AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಾಂಡೋಗಳಿಲ್ಲದೆ ಸದನದಲ್ಲಿ ಖರ್ಗೆ ಸ್ವತಂತ್ರ ಹಕ್ಕಿಯಾಗಿದ್ದಾರೆಂದು ಕಾಲೆಳೆದ ಮೋದಿ

ಕಮಾಂಡೋಗಳಿಲ್ಲದೆ ಸದನದಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ವತಂತ್ರ ಹಕ್ಕಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕಾಲೆಳೆದಿದ್ದಾರೆ. ಈ ಬಾರಿ ಕಾಂಗ್ರೆಸ್​ ಕಮಾಂಡೋಗಳು ಅಧಿವೇಶನದಲ್ಲಿ ಇರಲಿಲ್ಲ ಕೆಳಗೆ ರಾಹುಲ್ ಗಾಂಧಿಯೂ ಇರಲಿಲ್ಲ ಮೇಲ್ಮನೆಯಲ್ಲಿ ಜಯರಾಮ್ ರಮೇಶ್​ ಕೂಡ ಇರಲಿಲ್ಲ ಹೀಗಾಗಿ ಖರ್ಗೆ ಈ ಬಾರಿ ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಧೈರ್ಯವಾಗಿ ಹೇಳಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಕಮಾಂಡೋಗಳಿಲ್ಲದೆ ಸದನದಲ್ಲಿ ಖರ್ಗೆ ಸ್ವತಂತ್ರ ಹಕ್ಕಿಯಾಗಿದ್ದಾರೆಂದು ಕಾಲೆಳೆದ ಮೋದಿ
ಮೋದಿ
ನಯನಾ ರಾಜೀವ್
|

Updated on:Feb 07, 2024 | 2:45 PM

Share

ಕಮಾಂಡೋಗಳಿಲ್ಲದೆ ಸದನದಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ವತಂತ್ರ ಹಕ್ಕಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕಾಲೆಳೆದಿದ್ದಾರೆ. ಈ ಬಾರಿ ಕಾಂಗ್ರೆಸ್​ ಕಮಾಂಡೋಗಳು ಅಧಿವೇಶನದಲ್ಲಿ ಇರಲಿಲ್ಲ ಕೆಳಗೆ ರಾಹುಲ್ ಗಾಂಧಿಯೂ ಇರಲಿಲ್ಲ ಮೇಲ್ಮನೆಯಲ್ಲಿ ಜಯರಾಮ್ ರಮೇಶ್​ ಕೂಡ ಇರಲಿಲ್ಲ ಹೀಗಾಗಿ ಖರ್ಗೆ ಈ ಬಾರಿ ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಧೈರ್ಯವಾಗಿ ಹೇಳಿದ್ದಾರೆ ಎಂದು ಮೋದಿ ಹೇಳಿದ್ದಾರೆ.

400 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲ್ಲಿ ಎಂದು ಆಶೀರ್ವಾದ ಮಾಡಿದ್ದಕ್ಕೆ ಧನ್ಯವಾದಗಳು, ಆ ದಿನ ನನಗೆ ಹೇಳಲು ಸಾಧ್ಯವಾಗಲಿಲ್ಲ ಆದರೆ ನಾನು ಖರ್ಗೆ ಅವರಿಗೆ ವಿಶೇಷ ಧನ್ಯವಾದಗಳು ಎಂದು ಪ್ರಧಾನಿ ಮೋದಿ ಹೇಳಿದರು. ನಾನು ಬಹಳ ಗಮನವಿಟ್ಟು ಕೇಳುತ್ತಿದ್ದೆ. ಲೋಕಸಭೆಯಲ್ಲಿ ಮನರಂಜನೆಯ ಕೊರತೆ ನೀಗಿಸಿದ್ದೀರಿ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು.

ಖರ್ಗೆಯವರು ಸುದೀರ್ಘವಾಗಿ ಮತ್ತು ಬಹಳ ಸುಲಲಿತವಾಗಿ ಮಾತನಾಡುತ್ತಿದ್ದಾರೆ ಎಂದು ನನಗೆ ಸಂತೋಷವಾಯಿತು. ಆಗ ನನಗೆ ಇಷ್ಟು ಮಾತನಾಡುವ ಸ್ವಾತಂತ್ರ್ಯ ಹೇಗೆ ಬಂತು ಎಂದು ಯೋಚಿಸುತ್ತಿದ್ದೆ. ಆ ದಿನ ಅಲ್ಲಿದ್ದ ಇಬ್ಬರು ವಿಶೇಷ ಕಮಾಂಡರ್‌ಗಳು ಅಲ್ಲಿ ಇರಲಿಲ್ಲ ಎಂಬುದು ನಂತರ ನನ್ನ ಗಮನಕ್ಕೆ ಬಂದಿತು. ಇಂತಹ ಪರಿಸ್ಥಿತಿಯಲ್ಲಿ ಖರ್ಗೆಯವರು ಸ್ವಾತಂತ್ರ್ಯದ ಲಾಭವನ್ನು ಪಡೆದರು. ಆ ದಿನ ಖರ್ಗೆ ಅವರು ಅಂದು ಏಸಾ ಮೋಕಾ ಕಹಾ ಮಿಲೇಗಾ ಹಾಡು ಕೇಳಿ ಬಂದಿದ್ದರೇನೋ ಎಂದು ಮೋದಿ ವ್ಯಂಗ್ಯವಾಡಿದರು.

ಕಾಂಗ್ರೆಸ್ ಬ್ರಿಟಿಷರಿಂದ ಪ್ರಭಾವಿತವಾಗಿದೆ. ಇದರಿಂದಾಗಿಯೇ ಬ್ರಿಟಿಷರು ಮಾಡಿದ ಕಾನೂನುಗಳು ಕಾರ್ಯರೂಪಕ್ಕೆ ಬಂದವು, ದಶಕಗಳ ನಂತರವೂ ಕೆಂಪು ದೀಪ ಸಂಸ್ಕೃತಿ ಮುಂದುವರೆಯಿತು, ಸಂಜೆ 5 ಗಂಟೆಗೆ ಭಾರತದ ಬಜೆಟ್ ಬರುತ್ತಿತ್ತು, ಏಕೆಂದರೆ ಆ ಸಮಯದಲ್ಲಿ ಬ್ರಿಟಿಷ್ ಸಂಸತ್ತಿನ ಅಧಿವೇಶನ ಪ್ರಾರಂಭವಾಗುತ್ತಿತ್ತು.

ಪಶ್ಚಿಮ ಬಂಗಾಳದಿಂದ ನಿಮ್ಮ ಮುಂದೆ ಒಂದು ಸವಾಲು ಇದೆ, ಕಾಂಗ್ರೆಸ್ 40 ರ ಗಡಿ ದಾಟಲು ಸಾಧ್ಯವಿಲ್ಲ (ಲೋಕಸಭಾ ಚುನಾವಣೆ 2024 ರಲ್ಲಿ). ನೀವು 40 ಸ್ಥಾನಗಳನ್ನು ಗಳಿಸಲು ಸಾಧ್ಯವಾಗುವಂತೆ ನಾನು ಪ್ರಾರ್ಥಿಸುತ್ತೇನೆ ಎಂದರು.

ನಿಮ್ಮ ಪ್ರತಿಯೊಂದು ಮಾತನ್ನೂ ನಾವು ಬಹಳ ತಾಳ್ಮೆ ಮತ್ತು ನಮ್ರತೆಯಿಂದ ಕೇಳುತ್ತಿದ್ದೇವೆ ಎಂದು ಪ್ರಧಾನಿ ಹೇಳಿದರು. ಆದರೆ ನೀವು ನನ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಧ್ವನಿಗೆ ದೇಶದ ಜನತೆ ಶಕ್ತಿ ತುಂಬಿದ್ದಾರೆ. ಅದಕ್ಕಾಗಿಯೇ ನಾನು ಕೂಡ ಈ ಬಾರಿ ಸಂಪೂರ್ಣ ತಯಾರಿ ಮಾಡಿಕೊಂಡು ಬಂದಿದ್ದೇನೆ.

ಆ ದಿನ ಅದನ್ನು ಹೇಳಲು ಸಾಧ್ಯವಾಗಲಿಲ್ಲ ಆದರೆ ಖರ್ಗೆಯವರಿಗೆ ಅವರಿಗೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಆ ದಿನ ನಾನು ತುಂಬಾ ಗಮನವಿಟ್ಟು ಸಂತೋಷದಿಂದ ಅವನ ಮಾತನ್ನು ಕೇಳುತ್ತಿದ್ದೆ. ಲೋಕಸಭೆಯಲ್ಲಿ ನಾವು ಕಾಣೆಯಾಗಿದ್ದ ಮನರಂಜನೆಯ ಕೊರತೆಯನ್ನು ಅವರು ಪೂರೈಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Wed, 7 February 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ