AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಅಧ್ಯಕ್ಷ ಪುಟಿನ್​ ಜತೆ ಫೋನ್​ನಲ್ಲಿ ಮಾತನಾಡಿದ ಪ್ರಧಾನಿ ಮೋದಿ; ಭಾರತೀಯರ ಸ್ಥಳಾಂತರದ ಬಗ್ಗೆ ಚರ್ಚೆ

ರಷ್ಯಾ-ಉಕ್ರೇನ್​ ಯುದ್ಧ ಶುರುವಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷರ ನಡುವೆ ನಡೆಯುತ್ತಿರುವ ಎರಡನೇ ದೂರವಾಣಿ ಮಾತುಕತೆ ಇದಾಗಿದೆ.

ರಷ್ಯಾ ಅಧ್ಯಕ್ಷ ಪುಟಿನ್​ ಜತೆ ಫೋನ್​ನಲ್ಲಿ ಮಾತನಾಡಿದ ಪ್ರಧಾನಿ ಮೋದಿ; ಭಾರತೀಯರ ಸ್ಥಳಾಂತರದ ಬಗ್ಗೆ ಚರ್ಚೆ
ರಷ್ಯಾ ಅಧ್ಯಕ್ಷ ಮತ್ತು ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Mar 03, 2022 | 10:33 AM

Share

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ನಿನ್ನೆ (ಮಾರ್ಚ್​ 2) ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ ಜತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈ ವೇಳೆ ಉಕ್ರೇನ್​ನಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ರಷ್ಯಾ ಸೇನೆಯ ತೀವ್ರದಾಳಿಗೆ ತುತ್ತಾಗಿರುವ ಖಾರ್ಕೀವ್​​ನಿಂದ ಭಾರತೀಯರನ್ನು ಸ್ಥಳಾಂತರ ಮಾಡಬೇಕಾಗಿದೆ. ಸದ್ಯ ಇದು ಆದ್ಯತೆ ಮತ್ತು ಅಗತ್ಯತೆಯಾಗಿದೆ ಎಂದೂ ರಷ್ಯಾ ಅಧ್ಯಕ್ಷರಿಗೆ ಮನದಟ್ಟು ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

ರಷ್ಯಾ-ಉಕ್ರೇನ್​ ಯುದ್ಧ ಶುರುವಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷರ ನಡುವೆ ನಡೆಯುತ್ತಿರುವ ಎರಡನೇ ದೂರವಾಣಿ ಮಾತುಕತೆ ಇದಾಗಿದೆ. ಉಕ್ರೇನ್​​-ರಷ್ಯಾ ಮಧ್ಯದ ಬಿಕ್ಕಟ್ಟಿಗೆ ದೀರ್ಘ ಇತಿಹಾಸವಿದ್ದರೂ ಯುದ್ಧದ ರೂಪ ತಳೆದದ್ದು ಫೆ.24ರಂದು. ಉಕ್ರೇನ್​​ನ ಬಂಡಾಯ ಪ್ರದೇಶಗಳಾದ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್​​ಗಳ ಬೆಂಬಲದಿಂದ ಪುಟಿನ್​ ಉಕ್ರೇನ್​​ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿದರು. ಅಂದಿನಿಂದ ರಷ್ಯಾ ಸೇನೆ ಉಕ್ರೇನ್​ ಮೇಲೆ ಆಕ್ರಮಣ ನಡೆಸುತ್ತಿದೆ. ಹಾಗೇ ಇತ್ತ ಭಾರತ ಕೂಡ ಅಲ್ಲಿರುವ ತನ್ನ ನಾಗರಿಕರನ್ನು ಕರೆಸುಕೊಳ್ಳುವ ಪ್ರಯತ್ನವನ್ನು ಅವಿರತವಾಗಿ ನಡೆಸುತ್ತಿದೆ. ಅದರಲ್ಲೂ ಖಾರ್ಕೀವ್​​ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ರಷ್ಯಾ ದಾಳಿಗೆ ಮೃತಪಟ್ಟ ನಂತರ ಸ್ಥಳಾಂತರ ಕಾರ್ಯಾಚರಣೆ ಇನ್ನಷ್ಟು ಚುರುಕಾಗಿದೆ.

ಇಬ್ಬರು ನಾಯಕರ ದೂರವಾಣಿ ಮಾತುಕತೆ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಜಾಸ್ತಿ ಏನೂ ವಿವರಣೆ ನೀಡಿಲ್ಲ. ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್​ ಇಬ್ಬರೂ ಉಕ್ರೇನ್​ ಬಗ್ಗೆಯೇ ಮಾತನಾಡಿದ್ದಾರೆ. ಅದರಲ್ಲೂ ಖಾರ್ಕೀವ್​ ಪರಿಸ್ಥಿತಿ, ಅಲ್ಲಿರುವ ಭಾರತೀಯ ಸ್ಥಿತಿಗತಿ ಬಗ್ಗೆ ಚರ್ಚೆ ನಡೆದಿದೆ. ಭಾರತೀಯರ ಸುರಕ್ಷಿತ ಸ್ಥಳಾಂತರದ ಕುರಿತೂ ಮಾತುಕತೆ ನಡೆದಿದೆ ಎಂದು ಹೇಳಿದೆ.

ಖಾರ್ಕೀವ್​ನಲ್ಲಿ ಭಾರತದ ವಿದ್ಯಾರ್ಥಿ ಮೃತಪಟ್ಟ ನಂತರ ಭಾರತ ಸರ್ಕಾರ, ಇಲ್ಲಿರುವ ರಷ್ಯಾ ಮತ್ತು ಉಕ್ರೇನ್​ ರಾಯಭಾರಿಗಳನ್ನು ಕರೆಸಿತ್ತು. ಖಾರ್ಕಿವ್​, ಸುಮಿ ಪ್ರದೇಶಗಳೆಲ್ಲ ರಷ್ಯಾ ಗಡಿಗೆ ಹತ್ತಿರ ಇರುವ ಕಾರಣ ಅಲ್ಲಿರುವ ಭಾರತೀಯರನ್ನು ರಕ್ಷಿಸಲು ಅನುವು ಮಾಡಿಕೊಡುವಂತೆ ರಷ್ಯಾಕ್ಕೆ ಕೂಡ ಮನವಿ ಮಾಡಿತ್ತು. ಅದನ್ನು ರಷ್ಯಾ ಪುರಸ್ಕರಿಸಿದೆ. ಹೀಗಾಗಿ ಖಾರ್ಕಿವ್ ಮತ್ತು ಸುಮಿ ಯುದ್ಧವಲಯದಲ್ಲಿರುವ ಸುಮಾರು 4000 ಭಾರತೀಯರನ್ನು ರಷ್ಯಾ ಮೂಲಕ ರಕ್ಷಿಸುವ ವ್ಯವಸ್ಥೆ ಆಗುತ್ತಿದೆ.  ಇನ್ನು ರಷ್ಯಾ ದಾಳಿಗೆ ನವೀನ್​ ಮೃತಪಟ್ಟ ಪ್ರಕರಣದ ತನಿಖೆಯನ್ನೂ ನಡೆಸುವುದಾಗಿ ರಷ್ಯಾ ರಾಯಭಾರಿ ಭಾರತ ಸರ್ಕಾರಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್​​ನಿಂದ ಭಾರತೀಯರ ಸ್ಥಳಾಂತರಕ್ಕೆ ಪಾಕಿಸ್ತಾನ ವಾಯುಮಾರ್ಗ ಬಳಕೆ ಮಾಡಿಕೊಳ್ಳದ ವಾಯುಸೇನೆ

Published On - 9:47 am, Thu, 3 March 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ