AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದ ಈ ಗ್ರಾಮ ಸಿಕ್ತು ಮೊಬೈಲ್​ ನೆಟ್​ವರ್ಕ್​, ದೂರವಾಣಿ ಮೂಲಕ ಗ್ರಾಮಸ್ಥರ ಮಾತು ಆಲಿಸಿದ ಮೋದಿ

ಹಿಮಾಚಲ ಪ್ರದೇಶದ ಗಿಯು ಗ್ರಾಮಕ್ಕೆ ಇಂದು(ಏಪ್ರಿಲ್ 18) ಮೊದಲ ಬಾರಿಗೆ ಮೊಬೈಲ್ ನೆಟ್‌ವರ್ಕ್ ದೊರೆತಿದ್ದು, ಗ್ರಾಮಸ್ಥರ ಸಂತಸ ಇಮ್ಮಡಿಗೊಂಡಿದೆ. ಇನ್ನು ಇದೇ ಮೊದಲ ಬಾರಿ ಮೊಬೈಲ್​ ನೆಟ್​ವರ್ಕ್​ ಸಿಕ್ಕ ಬೆನ್ನಲ್ಲೇ ಗಿಯು ಗ್ರಾಮಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಮಾತುಕತೆ ನಡೆಸಿದರು.

ಹಿಮಾಚಲ ಪ್ರದೇಶದ ಈ ಗ್ರಾಮ ಸಿಕ್ತು ಮೊಬೈಲ್​ ನೆಟ್​ವರ್ಕ್​, ದೂರವಾಣಿ ಮೂಲಕ ಗ್ರಾಮಸ್ಥರ ಮಾತು ಆಲಿಸಿದ ಮೋದಿ
TV9 Web
| Edited By: |

Updated on: Apr 18, 2024 | 11:14 PM

Share

ನವದೆಹಲಿ (ಏಪ್ರಿಲ್ 18): ಮೊಬೈಲ್ ನೆಟ್​ವರ್ಕ್ ಇಲ್ಲದೆ ಪರದಾಡುತ್ತಿದ್ದ ಹಿಮಾಚಲ ಪ್ರದೇಶದ ಗಿಯು ಗ್ರಾಮಕ್ಕೆ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗಿಯು ಗ್ರಾಮಕ್ಕೆ ಇಂದು(ಏಪ್ರಿಲ್ 18) ಮೊದಲ ಬಾರಿಗೆ ಮೊಬೈಲ್ ನೆಟ್‌ವರ್ಕ್ ಸಂಪರ್ಕ ದೊರೆತಿದೆ. ಇಷ್ಟು ವರ್ಷಗಳ ಕಾಲ ಮೊಬೈಲ್ ನೆಟ್​ವರ್ಕ್​ ಇಲ್ಲದೇ ವಾಸಿಸುತ್ತಿದ್ದರು. ಒಂದು ವೇಳೆ ದೂರುವಾಣಿ ಕರೆ ಮಾಡಬೇಕಾದರೆ ಸುಮಾರು 8 ಕಿ.ಮೀ ಹೋಗಬೇಕಿತ್ತು. ಇದೀಗ ಮೋದಿ ಸರ್ಕಾರ, ಗಿಯು ಗ್ರಾಮಕ್ಕೆ ನೆಟ್​ವರ್ಕ್​ ಸಂಪರ್ಕ ಕಲ್ಪಿಸಿದ್ದು, ಗ್ರಾಮಸ್ಥರು ಸಂತೋಷಗೊಂಡಿದ್ದಾರೆ. ಇನ್ನು ಮೊಬೈಲ್​ ನೆಟ್​ವರ್ಕ್​ ದೊರೆಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮಸ್ಥರಿಗೆ ದೂರವಾಣಿ ಕರೆ ಮಾಡಿ ಅವರ ಸಂತೋಷದಲ್ಲಿ ಭಾಗಿಯಾಗಿದ್ದಾರೆ.

ಇನ್ನು ಗ್ರಾಮಸ್ಥರೊಂದಿಗೆ 13 ನಿಮಿಷಗಳ ಕಾಲ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ದೀಪಾವಳಿ ಹಬ್ಬದಂದು ಆ ಗಡಿ ಪ್ರದೇಶಕ್ಕೆ ಭೇಟಿ ನೀಡಿದ್ದ ಕುರಿತು ಚರ್ಚಿಸಿದರು. ಇನ್ನು ಗ್ರಾಮಗಳಿಗೆ ಮೊಬೈಲ್ ನೆಟ್‌ವರ್ಕ್‌ ಕಲ್ಪಿಸುವುದು ‘ಡಿಜಿಟಲ್ ಇಂಡಿಯಾ’ ಅಭಿಯಾನದ ಬಗ್ಗೆ ತಿಳಿಸಿದರು.  ಸರ್ಕಾರವು ಈಗ ಎಲ್ಲಾ ಪ್ರದೇಶಗಳನ್ನು ತಂತ್ರಜ್ಞಾನದೊಂದಿಗೆ ಸಂಪರ್ಕಿಸಲು ಗಮನಹರಿಸುತ್ತಿದೆ. ಅಧಿಕಾರ ವಹಿಸಿಕೊಂಡಾಗ 18,000 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಇರಲಿಲ್ಲ. ಇನ್ನಷ್ಟು ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್‌ ಕಲ್ಪಿಸಿಕೊಡಲಾಗುವುದು ಎಂದರು.

ಇದನ್ನೂ ಓದಿ: ಭಾರತದ ಮೊದಲ ಹಳ್ಳಿ ಕೌರಿಕ್, ಗುಯೇಗೆ ಮೊದಲ ಬಾರಿಗೆ ತಲುಪಿದೆ ಟೆಲಿಕಾಂ ಕನೆಕ್ಟಿವಿಟಿ

ಈ ಮೊದಲು ತಮ್ಮ ಮೊಬೈಲ್ ಫೋನ್‌ಗಳನ್ನು ಬಳಸಬೇಕಿದ್ದರೆ ಸುಮಾರು ಎಂಟು ಕಿಲೋಮೀಟರ್‌ಗಳಷ್ಟು ಪ್ರಯಾಣಿಸಬೇಕಾಗಿತ್ತು ಎಂದು ಗ್ರಾಮಸ್ಥರು ಮೋದಿಗೆ ತಿಳಿಸಿದರು.  ಗ್ರಾಮಸ್ಥರ ಈ ಮಾತು ಕೇಳಿ ಮೋದಿ ಶಾಕ್ ಆದರು.

‘ವೈಬ್ರೆಂಟ್ ವಿಲೇಜ್ ಪ್ರೋಗ್ರಾಂ (ವಿವಿಪಿ)’ ಮೂಲಕ ಗಡಿ ಪ್ರದೇಶಗಳಲ್ಲಿ ಅಭಿವೃದ್ಧಿಯನ್ನು ಹೆಚ್ಚಿಸುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತದೆ. ಹಿಂದಿನ ಸರ್ಕಾರಗಳು, ಈ ಪ್ರದೇಶಗಳನ್ನು ನಿರ್ಲಕ್ಷಿಸಿ, ತಮ್ಮನ್ನು ತಾವು ರಕ್ಷಿಸಿಕೊಂಡಿವೆ ಎಂದು ಪರೋಕ್ಷವಾಗಿ ಯುಪಿಎಗೆ ಟಾಂಗ್ ಕೊಟ್ಟರು.

ಈ ಬದಲಾವಣೆಯು ದೂರದ ಪ್ರದೇಶಗಳಿಗೆ ಮತ್ತು ಸಮಾಜದ ಬಡ ಮತ್ತು ಮಧ್ಯಮ ವರ್ಗದ ವರ್ಗಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದರು.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ