AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು; ಬಳಿಕ ವ್ಯಾಟಿಕನ್​ ನಗರಕ್ಕೆ ಪ್ರಯಾಣ

ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಬಳಿಕ ಪ್ರಧಾನಿ ಮೋದಿ ವ್ಯಾಟಿಕನ್​ ಸಿಟಿಗೆ ಭೇಟಿಕೊಡಲಿದ್ದಾರೆ. ಪೋಪ್ ಫ್ರಾನ್ಸಿಸ್​ ಮತ್ತು ವಿದೇಶಾಂಗ ಕಾರ್ಯದರ್ಶಿ ಕಾರ್ಡಿನಲ್​ ಪಿಯೆಟ್ರೋ ಪರೋಲಿನ್​​ರನ್ನು ಭೇಟಿ ಮಾಡುವರು. 

ಇಂದು ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು; ಬಳಿಕ ವ್ಯಾಟಿಕನ್​ ನಗರಕ್ಕೆ ಪ್ರಯಾಣ
ರೋಮ್​ ತಲುಪಿರುವ ಪ್ರಧಾನಿ ಮೋದಿ
TV9 Web
| Edited By: |

Updated on: Oct 30, 2021 | 8:33 AM

Share

ನಿನ್ನೆ ರೋಮ್​​ಗೆ ತೆರಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಂದು ಜಿ20 ಶೃಂಗಸಭೆ (G20 Summit)ಯಲ್ಲಿ ಮಾತನಾಡಲಿದ್ದಾರೆ. ಕೊರೊನಾ ಸಾಂಕ್ರಾಮಿಕದಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ಎಂಬ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ನರೇಂದ್ರ ಮೋದಿಯವರು ನಿನ್ನೆ ರೋಮ್​​ಗೆ ತೆರಳಿದ ಬಳಿಕ ಮೊದಲು ಮಹಾತ್ಮ ಗಾಂಧಿ ಪ್ರತಿಮೆಗೆ  ಗೌರವ ಸಲ್ಲಿಸಿದ್ದಾರೆ. ಬಳಿಕ ಟ್ವೀಟ್​ ಮಾಡಿ, ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆಯಾಗಿರುವ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ನನಗೆ ರೋಮ್​​ನಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದರು.  ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್​​ರೊಂದಿಗೆ ಕೂಡ ಮಾತುಕತೆ ನಡೆಸಿದರು. 

ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಬಳಿಕ ಪ್ರಧಾನಿ ಮೋದಿ ವ್ಯಾಟಿಕನ್​ ಸಿಟಿಗೆ ಭೇಟಿಕೊಡಲಿದ್ದಾರೆ. ಪೋಪ್ ಫ್ರಾನ್ಸಿಸ್​ ಮತ್ತು ವಿದೇಶಾಂಗ ಕಾರ್ಯದರ್ಶಿ ಕಾರ್ಡಿನಲ್​ ಪಿಯೆಟ್ರೋ ಪರೋಲಿನ್​​ರನ್ನು ಭೇಟಿ ಮಾಡುವರು.  ಕೊವಿಡ್​ 19 ಸಾಂಕ್ರಾಮಿಕ ಕಾಲಿಟ್ಟ ಮೇಲೆ ಇದೇ ಮೊದಲ ಜಿ20 ಶೃಂಗಸಭೆ ನಾಯಕರ ಭಾಗವಹಿಸುವಿಕೆಯಲ್ಲಿ ನಡೆಯುತ್ತಿದೆ.  ನಿನ್ನೆ ಬೆಳಗ್ಗೆ  ಇಟಲಿಗೆ ಹೋಗಿ ಇಳಿದ ಪ್ರಧಾನಿ ಮೋದಿಯವರನ್ನು ಅಲ್ಲಿರುವ ಭಾರತೀಯರು ಮಂತ್ರ ಪಠಿಸಿ ಸ್ವಾಗತಿಸಿದ್ದಾರೆ.  ಇಟಲಿಗೆ ಹೋಗುವ ಪೂರ್ವದಲ್ಲಿ ಮಾತನಾಡಿದ್ದ ಅವರು, ಸದ್ಯದ ಜಾಗತಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಈ ಜಿ20 ಶೃಂಗಸಭೆ ನಮಗೆ ವೇದಿಕೆಯಾಗಿದೆ. ಹಾಗೇ, ಆರ್ಥಿಕ ಸಬಲೀಕರಣ, ಸಾಂಕ್ರಾಮಿಕದಿಂದ ಉಂಟಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು, ಸ್ಥಿತಿಸ್ಥಾಪಕತ್ವ ಅಭಿವೃದ್ಧಿ ಸ್ಥಾಪಿಸಲು ಜಿ20 ಹೇಗೆ ಎಂಜಿನ್​ ಆಗಬಹುದು ಎಂಬುದನ್ನು ನಾವು ಚರ್ಚಿಸಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Puneeth Rajkumar Death: ಅಪ್ಪು ಅಂತಿಮ ದರ್ಶನದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಸೆಲೆಬ್ರಿಟಿಗಳು; ಫ್ಯಾನ್ಸ್​ ಕಣ್ಣೀರು ತಡೆಯಲು ಸಾಧ್ಯವಿಲ್ಲ​

ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​