ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ.

ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿImage Credit source: India Today
Follow us
|

Updated on: Apr 25, 2023 | 10:53 AM

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ. ಅಷ್ಟೇ ಅಲ್ಲದೆ, ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ.

ಆಕೆಯ ತಾಯಿ ಹಾಡಿನ ಸಾಲುಗಳನ್ನು ಹೇಳುತ್ತಿದ್ದಂತೆ ಬಾಲಕಿ ಕೂಡ ಪಿಯಾನೋದಲ್ಲಿ ಅದೇ ಹಾಡನ್ನು ನುಡಿಸುವ ಮೂಲಕ ಲಕ್ಷಾಂತರ ಮಂದಿಯ ಶ್ಲಾಘನೆಗೆ ಪಾತ್ರವಾಗಿದ್ದಾಳೆ. ಈ ಹಾಡನ್ನು ಕವಿ ಕೆಎಸ್​ ನರಸಿಂಹಸ್ವಾಮಿಯವರು ಬರೆದಿದ್ದಾರೆ.

ಈ ವಿಡಿಯೋದಲ್ಲಿರುವ ಬಾಲಕಿಯ ಹೆಸರು ಶಾಲ್ಮಲಿ. ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಅನಂತ್​ ಕುಮಾರ್ ಎಂಬುವವರು ಹಂಚಿಕೊಂಡಿದ್ದರು. ಇದನ್ನು ಪ್ರಧಾನಿ ನರೇಂದ್ರ ಮೋದಿಯವರು ಗಮನಿಸಿ ಮಗುವ ಪ್ರತಿಭೆಯನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಓದಿ: Viral Video: ಪ್ಲೀಸ್ ಮೋದಿ ಜೀ: ಮುದ್ದು ಮುದ್ದಾಗಿ ಮಾತನಾಡುತ್ತಲೇ ಪ್ರಧಾನಿ ಮೋದಿಯವರ ಬಳಿ ಬೇಡಿಕೆ ಇಟ್ಟ ಜಮ್ಮುವಿನ ಪೋರಿ

ಈ ಪುಟ್ಟ ಬಾಲಕಿಯ ಪ್ರತಿಭೆ ನಾಡಿನ ಜನತೆಯನ್ನು ಮಂತ್ರಮುಗ್ಧಗೊಳಿಸಿದೆ, ಕಾಮೆಂಟ್ ವಿಭಾಗವು ಹಾರ್ಟ್​ ಎಮೋಜಿಯಿಂದ ತುಂಬಿ ಹೋಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ