AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಪ್ರಧಾನಿ ಮಾತುಕತೆ; ರಷ್ಯಾ ಜೊತೆಗಿನ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಸಲಹೆ

ಪ್ರಧಾನಿ ನರೇಂದ್ರ ಮೋದಿ ಇಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದಾರೆ. ಉಕ್ರೇನ್‌ ಮತ್ತು ರಷ್ಯಾ ನಡುವಿನ ಯುದ್ಧದ ಶಾಂತಿಯುತ ಇತ್ಯರ್ಥದ ಪ್ರಯತ್ನಗಳಿಗೆ ಬೆಂಬಲ ನೀಡುವ ಭಾರತದ ಸ್ಥಿರ ನಿಲುವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಆಗಸ್ಟ್ 15ರಂದು ಅಲಾಸ್ಕಾದಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಸಭೆಯ ಬಗ್ಗೆಯೂ ಈ ಮಾತುಕತೆ ವೇಳೆ ಚರ್ಚಿಸಲಾಗಿದೆ.

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಪ್ರಧಾನಿ ಮಾತುಕತೆ; ರಷ್ಯಾ ಜೊತೆಗಿನ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಸಲಹೆ
Modi With Ukraine President
ಸುಷ್ಮಾ ಚಕ್ರೆ
|

Updated on:Aug 11, 2025 | 7:55 PM

Share

ನವದೆಹಲಿ, ಆಗಸ್ಟ್ 11: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Ukraine President Zelenskyy) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಹಾಗೂ ಉಕ್ರೇನ್‌ನಲ್ಲಿ ರಷ್ಯಾದ ಜೊತೆ ನಡೆಯುತ್ತಿರುವ ಯುದ್ಧದ ಬಗ್ಗೆ ಪ್ರಸ್ತಾಪಿಸಿದರು. ಜಪೋರಿಝಿಯಾದಲ್ಲಿನ ಬಸ್ ನಿಲ್ದಾಣದ ಮೇಲೆ ನಡೆದ ಮಾರಕ ಬಾಂಬ್ ದಾಳಿ ಸೇರಿದಂತೆ ಇತ್ತೀಚಿನ ರಷ್ಯಾದ ದಾಳಿಯ ಬಗ್ಗೆ ಝೆಲೆನ್ಸ್ಕಿ ಮೋದಿಗೆ ವಿವರಿಸಿದರು. ಈ ದಾಳಿಯಲ್ಲಿ ಡಜನ್ಗಟ್ಟಲೆ ಜನರು ಗಾಯಗೊಂಡಿದ್ದರು. ಶಾಂತಿಗಾಗಿ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ರಷ್ಯಾ ತನ್ನ ಆಕ್ರಮಣದ ಪ್ರಯತ್ನಗಳನ್ನು ಮುಂದುವರೆಸಿದೆ. ಕದನ ವಿರಾಮಕ್ಕೆ ಒಪ್ಪಿಕೊಳ್ಳಲು ಯಾವುದೇ ಇಚ್ಛೆಯನ್ನು ತೋರಿಸುತ್ತಿಲ್ಲ ಎಂದು ಉಕ್ರೇನ್ ಅಧ್ಯಕ್ಷ ಒತ್ತಿ ಹೇಳಿದರು.

ಈ ವೇಳೆ ಭಾರತದ ನಿರಂತರ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಝೆಲೆನ್ಸ್ಕಿ, ಸಂಘರ್ಷಕ್ಕೆ ಸಂಬಂಧಿಸಿದ ಯಾವುದೇ ಪರಿಹಾರವು ಉಕ್ರೇನ್ ಅನ್ನು ನೇರವಾಗಿ ಒಳಗೊಂಡಿರಬೇಕು. ಉಕ್ರೇನ್ ಅನ್ನು ಬಿಟ್ಟು ರಷ್ಯಾದ ಜೊತೆ ಮಾತುಕತೆ ನಡೆಸಿದರೆ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಉಕ್ರೇನಿಯನ್ ಅಧ್ಯಕ್ಷ ಝೆಲೆನ್ಸ್ಕಿ ಅಂತಾರಾಷ್ಟ್ರೀಯ ನಿರ್ಬಂಧಗಳು ಅದರಲ್ಲೂ ವಿಶೇಷವಾಗಿ ತೈಲದಂತಹ ರಷ್ಯಾದ ಇಂಧನ ರಫ್ತುಗಳನ್ನು ಗುರಿಯಾಗಿಸಿಕೊಂಡು, ಮಾಸ್ಕೋದ ಯುದ್ಧಕ್ಕೆ ಹಣಕಾಸು ಒದಗಿಸುವ ಸಾಮರ್ಥ್ಯವನ್ನು ಕಡಿಮೆ ಮಾಡುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು. ಭಾರತ ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವುದರಿಂದ ಝೆಲೆನ್ಸ್ಕಿ ಭಾರತದ ಪ್ರಧಾನಿಯ ಜೊತೆ ಈ ವಿಷಯ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ-ರಷ್ಯಾ ಮಾತುಕತೆಗೂ ಮುನ್ನ ಪುಟಿನ್ ಹಾಗೂ ಝೆಲೆನ್ಸ್ಕಿ ಭೇಟಿಯಾಗಲ್ಲ ಎಂದ ಟ್ರಂಪ್

ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಪ್ರತಿಪಾದಿಸುವ ಭಾರತದ ದೀರ್ಘಕಾಲದ ನಿಲುವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಝೆಲೆನ್ಸ್ಕಿ ಅವರ ದೃಷ್ಟಿಕೋನಗಳಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತ-ಉಕ್ರೇನ್ ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿಯ ಬಗ್ಗೆ ಇಬ್ಬರೂ ನಾಯಕರು ಮಾತನಾಡಿದ್ದಾರೆ. ಪರಸ್ಪರ ಆಸಕ್ತಿಯ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಗಟ್ಟಿಗೊಳಿಸುವ ಅವಕಾಶಗಳನ್ನು ಅವರು ಚರ್ಚಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಅಮೆರಿಕ-ರಷ್ಯಾ ಮಾತುಕತೆಗೂ ಮುನ್ನ ಪುಟಿನ್ ಹಾಗೂ ಝೆಲೆನ್ಸ್ಕಿ ಭೇಟಿಯಾಗಲ್ಲ ಎಂದ ಟ್ರಂಪ್

ಆಗಸ್ಟ್ 15ರಂದು ಅಲಾಸ್ಕಾದಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಸಭೆಯ ಬಗ್ಗೆಯೂ ಈ ಮಾತುಕತೆ ವೇಳೆ ಚರ್ಚಿಸಲಾಗಿದೆ. ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಈ ಸಭೆ ನಡೆಯಲಿದೆ. ಭಾರತದ ವಿದೇಶಾಂಗ ಸಚಿವಾಲಯವು ಈ ಮಾತುಕತೆಗಳನ್ನು ಸ್ವಾಗತಿಸಿತು, ಶಾಂತಿಯನ್ನು ಪುನಃಸ್ಥಾಪಿಸಲು ರಾಜತಾಂತ್ರಿಕ ಪ್ರಯತ್ನಗಳ ಮಹತ್ವವನ್ನು ಎತ್ತಿ ತೋರಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:53 pm, Mon, 11 August 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!