AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Barisu Kannada Dim Dimava: ಇಂದು ದೆಹಲಿಯಲ್ಲಿ ಬಾರಿಸು ಕನ್ನಡ ಡಿಂಡಿಮವ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಫೆ.25) ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Barisu Kannada Dim Dimava: ಇಂದು ದೆಹಲಿಯಲ್ಲಿ ಬಾರಿಸು ಕನ್ನಡ ಡಿಂಡಿಮವ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on:Feb 25, 2023 | 9:47 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಫೆ.25) ದೆಹಲಿಯ (Delhi) ಟಾಲ್ಕಟೋರಾ ಸ್ಟೇಡಿಯಂನಲ್ಲಿ ಸಾಯಂಕಾಲ 5 ಗಂಟೆಗೆ ‘ಬಾರಿಸು ಕನ್ನಡ ಡಿಂಡಿಮವ’ (Barisu Kannada Dim Dimava) ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿ ಕರ್ನಾಟಕ ಸಂಘದ (Delhi Karnataka Sangha) 75 ನೇ ವಾರ್ಷಿಕೋತ್ಸವದ ಎರಡು (25 ಮತ್ತು 26) ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ ಭಾರತ ಶ್ರೇಷ್ಠ ಭಾರತ’ದ (Ek Bharat Shret Bharat) ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯದುವೀರ್ ಒಡೆಯರ್​ ಭಾಗವಹಿಸಲಿದ್ದಾರೆ. ಹಾಗೇ ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಅಧಿಕ ಹೊರನಾಡ ಕನ್ನಡಿಗರು ಭಾಗಿ ನಿರೀಕ್ಷೆ ಇದೆ.

ಕಾರ್ಯಕ್ರಮ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 12 ಗಂಟೆಗೆ HALನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಾರೆ. ಮರಳಿ ದೆಹಲಿಯಿಂದ ಹುಬ್ಬಳ್ಳಿಗೆ ವಾಪಸಾಗಲಿದ್ದಾರೆ.

ಈ ಉತ್ಸವದ ಎರಡು ದಿನಗಳ ಆಚರಣೆಯಲ್ಲಿ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶನವಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ 1,000ಕ್ಕೂ ಹೆಚ್ಚು ಕಲಾವಿದರನ್ನು ಆಹ್ವಾನಿಸಲಾಗಿದೆ.

ಇಂದು ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಡಿ ವೀರೇಂದ್ರ ಹೆಗ್ಗಡೆ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಬಿಜೆಪಿ ಮುಖಂಡ ಸಿ.ಟಿ ರವಿ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಫೆಬ್ರವರಿ 26 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಉಪಸ್ಥಿತರಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:52 am, Sat, 25 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ