AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಶಿಕ್ಷಣ ನೀತಿಯೊಂದಿಗೆ THINK ಮಾಡೋಣ, ದೇಶ ಕಟ್ಟೋಣ: ಪ್ರಧಾನಿ ಮೋದಿ

ನವದೆಹಲಿ: ಹೊಸ ಶಿಕ್ಷಣ ನೀತಿಯಲ್ಲಿ How to think ಬಗ್ಗೆ ಒತ್ತು ನೀಡಲಾಗಿದೆ, ವಿದ್ಯಾರ್ಥಿಗಳಿಗೆ ರಿ-ಸ್ಕಿಲ್, ಅಪ್-ಸ್ಕಿಲ್‌ನ ಅವಶ್ಯಕತೆ ಇದ್ದು, ದೇಶಕ್ಕೆ ಉತ್ತಮ ವಿದ್ಯಾರ್ಥಿಗಳು, ಕೌಶಲ್ಯವುಳ್ಳವರು ಹಾಗೂ ಉತ್ತಮ ವ್ಯಕ್ತಿಗಳನ್ನು ಕೊಡುವ ಸಾಮರ್ಥ್ಯ ಶಿಕ್ಷಕರಿಗೆ ಇದೆ. ಹೀಗಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವಾಸಿಗಳಿಗೆ ಆಹ್ವಾನ ನೀಡಿದ್ದಾರೆ. ಹೊಸ ಶಿಕ್ಷಣ ನೀತಿಯಿಂದ ಬಲಿಷ್ಠ ಭಾರತ ಹೊಸದಾಗಿ ಜಾರಿಗೊಳಿಸಲಾಗುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ […]

ಹೊಸ ಶಿಕ್ಷಣ ನೀತಿಯೊಂದಿಗೆ THINK  ಮಾಡೋಣ, ದೇಶ ಕಟ್ಟೋಣ: ಪ್ರಧಾನಿ ಮೋದಿ
Guru
| Updated By: ಸಾಧು ಶ್ರೀನಾಥ್​|

Updated on: Aug 07, 2020 | 2:05 PM

Share

ನವದೆಹಲಿ: ಹೊಸ ಶಿಕ್ಷಣ ನೀತಿಯಲ್ಲಿ How to think ಬಗ್ಗೆ ಒತ್ತು ನೀಡಲಾಗಿದೆ, ವಿದ್ಯಾರ್ಥಿಗಳಿಗೆ ರಿ-ಸ್ಕಿಲ್, ಅಪ್-ಸ್ಕಿಲ್‌ನ ಅವಶ್ಯಕತೆ ಇದ್ದು, ದೇಶಕ್ಕೆ ಉತ್ತಮ ವಿದ್ಯಾರ್ಥಿಗಳು, ಕೌಶಲ್ಯವುಳ್ಳವರು ಹಾಗೂ ಉತ್ತಮ ವ್ಯಕ್ತಿಗಳನ್ನು ಕೊಡುವ ಸಾಮರ್ಥ್ಯ ಶಿಕ್ಷಕರಿಗೆ ಇದೆ. ಹೀಗಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವಾಸಿಗಳಿಗೆ ಆಹ್ವಾನ ನೀಡಿದ್ದಾರೆ.

ಹೊಸ ಶಿಕ್ಷಣ ನೀತಿಯಿಂದ ಬಲಿಷ್ಠ ಭಾರತ ಹೊಸದಾಗಿ ಜಾರಿಗೊಳಿಸಲಾಗುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಮಾಜದಲ್ಲಿ ಯಾರೂ ಸಣ್ಣವರು, ದೊಡ್ಡವರು ಭೇದಭಾವ ಇಲ್ಲ ಹಾಗೇನೆ ಹೊಸ ಶಿಕ್ಷಣ ನೀತಿಯಲ್ಲಿ ಯಾವುದೇ ಭೇದಭಾವ ಇಲ್ಲ. ಈ ಹೊಸ ಶಿಕ್ಷಣ ನೀತಿ ಭಾರತವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ. ಆದರೆ ಇದನ್ನು ಜಾರಿಗೊಳಿಸುವುದು ಈಗ ನಮಗಿರುವ ಸವಾಲಾಗಿದ್ದು, ಇದನ್ನು ಜಾರಿಗೆ ತರುವಲ್ಲಿ ಎಲ್ಲರೂ ಇಚ್ಛಾಶಕ್ತಿ ತೋರಿಸಬೇಕು ಎಂದು ದೇಶವಾಸಿಗಳಿಗೆ ಮೋದಿ ಮನವಿ ಮಾಡಿದ್ದಾರೆ.

ಉನ್ನತ ಶಿಕ್ಷಣಕ್ಕೆ ಒತ್ತು ರಾಷ್ಟ್ರೀಯ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣದಲ್ಲಿ ಸುಧಾರಣೆಗೆ ಒತ್ತು ನೀಡಲಾಗಿದೆ. ಬೇರೆ ಬೇರೆ ಕೋರ್ಸ್​ಗಳಿಗೆ ಸೇರಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ತಮ್ಮ ಆಸಕ್ತಿಕರ ಕೋರ್ಸ್ ಅರಿತು ಅವರು ಬದಲಾವಣೆ ಮಾಡಿಕೊಳ್ಳಬಹುದು. ಹೊಸ ಶಿಕ್ಷಣ ನೀತಿಯಲ್ಲಿ ಟ್ಯಾಲೆಂಟ್, ಟೆಕ್ನಾಲಜಿಗೆ ಆದ್ಯತೆ ನೀಡಲಾಗಿದೆ. ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ, ವಿದ್ಯಾರ್ಥಿಗಳು ಸಂಶೋಧನೆಗಳತ್ತ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದ್ದಾರೆ.

ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ಕಾಲೇಜುಗಳ ಸ್ವಾಯತ್ತತೆ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಾಕಷ್ಟು ಬದಲಾವಣೆ ಅಗತ್ಯವಿದೆ. ಆದರೂ ದೇಶದ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆಗೆ ಅನುಮತಿ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡಿಕೆ ಒಂದು ಕ್ರಾಂತಿಕಾರಕ ನಿರ್ಧಾರ. ಉತ್ತಮ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದಿಂದ ವಿಶೇಷ ಗೌರವ ಸಿಗಲಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಹಳ ದೊಡ್ಡ ಬದಲಾವಣೆ ತರಲಿದೆ ಎಂದು ಮೋದಿ ನೂತನ ಶಿಕ್ಷಣ ನೀತಿಯ ಬಗ್ಗೆ ಭಾರೀ ಭರವಸೆ ವ್ಯಕ್ತಪಡಿಸಿದ್ದಾರೆ.

ಮಾತೃಭಾಷೆಯಲ್ಲಿಯೇ ಶಿಕ್ಷಣಕ್ಕೆ ಅವಕಾಶ ಈ ನಿಟ್ಟಿನಲ್ಲಿ ಆರಂಭದಿಂದ5ನೇ ತರಗತಿಯವರೆಗೆ ಮಾತೃಭಾಷೆಯಲ್ಲಿಯೇ ಶಿಕ್ಷಣಕ್ಕೆ ಅವಕಾಶ ಮಾಡಲಾಗಿದೆ. ಎಲ್ಲಿ ಸುಧಾರಣೆ ಅಗತ್ಯವಿದೆಯೋ ಅಲ್ಲಿ ಸುಧಾರಣೆ ಮಾಡುತ್ತೇವೆ. ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆಯೋ ಅದನ್ನೇ ಓದಬಹುದು. ಅವರಿಗೆ ಆಸಕ್ತಿ ಇರುವ ವಿಚಾರದಲ್ಲೇ ಕೆಲಸ ಮಾಡಬಹುದು. ಅಷ್ಟೇ ಅಲ್ಲ ಹೊಸ ಶಿಕ್ಷಣ ನೀತಿಯಲ್ಲಿ ಪುಸ್ತಕದ ಹೊರೆ ಕಡಿಮೆಯಾಗಲಿದೆ. ಜೊತೆಗೆ ವ್ಯವಹಾರಿಕ ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶಿಕ್ಷಣ ನೀತಿಯೊಂದಿಗೆ ದೇಶ ಬೆಳೆಯುತ್ತದೆ ಪ್ರತಿಯೊಂದು ದೇಶ ತನ್ನ ಶಿಕ್ಷಣ ನೀತಿಯೊಂದಿಗೆ ಬೆಳೆಯುತ್ತದೆ. ನಮ್ಮ ಯುವಜನತೆಗೆ ಅಗತ್ಯವಿರುವ ಕೌಶಲ್ಯದತ್ತ ಗಮನ ಹರಿಸುವತ್ತ ರಾಷ್ಟ್ರೀಯ ಶಿಕ್ಷಣ ನೀತಿ ಒತ್ತು ಕೊಡಲಿದೆ. ಈ ನಿಟ್ಟಿನಲ್ಲಿ ಸುಮಾರು 3-4 ವರ್ಷಗಳ ಸುದೀರ್ಘ ಚರ್ಚೆ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ವೀಕರಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ 21ನೇ ಶತಮಾನಕ್ಕೆ ನಾಂದಿ ವಿವಿಧ ಕ್ಷೇತ್ರಗಳ, ವಿವಿಧ ವಿಚಾರಧಾರೆಯ ಜನರಿಂದ ವಿಮರ್ಷೆ ಮತ್ತು ಆರೋಗ್ಯಕರ ಚರ್ಚೆ ಹೆಚ್ಚೆಚ್ಚು ನಡೆದಷ್ಟೂ ಉತ್ತಮ. ಯಾಕಂದ್ರೆ ಈ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 21ನೇ ಶತಮಾನಕ್ಕೆ ಭಾರತದ ಫೌಂಡೇಷನ್ ಅನ್ನು ಸಿದ್ಧಪಡಿಸಲಿದೆ. ಹೀಗಾಗಿ ಈ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಪ್ರಧಾನಿ ಮೋದಿ ದೇಶವಾಸಿಗಳಿಗೆ ಕರೆ ನೀಡಿದ್ದಾರೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು