AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಜ.21ರಂದು ಗುಜರಾತ್ ಸೋಮನಾಥ ದೇಗುಲ ಸಮೀಪದ ಸರ್ಕೀಟ್ ಹೌಸ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ​

ದೇಗುಲದ ಸಮೀಪದಲ್ಲೇ 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಸದ್ಯ ಇಲ್ಲಿಗೆ ಭಕ್ತರು ಉಳಿದುಕೊಳ್ಳಲು ಸರ್ಕಾರದಿಂದ ಮಾಡಲಾದ ವಸತಿ ವ್ಯವಸ್ಥೆಗಳೆಲ್ಲ ದೇಗುಲದಿಂದ ದೂರದಲ್ಲಿವೆ. ಹೀಗಾಗಿ ಹೊಸ ಸರ್ಕೀಟ್​ ಹೌಸ್​ ನಿರ್ಮಾಣವಾಗಿದೆ.

PM Narendra Modi: ಜ.21ರಂದು ಗುಜರಾತ್ ಸೋಮನಾಥ ದೇಗುಲ ಸಮೀಪದ ಸರ್ಕೀಟ್ ಹೌಸ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ​
ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Jan 20, 2022 | 6:57 PM

Share

ಗುಜರಾತ್​​ನ ಸೋಮನಾಥ ದೇವಾಲಯದ ಸಮೀಪ ಒಂದು ಸರ್ಕೀಟ್​ ಹೌಸ್​​ನ್ನು ಜನವರಿ 21ರಂದು ಬೆಳಗ್ಗೆ 11ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. ಸೋಮನಾಥ ದೇವಾಲಯ ದೇಶದ ಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿದ್ದು, ಇಲ್ಲಿಗೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತಾರೆ. ಕೇವಲ ಭಾರತದ ಭಕ್ತರಷ್ಟೇ ಅಲ್ಲ, ವಿದೇಶಗಳಿಂದಲೂ ಜನರು ಇಲ್ಲಿಗೆ ಆಗಮಿಸುತ್ತಾರೆ.

ಗುಜರಾತ್​ನ ಜುನಾಗಢ್ ಜಿಲ್ಲೆಯ ಪ್ರಭಾಸ ಎಂಬಲ್ಲಿರುವ ಸೋಮನಾಥ ದೇಗುಲದಲ್ಲಿ ಜ್ಯೋತಿರ್ಲಿಂಗ ಪೂಜೆ ನಡೆಯುತ್ತದೆ. ಸರ್ದಾರ್ ವಲ್ಲಭಭಾಯಿ ಪಟೇಲ್​ರು ಇದನ್ನು ಕಟ್ಟಿಸಿದ್ದು, ಪ್ರಧಾನಿ ಮೋದಿಯವರು ಕೂಡ ಹಲವು ನವೀಕರಣ ಕೆಲಸಗಳನ್ನು ಇಲ್ಲಿ ಮಾಡಿಸಿದ್ದಾರೆ. ಹೀಗೆ ದೇಶ-ವಿದೇಶಗಳಿಂದ ಅನೇಕ ಭಕ್ತರು ಇಲ್ಲಿಗೆ ಬರುತ್ತಿರುವುದರಿಂದ ಒಂದು ಸರ್ಕೀಟ್ ಹೌಸ್ ಅಗತ್ಯವಿತ್ತು ಎಂಬುದನ್ನು ಗಮನಿಸಿ, ದೇಗುಲದ ಸಮೀಪದಲ್ಲೇ 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಸದ್ಯ ಇಲ್ಲಿಗೆ ಭಕ್ತರು ಉಳಿದುಕೊಳ್ಳಲು ಸರ್ಕಾರದಿಂದ ಮಾಡಲಾದ ವಸತಿ ವ್ಯವಸ್ಥೆಗಳೆಲ್ಲ ದೇಗುಲದಿಂದ ದೂರದಲ್ಲಿವೆ. ಹಾಗಾಗಿ ಭಕ್ತರಿಗೆ ಇನ್ನಷ್ಟು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ದೇವಾಲಯದ ಬಳಿಯೇ ಸರ್ಕೀಟ್​ ಹೌಸ್ ಕಟ್ಟಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.

ಜನವರಿ 21ರಂದು ಬೆಳಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ಕೀಟ್ ಹೌಸ್​ ಉದ್ಘಾಟನೆ ಮಾಡಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಇದೀಗ ಹೊಸದಾಗಿ ನಿರ್ಮಾಣವಾದ ಸರ್ಕೀಟ್ ಹೌಸ್​ನಲ್ಲಿ ಐಷಾರಾಮಿ ವ್ಯವಸ್ಥೆಗಳಿವೆ. ವಿಐಪಿ ಕೊಠಡಿಗಳನ್ನು ಹೊಂದಿದೆ. ಕಾನ್ಫರೆನ್ಸ್​ ಕೊಠಡಿಗಳಿವೆ, ಅಡಿಟೋರಿಯಂ ಹಾಲ್​ ಇದೆ ಎಂದೂ ಪಿಎಂಒ ತಿಳಿಸಿದೆ.

ಇದನ್ನೂ ಓದಿ:  Petrol- Diesel Price: ತೈಲ ಬೆಲೆ 7 ವರ್ಷದ ಗರಿಷ್ಠ, 4 ವಾರಗಳಲ್ಲಿ ಶೇ 25ರಷ್ಟು ಹೆಚ್ಚಳ; ಪೆಟ್ರೋಲ್, ಡೀಸೆಲ್ ದರ ಏರಿಕೆ ಸಾಧ್ಯತೆ

ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಸರೋಜಾದೇವಿ ಅವರೊಂದಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟ ನಟ ಜಗ್ಗೇಶ್
ಸರೋಜಾದೇವಿ ಅವರೊಂದಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟ ನಟ ಜಗ್ಗೇಶ್
ಯೋಜನೆಯ 500ನೇ ಕೋಟಿ ಟಿಕೆಟ್ ವಿತರಿಸಲಿರುವ ಸಿದ್ದರಾಮಯ್ಯ
ಯೋಜನೆಯ 500ನೇ ಕೋಟಿ ಟಿಕೆಟ್ ವಿತರಿಸಲಿರುವ ಸಿದ್ದರಾಮಯ್ಯ
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಚಾಲಕನ ನಿಯಂತ್ರಣ ತಪ್ಪಿ ಅನಾಹುತ, ಬೆಂಗಳೂರು ಮೂಲದ ಕಾರು!
ಚಾಲಕನ ನಿಯಂತ್ರಣ ತಪ್ಪಿ ಅನಾಹುತ, ಬೆಂಗಳೂರು ಮೂಲದ ಕಾರು!
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ