34 ವರ್ಷ ಬಳಿಕ ದೇಶಕ್ಕೆ ಹೊಸ ಶಿಕ್ಷಣ ನೀತಿ: ಪ್ರಧಾನಿ ಮೋದಿ ಮಾತು TV9 Live

[lazy-load-videos-and-sticky-control id=”jdJoOhqCipA”] ಕಳೆದ ತಿಂಗಳು ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಗ್ರೀನ್​ ಸಿಗ್ನಲ್ ಕೊಟ್ಟಿತ್ತು. ಈ ನೀತಿ ಬಗ್ಗೆ ಸದ್ಯ ದೇಶಾದ್ಯಂತ ಚರ್ಚೆ ನಡೀತಿದೆ. ಈ ಮಧ್ಯೆ, ಹೊಸ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆ ಬಗ್ಗೆ ಮೋದಿ ಇಂದು ಮಾತ್ನಾಡಲಿದ್ದು, ಎಲ್ಲರ ಚಿತ್ತ ಪ್ರಧಾನಿ ಮಾತಿನತ್ತ ನೆಟ್ಟಿದೆ. ಕೊರೊನಾ ಕಾಲಿಟ್ಟ ಮೇಲೆ ಶಾಲಾ-ಕಾಲೇಜುಗಳು ಬಂದ್ ಆದ್ವು.. ಲಾಕ್​ಡೌನ್ ಬಳಿಕ ಶಿಕ್ಷಣ ವ್ಯವಸ್ಥೆಯೇ ತಲೆಕೆಳಗಾಯ್ತು.. ದೇಶದ ಹಲವೆಡೆ ಪರೀಕ್ಷೆಗಳೇ ರದ್ದಾಗಿ ಹೋದ್ವು. ಫಲಿತಾಂಶದ […]

34 ವರ್ಷ ಬಳಿಕ ದೇಶಕ್ಕೆ ಹೊಸ ಶಿಕ್ಷಣ ನೀತಿ: ಪ್ರಧಾನಿ ಮೋದಿ ಮಾತು TV9 Live
ಸಾಧು ಶ್ರೀನಾಥ್​

Updated on: Aug 07, 2020 | 11:05 AM

[lazy-load-videos-and-sticky-control id=”jdJoOhqCipA”]

ಕಳೆದ ತಿಂಗಳು ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಗ್ರೀನ್​ ಸಿಗ್ನಲ್ ಕೊಟ್ಟಿತ್ತು. ಈ ನೀತಿ ಬಗ್ಗೆ ಸದ್ಯ ದೇಶಾದ್ಯಂತ ಚರ್ಚೆ ನಡೀತಿದೆ. ಈ ಮಧ್ಯೆ, ಹೊಸ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆ ಬಗ್ಗೆ ಮೋದಿ ಇಂದು ಮಾತ್ನಾಡಲಿದ್ದು, ಎಲ್ಲರ ಚಿತ್ತ ಪ್ರಧಾನಿ ಮಾತಿನತ್ತ ನೆಟ್ಟಿದೆ.

ಕೊರೊನಾ ಕಾಲಿಟ್ಟ ಮೇಲೆ ಶಾಲಾ-ಕಾಲೇಜುಗಳು ಬಂದ್ ಆದ್ವು.. ಲಾಕ್​ಡೌನ್ ಬಳಿಕ ಶಿಕ್ಷಣ ವ್ಯವಸ್ಥೆಯೇ ತಲೆಕೆಳಗಾಯ್ತು.. ದೇಶದ ಹಲವೆಡೆ ಪರೀಕ್ಷೆಗಳೇ ರದ್ದಾಗಿ ಹೋದ್ವು. ಫಲಿತಾಂಶದ ಲೆಕ್ಕಚಾರವೇ ಉಲ್ಟಾ ಆಯ್ತು. ಹೀಗಾಗಿ ಕಳೆದ ತಿಂಗಳು ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿಗೆ ತಂದಿದೆ.

ಬರೋಬ್ಬರಿ 34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರ್ತಿದ್ದು, ದೇಶದೆಲ್ಲೆಡೆ ಇದ್ರ ಸಾಧಕ-ಬಾಧಕಗಳದ್ದೇ ಚರ್ಚೆ ನಡೀತಿದೆ.

ಉನ್ನತ ಶಿಕ್ಷಣದಲ್ಲಿನ ಸುಧಾರಣೆ ಬಗ್ಗೆ ಇಂದು ಚರ್ಚೆ..!
ಅಂದ್ಹಾಗೇ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯ, ಪರೀಕ್ಷೆ ಅಂಕಗಳಿಗೆ ಹೆಚ್ಚಿನ ಒತ್ತು ನೀಡಿಲ್ಲ. ಬೋರ್ಡ್ ಎಕ್ಸಾಂಗೆ ಹೆಚ್ಚಿನ ಮಹತ್ವ ಕೊಟ್ಟಿಲ್ಲ. ಮಕ್ಕಳ ಮೇಲೆ ಮಾನಸಿಕ ಒತ್ತಡ ಕೂಡ ಹೇರುವುದಿಲ್ಲ. ಇಂಥ ಹೊಸ ಶಿಕ್ಷಣ ನೀತಿ ಬಗೆಗಿನ ಚರ್ಚೆಯಲ್ಲಿಂದು ಪ್ರಧಾನಿ ಭಾಗವಹಿಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮ್ಮೇಳನವನ್ನ ಉದ್ಘಾಟಿಸಲಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಇಲಾಖೆ & ಯುಜಿಟಿ ಜಂಟಿಯಾಗಿ ಸಮ್ಮೇಳನ ಆಯೋಜಿಸ್ತಿದೆ. ಇದ್ರಲ್ಲಿ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್, ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವ ಸಂಜಯ ದೋತ್ರೆ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಿದ ಕರಡು ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಕಸ್ತೂರಿ ರಂಗನ್ & ಸದಸ್ಯರುಗಳು ಭಾಗವಹಿಸಲಿದ್ದಾರೆ.

ಇದಿಷ್ಟೇ ಅಲ್ಲದೆ ಖ್ಯಾತನಾಮ ಶಿಕ್ಷಣ ತಜ್ಞರು, ವಿಜ್ಞಾನಿಗಳು, ರಾಷ್ಟ್ರೀಯ ಶಿಕ್ಷಣ ನೀತಿಯ ವಿವಿಧ ಆಯಾಮಗಳ ಬಗ್ಗೆ ಮಾತ್ನಾಡಲಿದ್ದಾರೆ. ಈ ವೇಳೆ ಭವಿಷ್ಯದ ಗುಣಮಟ್ಟದ ಶಿಕ್ಷಣವನ್ನ ಮಕ್ಕಳಿಗೆ ತಲುಪಿಸಲು ತಂತ್ರಜ್ಞಾನವನ್ನು ಸಮಾನವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸುವ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನು ಇತ್ತೀಚಿಗಷ್ಟೇ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್​ನಲ್ಲಿ ಮಾತ್ನಾಡಿದ್ದ ಮೋದಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಯುವಜನತೆ ಉದ್ಯೋಗ ಕೇಳುವವರಲ್ಲ, ಬದಲಿಗೆ ಉದ್ಯೋಗ ನೀಡುವವರಾಗ್ತಾರೆ ಅಂದಿದ್ರು. ಜೊತೆಗೆ ಇದ್ರಲ್ಲಿ ವೃತ್ತಿಪರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಯುವಜನತೆಯ ಮೇಲಾಗುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಪ್ರಧಾನಿ ಮಾತನಾಡಲಿದ್ದಾರೆ. ಮೋದಿ ಇಂದು ಯಾವೆಲ್ಲಾ ವಿಷಯ ಚರ್ಚೆ ಮಾಡ್ತಾರೆ ಅನ್ನೋದನ್ನ ಕಾದು ನೋಡ್ಬೇಕಿದೆ.

Published On - 7:03 am, Fri, 7 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us