AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಂಚಿಕೆ: ಪ್ರಧಾನಿ ಮೋದಿ ಜೊತೆ ನಾಳೆ ಸಿಎಂಗಳ ಮಹತ್ವದ ಸಭೆ

ದೆಹಲಿ: ಕೊರೊನಾ ಲಸಿಕೆ ಲಭ್ಯವಾಗುತ್ತಿದ್ದಂತೆ ಅದನ್ನು ದೇಶದಾದ್ಯಂತ ಹಂಚುವ ಯೋಜನೆ ರೂಪಿಸಲು ಪ್ರಧಾನಿ ನರೇಂದ್ರ ಮೋದಿ ನಾಳೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ಹಂಚಿಕೆ, ಸಂಗ್ರಹ ಘಟಕಗಳ ಸ್ಥಾಪನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದುಬಂದಿದೆ. ನೀತಿ ಆಯೋಗದ ಸದಸ್ಯ ವಿನೋದ್ ಪೌಲ್, ಜನಪ್ರತಿನಿಧಿಗಳ ಸಭೆಯಲ್ಲಿ ಯೋಜನೆಯ ರೂಪುರೇಷೆ ಮಂಡಿಸಲಿದ್ದಾರೆ. ಈ ವರ್ಷಾಂತ್ಯಕ್ಕೆ ಆಕ್ಸ್​ಫರ್ಡ್ ವಿವಿಯ ಆಸ್ಟ್ರಾ ಜೆನೆಕಾ  ಲಸಿಕೆಗೆ ಬ್ರಿಟನ್ ಸರ್ಕಾರ ಅನುಮತಿ ನೀಡಬಹುದು. ಅನುಮತಿ ಸಿಕ್ಕರೆ […]

ಕೊರೊನಾ ಲಸಿಕೆ ಹಂಚಿಕೆ: ಪ್ರಧಾನಿ ಮೋದಿ ಜೊತೆ ನಾಳೆ ಸಿಎಂಗಳ ಮಹತ್ವದ ಸಭೆ
Skanda
| Edited By: |

Updated on: Nov 23, 2020 | 6:29 PM

Share

ದೆಹಲಿ: ಕೊರೊನಾ ಲಸಿಕೆ ಲಭ್ಯವಾಗುತ್ತಿದ್ದಂತೆ ಅದನ್ನು ದೇಶದಾದ್ಯಂತ ಹಂಚುವ ಯೋಜನೆ ರೂಪಿಸಲು ಪ್ರಧಾನಿ ನರೇಂದ್ರ ಮೋದಿ ನಾಳೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ಹಂಚಿಕೆ, ಸಂಗ್ರಹ ಘಟಕಗಳ ಸ್ಥಾಪನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದುಬಂದಿದೆ.

ನೀತಿ ಆಯೋಗದ ಸದಸ್ಯ ವಿನೋದ್ ಪೌಲ್, ಜನಪ್ರತಿನಿಧಿಗಳ ಸಭೆಯಲ್ಲಿ ಯೋಜನೆಯ ರೂಪುರೇಷೆ ಮಂಡಿಸಲಿದ್ದಾರೆ. ಈ ವರ್ಷಾಂತ್ಯಕ್ಕೆ ಆಕ್ಸ್​ಫರ್ಡ್ ವಿವಿಯ ಆಸ್ಟ್ರಾ ಜೆನೆಕಾ  ಲಸಿಕೆಗೆ ಬ್ರಿಟನ್ ಸರ್ಕಾರ ಅನುಮತಿ ನೀಡಬಹುದು. ಅನುಮತಿ ಸಿಕ್ಕರೆ ಪುಣೆಯ ಸೀರಮ್ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾ ಮೂಲಕ ಲಸಿಕೆ ಭಾರತಕ್ಕೆ ಲಭ್ಯವಾಗಲಿದೆ. ಯಾವುದೇ ಅಡೆತಡೆಗಳಿಲ್ಲದೆ ಪ್ರಯೋಗಗಳು ಮುಂದುವರಿದರೆ 2021ರ ಜನವರಿ ವೇಳೆಗೆ ಮೂರನೇ ಹಂತದ ಪರೀಕ್ಷೆ ಮುಗಿಯಬಹುದು ಎಂದು ಪೌಲ್ ತಿಳಿಸಿದ್ದಾರೆ.

ಬ್ರಿಟನ್​ನಿಂದ ಲಸಿಕೆ ತರಿಸಿಕೊಂಡರೂ ಸಂಗ್ರಹ ಸಾಮರ್ಥ್ಯದ ಕೊರತೆ ಉಂಟಾಗಬಹುದು. ಹೀಗಾಗಿ, ಲಸಿಕೆ ಹಂಚಲು ರಾಜ್ಯಗಳು ಮಾಡಿಕೊಳ್ಳಬೇಕಾದ ತಯಾರಿ ಬಗ್ಗೆ ಪೌಲ್ ಪ್ರಸ್ತಾಪಿಸಲಿದ್ದಾರೆ. ಆಕ್ಸ್​ಫರ್ಡ್ ವಿವಿ ಲಸಿಕೆಯ ಮೂರನೇ ಹಂತದ ಪರೀಕ್ಷೆಯನ್ನು ಸೀರಮ್ ಇನ್​ಸ್ಟಿಟ್ಯೂಟ್ ನಡೆಸುತ್ತಿದೆ. ಅಲ್ಲದೇ, ದೇಶದಲ್ಲಿ ಒಟ್ಟು 5 ಲಸಿಕೆಗಳ ಪರೀಕ್ಷೆಗಳು ನಡೆಯುತ್ತಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಲಸಿಕೆ ತಲುಪಬೇಕು ಎಂಬುದೇ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಜಿ20 ಶೃಂಗಸಭೆಯಲ್ಲೂ ಚರ್ಚೆ ಕೊರೊನಾ ಲಸಿಕೆ ಹಂಚಿಕೆ ಕುರಿತು ರವಿವಾರ ನಡೆದ ಜಿ20 ಶೃಂಗಸಭೆಯಲ್ಲಿ ಚರ್ಚಿಸಲಾಗಿದೆ. ಲಸಿಕೆಯನ್ನು ಎಲ್ಲರಿಗೂ ತಲುಪಿಸಬಲ್ಲ ಪರಿಣಾಮಕಾರಿ ಯೋಜನೆ ರೂಪಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳುವುದಾಗಿ ಶೃಂಗಸಭೆಯಲ್ಲಿ ಭಾಗಿಯಾಗಿದ್ದ ನಾಯಕರು ತಿಳಿಸಿದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ