AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಲಿಂಕ್​ನಲ್ಲೇ ಸಿಗಲಿದೆ ಆಸ್ತಿ ಕಾರ್ಡ್​, ಹಳ್ಳಿಗರ ಬದುಕು ಬದಲಾಯಿಸಲಿದೆ ಸ್ವಾಮಿತ್ವ ಯೋಜನೆ

ದೆಹಲಿ: ಗ್ರಾಮೀಣ ಭಾರತದ ಬದಲಾವಣೆಗೆ ಪ್ರಧಾನಿ ಮೋದಿ ಇಂದು ಐತಿಹಾಸಿಕ ಯೋಜನೆ ಜಾರಿಗೆ ತರುತ್ತಿದ್ದಾರೆ.‌ ಹಾಗಾದ್ರೆ ಪ್ರಧಾನಿ ಮೋದಿ ಜಾರಿಗೆ ತರುತ್ತಿರುವ ಈ ಯೋಜನೆಯಲ್ಲಿ ಏನಿದೆ? ಹಳ್ಳಿಯವ್ರಿಗೆ ಏನ್ ಲಾಭ ಅನ್ನೋದನ್ನು ಇಲ್ಲಿ ಓದಿ.. ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾರತವನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಯೋಜನೆಯೊಂದನ್ನು ಜಾರಿಗೆ ತರುತ್ತಿದ್ದಾರೆ. ಗ್ರಾಮೀಣ ಭಾರತವನ್ನು ಪರಿವರ್ತಿಸುವ ಲಕ್ಷಾಂತರ ಹಳ್ಳಿಗರ ಸಬಲೀಕರಣಕ್ಕೆ ಈ ಯೋಜನೆ ಮಹತ್ವದ್ದಾಗಿದೆ. ಗ್ರಾಮೀಣ ಭಾರತಕ್ಕೆ ಪ್ರಧಾನಿ ಮೋದಿ ‘ಸ್ವಾಮಿತ್ವ’ ಯೋಜನೆ ಮೋದಿ ಇಂದು ಜಾರಿಗೆ ತರುತ್ತಿರುವ […]

ಮೊಬೈಲ್ ಲಿಂಕ್​ನಲ್ಲೇ ಸಿಗಲಿದೆ ಆಸ್ತಿ ಕಾರ್ಡ್​, ಹಳ್ಳಿಗರ ಬದುಕು ಬದಲಾಯಿಸಲಿದೆ ಸ್ವಾಮಿತ್ವ ಯೋಜನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 8:03 AM

Share

ದೆಹಲಿ: ಗ್ರಾಮೀಣ ಭಾರತದ ಬದಲಾವಣೆಗೆ ಪ್ರಧಾನಿ ಮೋದಿ ಇಂದು ಐತಿಹಾಸಿಕ ಯೋಜನೆ ಜಾರಿಗೆ ತರುತ್ತಿದ್ದಾರೆ.‌ ಹಾಗಾದ್ರೆ ಪ್ರಧಾನಿ ಮೋದಿ ಜಾರಿಗೆ ತರುತ್ತಿರುವ ಈ ಯೋಜನೆಯಲ್ಲಿ ಏನಿದೆ? ಹಳ್ಳಿಯವ್ರಿಗೆ ಏನ್ ಲಾಭ ಅನ್ನೋದನ್ನು ಇಲ್ಲಿ ಓದಿ..

ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾರತವನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಯೋಜನೆಯೊಂದನ್ನು ಜಾರಿಗೆ ತರುತ್ತಿದ್ದಾರೆ. ಗ್ರಾಮೀಣ ಭಾರತವನ್ನು ಪರಿವರ್ತಿಸುವ ಲಕ್ಷಾಂತರ ಹಳ್ಳಿಗರ ಸಬಲೀಕರಣಕ್ಕೆ ಈ ಯೋಜನೆ ಮಹತ್ವದ್ದಾಗಿದೆ.

ಗ್ರಾಮೀಣ ಭಾರತಕ್ಕೆ ಪ್ರಧಾನಿ ಮೋದಿ ‘ಸ್ವಾಮಿತ್ವ’ ಯೋಜನೆ ಮೋದಿ ಇಂದು ಜಾರಿಗೆ ತರುತ್ತಿರುವ ಸ್ವಾಮಿತ್ವ ಯೋಜನೆ ಆಸ್ತಿ ಕಾರ್ಡ್ ಅಥವಾ ಪ್ರಾಪರ್ಟಿ ಕಾರ್ಡ್​ಗೆ ಸಂಬಂಧಿಸಿದ್ದಾಗಿದೆ‌. ಈ ಯೋಜನೆಯ ಚಾಲನೆಯಿಂದಾಗಿ ಸುಮಾರು ಒಂದು ಲಕ್ಷ ಆಸ್ತಿ ಮಾಲೀಕರು ತಮ್ಮ ಮೊಬೈಲ್‌ನ SMS ಲಿಂಕ್ ಮೂಲಕವೇ ಆಸ್ತಿ ಕಾರ್ಡ್ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಸಾಲ ಪಡೆಯಲು ಹಾಗೂ ಇತರೆ ಆರ್ಥಿಕ ನೆರವುಗಳನ್ನು ಪಡೆಯಲು ಗ್ರಾಮೀಣ ಜನರು ಈ ಕಾರ್ಡ್‌ಗಳನ್ನು ಬಳಕೆ ಮಾಡಬಹುದಾಗಿದೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಗ್ರಾಮೀಣ ಜನರು, ಅವರ ಮೊಬೈಲ್‌ ಫೋನ್‌ಗೆ ಕಳುಹಿಸಲಾದ ಲಿಂಕ್‌ ಬಳಸಿ ಆಸ್ತಿ ಕಾರ್ಡ್​ಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ತದ ನಂತರ ಆಯಾ ರಾಜ್ಯ ಸರ್ಕಾರಗಳು ಪ್ರಾಪರ್ಟಿ ಕಾರ್ಡ್‌ ವಿತರಿಸಲು ಕ್ರಮಕೈಗೊಳ್ಳಲಿವೆ.

ಯೋಜನೆ ಉದ್ದೇಶ ಏನು? SMS ಲಿಂಕ್ ಮೂಲಕ ಈ ಆಸ್ತಿ ಕಾರ್ಡ್ ಪಡೆಯಬಹುದು. ಈ ಯೋಜನೆಯಿಂದ ಸಾಲ ಪಡೆಯಲು ಸಹಾಯಕವಾಗಲಿದೆ. ಸಂಪೂರ್ಣ್ ಡಿಜಿಟಲ್ ಟಚ್ ನೀಡಲಾಗಿದ್ದು ತಂತ್ರಜ್ಞಾನ ಬಳಕೆ ಮಾಡಲಾಗಿದೆ. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ದೇಶದಾದ್ಯಂತ ಯೋಜನೆ ಜಾರಿ ಮಾಡಲು ನಿರ್ಧರಿಸಿದ್ದು, ಯೋಜನೆಯಿಂದ ಒಟ್ಟು 6.62 ಲಕ್ಷ ಗ್ರಾಮಗಳನ್ನು ಮುಟ್ಟುವ ಉದ್ದೇಶ ಹೊಂದಲಾಗಿದೆ. ಇಂದು ಪ್ರಧಾನಿ ಮೋದಿ ಜಾರಿ ಮಾಡಲಿರುವ ಯೋಜನೆಯಲ್ಲಿ ಆರು ರಾಜ್ಯಗಳ 763 ಗ್ರಾಮಗಳಿಂದ ಫಲಾನುಭವಿಗಳನ್ನು ಗುರುತಿಸಲಾಗಿದೆ. ಕರ್ನಾಟಕದ ಇಬ್ಬರು, ಉತ್ತರ ಪ್ರದೇಶದ 346, ಹರಿಯಾಣದ 221 , ಮಹಾರಾಷ್ಟ್ರದ 100 , ಮಧ್ಯಪ್ರದೇಶದ 44, ಉತ್ತರಾಖಂಡದ 50 ಮಂದಿ ‘ಸ್ವಾಮಿತ್ವ’ ಕಾರ್ಡ್ ಸ್ವೀಕರಿಸಲಿದ್ದಾರೆ.

ಸ್ವಾಮಿತ್ವ ಯೋಜನೆ ಎಂಬುದು ಪಂಚಾಯತ್ ರಾಜ್ ಸಚಿವಾಲಯದ ಯೋಜನೆಯಾಗಿದ್ದು, ರಾಷ್ಟ್ರೀಯ ಪಂಚಾಯತ್‌ ದಿನವಾದ ಏ. 24ರಂದು ಘೋಷಿಸಲಾಗಿತ್ತು. ಈ ಯೋಜನೆ ಇಂದು ಚಾಲನೆ ನೀಡಲಿರುವ ಮೋದಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ