AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹ್ರೇನ್ ರಾಜ, ಸೌದಿ ಅರೇಬಿಯಾದ ಪ್ರಿನ್ಸ್​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಎರಡೂ ದೇಶಗಳ ಮೇಲಿನ ದಾಳಿಗೆ ಖಂಡನೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಇರಾನ್ ಅದಕ್ಕೆ ಪ್ರತಿಯಾಗಿ ಸೇಡಿನ ದಾಳಿ ನಡೆಸಲಾರಂಭಿಸಿದೆ. ಇದರಿಂದ ಈ ಮೂರು ದೇಶಗಳಿಗೆ ಮಾತ್ರವಲ್ಲದೆ ಮಧ್ಯಪ್ರಾಚ್ಯದ ಇತರೆ ಅರಬ್ ದೇಶಗಳಲ್ಲೂ ಜೀವಭಯ ಉಂಟಾಗಿದೆ. ಇರಾನ್ ಕುವೈತ್, ಬಹ್ರೇನ್, ಸೌದಿ ಅರೇಬಿಯಾ ಸೇರಿದಂತೆ ತನ್ನ ಅಕ್ಕಪಕ್ಕದ ಎಲ್ಲ ದೇಶಗಳ ಮೇಲೂ ವೈಮಾನಿಕ ದಾಳಿ ನಡೆಸಲಾರಂಭಿಸಿದೆ. ಅದರಿಂದ ಸಾಕಷ್ಟು ಸಾವು-ನೋವುಗಳು ಉಂಟಾಗಿವೆ. ಈ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ.

ಬಹ್ರೇನ್ ರಾಜ, ಸೌದಿ ಅರೇಬಿಯಾದ ಪ್ರಿನ್ಸ್​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಎರಡೂ ದೇಶಗಳ ಮೇಲಿನ ದಾಳಿಗೆ ಖಂಡನೆ
Modi With Saudi Crown Prince
ಸುಷ್ಮಾ ಚಕ್ರೆ
|

Updated on: Mar 02, 2026 | 8:03 PM

Share

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಬಹ್ರೇನ್ ರಾಜ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಜೊತೆ ಫೋನ್​ನಲ್ಲಿ ಮಾತನಾಡಿದ್ದಾರೆ. ಈ ಎರಡೂ ದೇಶಗಳ ಮೇಲೆ ಇರಾನ್ (Iran Attack) ನಡೆಸಿದ ದಾಳಿಯನ್ನು ಮೋದಿ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಈ ಎರಡೂ ದೇಶಗಳ ಮೇಲೆ ಇರಾನ್ ನಡೆಸಿದ ದಾಳಿಯನ್ನು ಮೋದಿ ಖಂಡಿಸಿದ್ದು, ಶಾಂತಿಯ ಪುನಃಸ್ಥಾಪನೆಗಾಗಿ ರಾಜತಾಂತ್ರಿಕ ಪ್ರಯತ್ನಗಳಿಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಮೋದಿ, “ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದೆ. ಭಾರತವು ಬಹ್ರೇನ್ ಮೇಲಿನ ದಾಳಿಯನ್ನು ಖಂಡಿಸುತ್ತದೆ ಮತ್ತು ಈ ಕಷ್ಟದ ಸಮಯದಲ್ಲಿ ಅಲ್ಲಿನ ಜನರೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಎಂದು ತಿಳಿಸಿದೆ. ಬಹ್ರೇನ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮನವಿ

ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಕೂಡ ಮೋದಿ ಚರ್ಚಿಸಿದ್ದು, “ಸೌದಿ ಅರೇಬಿಯಾದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಉಲ್ಲಂಘಿಸುವ ಇತ್ತೀಚಿನ ದಾಳಿಗಳನ್ನು ಭಾರತ ಖಂಡಿಸುತ್ತದೆ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಪುನಃಸ್ಥಾಪನೆ ಅತ್ಯಂತ ಮಹತ್ವದ್ದಾಗಿದೆ ಎಂದು ನಾವು ಒಪ್ಪಿಕೊಂಡಿದ್ದೇವೆ. ಈ ಕಷ್ಟದ ಸಮಯದಲ್ಲಿ ಭಾರತೀಯ ಸಮುದಾಯದ ಸುರಕ್ಷತೆಯನ್ನು ನೋಡಿಕೊಂಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಿದ್ದೇನೆ” ಎಂದು ಮೋದಿ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು?

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಜಂಟಿಯಾಗಿ ದಾಳಿಗಳನ್ನು ನಡೆಸಿದವು. ಇದರಲ್ಲಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮತ್ತು ಇತರ ಡಜನ್ಗಟ್ಟಲೆ ಹಿರಿಯ ವ್ಯಕ್ತಿಗಳು ಸಾವನ್ನಪ್ಪಿದರು. ಇದರಿಂದ ಹಲವಾರು ಗಲ್ಫ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಇರಾನ್​ ಪ್ರತೀಕಾರ ತೀರಿಸಿಕೊಳ್ಳುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!