AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Telangana visit: ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದಲ್ಲಿ 62,000 ಕೋಟಿ ರೂ.ಗೂ ಅಧಿಕ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿ ಅವರು ಮುಂದಿನ 10 ದಿನಗಳ ಕಾಲ 12 ರಾಜ್ಯಗಳಿಗೆ ಪ್ರವಾಸ ಮಾಡಲಿದ್ದಾರೆ. ಇದೀಗ ಮೊದಲ ಭೇಟಿಯನ್ನು ತೆಲಂಗಾಣಕ್ಕೆ ನೀಡಿದ್ದಾರೆ. ವಿದ್ಯುತ್, ರೈಲು ಮತ್ತು ರಸ್ತೆ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

PM Modi Telangana visit: ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ
ಅಕ್ಷಯ್​ ಪಲ್ಲಮಜಲು​​
|

Updated on:Mar 04, 2024 | 12:57 PM

Share

ಹೈದರಾಬಾದ್, ಮಾ.4: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತೆಲಂಗಾಣದಲ್ಲಿ 62,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇಂದು ಮೋದಿ ಅವರು 29 ಯೋಜನೆಗಳ ಉದ್ಘಾಟನೆ ಹಾಗೂ ಶುಂಕಸ್ಥಾಪನೆ ಮಾಡಿದ್ದಾರೆ. ಪ್ರಧಾನಿ ಅವರು ಮುಂದಿನ 10 ದಿನಗಳ ಕಾಲ 12 ರಾಜ್ಯಗಳಿಗೆ ಪ್ರವಾಸ ಮಾಡಲಿದ್ದಾರೆ. ಇದೀಗ ಮೊದಲ ಭೇಟಿಯನ್ನು ತೆಲಂಗಾಣಕ್ಕೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಎಲ್ಲ ರಾಜ್ಯಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅಲ್ಲಿನ ಬಿಜೆಪಿ ಮುಖಂಡರ ಜತೆಗೆ ಮಾತುಕತೆ ಕೂಡ ನಡೆಸಲಿದ್ದಾರೆ. ಇನ್ನು ಮೋದಿ ಅವರು 62,000 ಕೋಟಿ ರೂ. ಗೂ ಹೆಚ್ಚು ಮೌಲ್ಯದ ವಿದ್ಯುತ್, ರೈಲು ಮತ್ತು ರಸ್ತೆ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಹಲವು ವರ್ಷಗಳಿಂದ ತೆಲಂಗಾಣ ಅಜ್ಞಾನದ ವಿಚಾರಕ್ಕೆ ಬಲಿಪಶುವಾಗಿತ್ತು. ಆದರೆ ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರವು ತೆಲಂಗಾಣದ ಅಭಿವೃದ್ಧಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ. ಇಂದು, ಆದಿಲಾಬಾದ್, ಬೇಲಾ ಮತ್ತು ಮುಲುಗುನಲ್ಲಿ ಎರಡು ಹೊಸ ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಸಮಾರಂಭವೂ ನಡೆಯಿತು. ಈ ಆಧುನಿಕ ರಸ್ತೆ ಮತ್ತು ರೈಲು ಮೂಲಸೌಕರ್ಯಗಳು ತೆಲಂಗಾಣವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದರು.

ಇಡೀ ಜಗತ್ತು ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಮಾತನಾಡುತ್ತಿದೆ. ಕಳೆದ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು ಬೆಳವಣಿಗೆ ಕಂಡಿರುವ ವಿಶ್ವದ ಏಕೈಕ ದೇಶ ಭಾರತವಾಗಿದೆ. ಶೀಘ್ರದಲ್ಲೇ, ನಮ್ಮ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಪ್ರಧಾನಿ ಹೇಳಿದರು. ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಮತ್ತು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಭಾಗವಹಿಸಿದರು.

ಪ್ರಧಾನಿ ಮೋದಿ ಅವರು ಪೆದ್ದಪಲ್ಲಿಯಲ್ಲಿ ತೆಲಂಗಾಣ ಸೂಪರ್ ಥರ್ಮಲ್ ಪವರ್ ಪ್ರಾಜೆಕ್ಟ್‌ನ ಎನ್‌ಟಿಪಿಸಿಯ 800 ಮೆಗಾವ್ಯಾಟ್ (ಯುನಿಟ್ -2)ನ್ನು ಉದ್ಘಾಟಿಸಿದರು. ಅಲ್ಟ್ರಾ-ಸೂಪರ್ಕ್ರಿಟಿಕಲ್ ತಂತ್ರಜ್ಞಾನದ ಅಡಿಯಲ್ಲಿ ತೆಲಂಗಾಣಕ್ಕೆ 85 ಪ್ರತಿಶತದಷ್ಟು ವಿದ್ಯುತ್​​ ಪೂರೈಕೆಯಾಗುತ್ತದೆ. ಭಾರತದ NTPC ಯ ಎಲ್ಲಾ ವಿದ್ಯುತ್ ಕೇಂದ್ರಗಳಲ್ಲಿ ಸರಿಸುಮಾರು 42 ಪ್ರತಿಶತದಷ್ಟು ವಿದ್ಯುತ್ ಉತ್ಪಾದನೆಯ ದಕ್ಷತೆಯನ್ನು ಹೊಂದಿದೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಸಂಸದರು, ಶಾಸಕರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: 1998ರ ತೀರ್ಪು ರದ್ದು ಮಾಡಿದ ಸುಪ್ರೀಂ

ಜತೆಗೆ ಮೋದಿ ಅವರು ಹೊಸದಾಗಿ ವಿದ್ಯುದೀಕರಣಗೊಂಡ ಅಂಬಾರಿ-ಅದಿಲಾಬಾದ್-ಪಿಂಪಲ್ಖುತಿ ರೈಲು ಮಾರ್ಗವನ್ನು ಸಹ ಉದ್ಘಾಟಿಸಿದರು. ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಮತ್ತು ತೆಲಂಗಾಣದಿಂದ ಛತ್ತೀಸ್‌ಗಢದೊಂದಿಗೆ NH-353B ​​ಮತ್ತು NH-163 ಮೂಲಕ ಸಂಪರ್ಕ ಸಾಧಿಸುವ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮೋದಿ ಅವರು ಅಡಿಪಾಯ ಹಾಕಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:27 pm, Mon, 4 March 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು