AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಲಿಂಕ್​ನಲ್ಲೇ ಸಿಗಲಿದೆ ಆಸ್ತಿ ಕಾರ್ಡ್​, ಹಳ್ಳಿಗರ ಬದುಕು ಬದಲಾಯಿಸಲಿದೆ ಸ್ವಾಮಿತ್ವ ಯೋಜನೆ

ದೆಹಲಿ: ಗ್ರಾಮೀಣ ಭಾರತದ ಬದಲಾವಣೆಗೆ ಪ್ರಧಾನಿ ಮೋದಿ ಇಂದು ಐತಿಹಾಸಿಕ ಯೋಜನೆ ಜಾರಿಗೆ ತರುತ್ತಿದ್ದಾರೆ.‌ ಹಾಗಾದ್ರೆ ಪ್ರಧಾನಿ ಮೋದಿ ಜಾರಿಗೆ ತರುತ್ತಿರುವ ಈ ಯೋಜನೆಯಲ್ಲಿ ಏನಿದೆ? ಹಳ್ಳಿಯವ್ರಿಗೆ ಏನ್ ಲಾಭ ಅನ್ನೋದನ್ನು ಇಲ್ಲಿ ಓದಿ.. ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾರತವನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಯೋಜನೆಯೊಂದನ್ನು ಜಾರಿಗೆ ತರುತ್ತಿದ್ದಾರೆ. ಗ್ರಾಮೀಣ ಭಾರತವನ್ನು ಪರಿವರ್ತಿಸುವ ಲಕ್ಷಾಂತರ ಹಳ್ಳಿಗರ ಸಬಲೀಕರಣಕ್ಕೆ ಈ ಯೋಜನೆ ಮಹತ್ವದ್ದಾಗಿದೆ. ಗ್ರಾಮೀಣ ಭಾರತಕ್ಕೆ ಪ್ರಧಾನಿ ಮೋದಿ ‘ಸ್ವಾಮಿತ್ವ’ ಯೋಜನೆ ಮೋದಿ ಇಂದು ಜಾರಿಗೆ ತರುತ್ತಿರುವ […]

ಮೊಬೈಲ್ ಲಿಂಕ್​ನಲ್ಲೇ ಸಿಗಲಿದೆ ಆಸ್ತಿ ಕಾರ್ಡ್​, ಹಳ್ಳಿಗರ ಬದುಕು ಬದಲಾಯಿಸಲಿದೆ ಸ್ವಾಮಿತ್ವ ಯೋಜನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 11, 2020 | 8:03 AM

Share

ದೆಹಲಿ: ಗ್ರಾಮೀಣ ಭಾರತದ ಬದಲಾವಣೆಗೆ ಪ್ರಧಾನಿ ಮೋದಿ ಇಂದು ಐತಿಹಾಸಿಕ ಯೋಜನೆ ಜಾರಿಗೆ ತರುತ್ತಿದ್ದಾರೆ.‌ ಹಾಗಾದ್ರೆ ಪ್ರಧಾನಿ ಮೋದಿ ಜಾರಿಗೆ ತರುತ್ತಿರುವ ಈ ಯೋಜನೆಯಲ್ಲಿ ಏನಿದೆ? ಹಳ್ಳಿಯವ್ರಿಗೆ ಏನ್ ಲಾಭ ಅನ್ನೋದನ್ನು ಇಲ್ಲಿ ಓದಿ..

ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾರತವನ್ನು ಗಮನದಲ್ಲಿಟ್ಟುಕೊಂಡು ಇಂದು ಮಹತ್ವದ ಯೋಜನೆಯೊಂದನ್ನು ಜಾರಿಗೆ ತರುತ್ತಿದ್ದಾರೆ. ಗ್ರಾಮೀಣ ಭಾರತವನ್ನು ಪರಿವರ್ತಿಸುವ ಲಕ್ಷಾಂತರ ಹಳ್ಳಿಗರ ಸಬಲೀಕರಣಕ್ಕೆ ಈ ಯೋಜನೆ ಮಹತ್ವದ್ದಾಗಿದೆ.

ಗ್ರಾಮೀಣ ಭಾರತಕ್ಕೆ ಪ್ರಧಾನಿ ಮೋದಿ ‘ಸ್ವಾಮಿತ್ವ’ ಯೋಜನೆ ಮೋದಿ ಇಂದು ಜಾರಿಗೆ ತರುತ್ತಿರುವ ಸ್ವಾಮಿತ್ವ ಯೋಜನೆ ಆಸ್ತಿ ಕಾರ್ಡ್ ಅಥವಾ ಪ್ರಾಪರ್ಟಿ ಕಾರ್ಡ್​ಗೆ ಸಂಬಂಧಿಸಿದ್ದಾಗಿದೆ‌. ಈ ಯೋಜನೆಯ ಚಾಲನೆಯಿಂದಾಗಿ ಸುಮಾರು ಒಂದು ಲಕ್ಷ ಆಸ್ತಿ ಮಾಲೀಕರು ತಮ್ಮ ಮೊಬೈಲ್‌ನ SMS ಲಿಂಕ್ ಮೂಲಕವೇ ಆಸ್ತಿ ಕಾರ್ಡ್ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಸಾಲ ಪಡೆಯಲು ಹಾಗೂ ಇತರೆ ಆರ್ಥಿಕ ನೆರವುಗಳನ್ನು ಪಡೆಯಲು ಗ್ರಾಮೀಣ ಜನರು ಈ ಕಾರ್ಡ್‌ಗಳನ್ನು ಬಳಕೆ ಮಾಡಬಹುದಾಗಿದೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಗ್ರಾಮೀಣ ಜನರು, ಅವರ ಮೊಬೈಲ್‌ ಫೋನ್‌ಗೆ ಕಳುಹಿಸಲಾದ ಲಿಂಕ್‌ ಬಳಸಿ ಆಸ್ತಿ ಕಾರ್ಡ್​ಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ತದ ನಂತರ ಆಯಾ ರಾಜ್ಯ ಸರ್ಕಾರಗಳು ಪ್ರಾಪರ್ಟಿ ಕಾರ್ಡ್‌ ವಿತರಿಸಲು ಕ್ರಮಕೈಗೊಳ್ಳಲಿವೆ.

ಯೋಜನೆ ಉದ್ದೇಶ ಏನು? SMS ಲಿಂಕ್ ಮೂಲಕ ಈ ಆಸ್ತಿ ಕಾರ್ಡ್ ಪಡೆಯಬಹುದು. ಈ ಯೋಜನೆಯಿಂದ ಸಾಲ ಪಡೆಯಲು ಸಹಾಯಕವಾಗಲಿದೆ. ಸಂಪೂರ್ಣ್ ಡಿಜಿಟಲ್ ಟಚ್ ನೀಡಲಾಗಿದ್ದು ತಂತ್ರಜ್ಞಾನ ಬಳಕೆ ಮಾಡಲಾಗಿದೆ. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ದೇಶದಾದ್ಯಂತ ಯೋಜನೆ ಜಾರಿ ಮಾಡಲು ನಿರ್ಧರಿಸಿದ್ದು, ಯೋಜನೆಯಿಂದ ಒಟ್ಟು 6.62 ಲಕ್ಷ ಗ್ರಾಮಗಳನ್ನು ಮುಟ್ಟುವ ಉದ್ದೇಶ ಹೊಂದಲಾಗಿದೆ. ಇಂದು ಪ್ರಧಾನಿ ಮೋದಿ ಜಾರಿ ಮಾಡಲಿರುವ ಯೋಜನೆಯಲ್ಲಿ ಆರು ರಾಜ್ಯಗಳ 763 ಗ್ರಾಮಗಳಿಂದ ಫಲಾನುಭವಿಗಳನ್ನು ಗುರುತಿಸಲಾಗಿದೆ. ಕರ್ನಾಟಕದ ಇಬ್ಬರು, ಉತ್ತರ ಪ್ರದೇಶದ 346, ಹರಿಯಾಣದ 221 , ಮಹಾರಾಷ್ಟ್ರದ 100 , ಮಧ್ಯಪ್ರದೇಶದ 44, ಉತ್ತರಾಖಂಡದ 50 ಮಂದಿ ‘ಸ್ವಾಮಿತ್ವ’ ಕಾರ್ಡ್ ಸ್ವೀಕರಿಸಲಿದ್ದಾರೆ.

ಸ್ವಾಮಿತ್ವ ಯೋಜನೆ ಎಂಬುದು ಪಂಚಾಯತ್ ರಾಜ್ ಸಚಿವಾಲಯದ ಯೋಜನೆಯಾಗಿದ್ದು, ರಾಷ್ಟ್ರೀಯ ಪಂಚಾಯತ್‌ ದಿನವಾದ ಏ. 24ರಂದು ಘೋಷಿಸಲಾಗಿತ್ತು. ಈ ಯೋಜನೆ ಇಂದು ಚಾಲನೆ ನೀಡಲಿರುವ ಮೋದಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​