AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ.

ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿImage Credit source: India Today
ನಯನಾ ರಾಜೀವ್
|

Updated on: Apr 25, 2023 | 10:53 AM

Share

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ. ಅಷ್ಟೇ ಅಲ್ಲದೆ, ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ.

ಆಕೆಯ ತಾಯಿ ಹಾಡಿನ ಸಾಲುಗಳನ್ನು ಹೇಳುತ್ತಿದ್ದಂತೆ ಬಾಲಕಿ ಕೂಡ ಪಿಯಾನೋದಲ್ಲಿ ಅದೇ ಹಾಡನ್ನು ನುಡಿಸುವ ಮೂಲಕ ಲಕ್ಷಾಂತರ ಮಂದಿಯ ಶ್ಲಾಘನೆಗೆ ಪಾತ್ರವಾಗಿದ್ದಾಳೆ. ಈ ಹಾಡನ್ನು ಕವಿ ಕೆಎಸ್​ ನರಸಿಂಹಸ್ವಾಮಿಯವರು ಬರೆದಿದ್ದಾರೆ.

ಈ ವಿಡಿಯೋದಲ್ಲಿರುವ ಬಾಲಕಿಯ ಹೆಸರು ಶಾಲ್ಮಲಿ. ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಅನಂತ್​ ಕುಮಾರ್ ಎಂಬುವವರು ಹಂಚಿಕೊಂಡಿದ್ದರು. ಇದನ್ನು ಪ್ರಧಾನಿ ನರೇಂದ್ರ ಮೋದಿಯವರು ಗಮನಿಸಿ ಮಗುವ ಪ್ರತಿಭೆಯನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಓದಿ: Viral Video: ಪ್ಲೀಸ್ ಮೋದಿ ಜೀ: ಮುದ್ದು ಮುದ್ದಾಗಿ ಮಾತನಾಡುತ್ತಲೇ ಪ್ರಧಾನಿ ಮೋದಿಯವರ ಬಳಿ ಬೇಡಿಕೆ ಇಟ್ಟ ಜಮ್ಮುವಿನ ಪೋರಿ

ಈ ಪುಟ್ಟ ಬಾಲಕಿಯ ಪ್ರತಿಭೆ ನಾಡಿನ ಜನತೆಯನ್ನು ಮಂತ್ರಮುಗ್ಧಗೊಳಿಸಿದೆ, ಕಾಮೆಂಟ್ ವಿಭಾಗವು ಹಾರ್ಟ್​ ಎಮೋಜಿಯಿಂದ ತುಂಬಿ ಹೋಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು