AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು; ಬಳಿಕ ವ್ಯಾಟಿಕನ್​ ನಗರಕ್ಕೆ ಪ್ರಯಾಣ

ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಬಳಿಕ ಪ್ರಧಾನಿ ಮೋದಿ ವ್ಯಾಟಿಕನ್​ ಸಿಟಿಗೆ ಭೇಟಿಕೊಡಲಿದ್ದಾರೆ. ಪೋಪ್ ಫ್ರಾನ್ಸಿಸ್​ ಮತ್ತು ವಿದೇಶಾಂಗ ಕಾರ್ಯದರ್ಶಿ ಕಾರ್ಡಿನಲ್​ ಪಿಯೆಟ್ರೋ ಪರೋಲಿನ್​​ರನ್ನು ಭೇಟಿ ಮಾಡುವರು. 

ಇಂದು ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು; ಬಳಿಕ ವ್ಯಾಟಿಕನ್​ ನಗರಕ್ಕೆ ಪ್ರಯಾಣ
ರೋಮ್​ ತಲುಪಿರುವ ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on: Oct 30, 2021 | 8:33 AM

Share

ನಿನ್ನೆ ರೋಮ್​​ಗೆ ತೆರಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಂದು ಜಿ20 ಶೃಂಗಸಭೆ (G20 Summit)ಯಲ್ಲಿ ಮಾತನಾಡಲಿದ್ದಾರೆ. ಕೊರೊನಾ ಸಾಂಕ್ರಾಮಿಕದಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ಎಂಬ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ನರೇಂದ್ರ ಮೋದಿಯವರು ನಿನ್ನೆ ರೋಮ್​​ಗೆ ತೆರಳಿದ ಬಳಿಕ ಮೊದಲು ಮಹಾತ್ಮ ಗಾಂಧಿ ಪ್ರತಿಮೆಗೆ  ಗೌರವ ಸಲ್ಲಿಸಿದ್ದಾರೆ. ಬಳಿಕ ಟ್ವೀಟ್​ ಮಾಡಿ, ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆಯಾಗಿರುವ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ನನಗೆ ರೋಮ್​​ನಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದರು.  ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್​​ರೊಂದಿಗೆ ಕೂಡ ಮಾತುಕತೆ ನಡೆಸಿದರು. 

ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಬಳಿಕ ಪ್ರಧಾನಿ ಮೋದಿ ವ್ಯಾಟಿಕನ್​ ಸಿಟಿಗೆ ಭೇಟಿಕೊಡಲಿದ್ದಾರೆ. ಪೋಪ್ ಫ್ರಾನ್ಸಿಸ್​ ಮತ್ತು ವಿದೇಶಾಂಗ ಕಾರ್ಯದರ್ಶಿ ಕಾರ್ಡಿನಲ್​ ಪಿಯೆಟ್ರೋ ಪರೋಲಿನ್​​ರನ್ನು ಭೇಟಿ ಮಾಡುವರು.  ಕೊವಿಡ್​ 19 ಸಾಂಕ್ರಾಮಿಕ ಕಾಲಿಟ್ಟ ಮೇಲೆ ಇದೇ ಮೊದಲ ಜಿ20 ಶೃಂಗಸಭೆ ನಾಯಕರ ಭಾಗವಹಿಸುವಿಕೆಯಲ್ಲಿ ನಡೆಯುತ್ತಿದೆ.  ನಿನ್ನೆ ಬೆಳಗ್ಗೆ  ಇಟಲಿಗೆ ಹೋಗಿ ಇಳಿದ ಪ್ರಧಾನಿ ಮೋದಿಯವರನ್ನು ಅಲ್ಲಿರುವ ಭಾರತೀಯರು ಮಂತ್ರ ಪಠಿಸಿ ಸ್ವಾಗತಿಸಿದ್ದಾರೆ.  ಇಟಲಿಗೆ ಹೋಗುವ ಪೂರ್ವದಲ್ಲಿ ಮಾತನಾಡಿದ್ದ ಅವರು, ಸದ್ಯದ ಜಾಗತಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಈ ಜಿ20 ಶೃಂಗಸಭೆ ನಮಗೆ ವೇದಿಕೆಯಾಗಿದೆ. ಹಾಗೇ, ಆರ್ಥಿಕ ಸಬಲೀಕರಣ, ಸಾಂಕ್ರಾಮಿಕದಿಂದ ಉಂಟಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು, ಸ್ಥಿತಿಸ್ಥಾಪಕತ್ವ ಅಭಿವೃದ್ಧಿ ಸ್ಥಾಪಿಸಲು ಜಿ20 ಹೇಗೆ ಎಂಜಿನ್​ ಆಗಬಹುದು ಎಂಬುದನ್ನು ನಾವು ಚರ್ಚಿಸಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Puneeth Rajkumar Death: ಅಪ್ಪು ಅಂತಿಮ ದರ್ಶನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಸೆಲೆಬ್ರಿಟಿಗಳು; ಫ್ಯಾನ್ಸ್​ ಕಣ್ಣೀರು ತಡೆಯಲು ಸಾಧ್ಯವಿಲ್ಲ​

ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ