಸ್ವಾಗತಿಸುವ ಹಾಡನ್ನು ಹಾಡಿದ್ದಾರೆ. ಇದನ್ನು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸಾವಿರ ವರ್ಷಗಳವರೆಗೆ ದುರಸ್ತಿ ಅಗತ್ಯವಿಲ್ಲ, ಭೂಕಂಪಕ್ಕೂ ಅಲ್ಲಾಡಲ್ಲ ರಾಮ ಮಂದಿರ

ಸ್ವಾತಿ ಮಿಶ್ರಾ ಸದ್ಯ ಮುಂಬೈನಲ್ಲಿದ್ದು ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ರಾಮಲಲ್ಲಾನ ಬಗ್ಗೆ ಹಾಡಿರುವ ಈ ಹಾಡು ಅಷ್ಟೊಂದು ವೈರಲ್​​ ಆಗಿರಲಿಲ್ಲ, ಆದರೆ ಇದೀಗ ಭಾರೀ ವೈರಲ್​​ ಆಗಿದೆ. ಇದನ್ನು ಪ್ರಧಾನಿ ಮೋದಿ ಕೂಡ ಹಂಚಿಕೊಂಡಿರುವುದು ಇನ್ನು ವಿಶೇಷವಾಗಿದ್ದು, ಇದರಿಂದ ಸ್ವಾತಿ ಮಿಶ್ರಾ ಅವರಿಗೆ ಮತ್ತಷ್ಟು ಪೋತ್ಸಾಹ ನೀಡಿದ್ದಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us