AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಜ.21ರಂದು ಗುಜರಾತ್ ಸೋಮನಾಥ ದೇಗುಲ ಸಮೀಪದ ಸರ್ಕೀಟ್ ಹೌಸ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ​

ದೇಗುಲದ ಸಮೀಪದಲ್ಲೇ 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಸದ್ಯ ಇಲ್ಲಿಗೆ ಭಕ್ತರು ಉಳಿದುಕೊಳ್ಳಲು ಸರ್ಕಾರದಿಂದ ಮಾಡಲಾದ ವಸತಿ ವ್ಯವಸ್ಥೆಗಳೆಲ್ಲ ದೇಗುಲದಿಂದ ದೂರದಲ್ಲಿವೆ. ಹೀಗಾಗಿ ಹೊಸ ಸರ್ಕೀಟ್​ ಹೌಸ್​ ನಿರ್ಮಾಣವಾಗಿದೆ.

PM Narendra Modi: ಜ.21ರಂದು ಗುಜರಾತ್ ಸೋಮನಾಥ ದೇಗುಲ ಸಮೀಪದ ಸರ್ಕೀಟ್ ಹೌಸ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ​
ನರೇಂದ್ರ ಮೋದಿ
TV9 Web
| Edited By: |

Updated on: Jan 20, 2022 | 6:57 PM

Share

ಗುಜರಾತ್​​ನ ಸೋಮನಾಥ ದೇವಾಲಯದ ಸಮೀಪ ಒಂದು ಸರ್ಕೀಟ್​ ಹೌಸ್​​ನ್ನು ಜನವರಿ 21ರಂದು ಬೆಳಗ್ಗೆ 11ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. ಸೋಮನಾಥ ದೇವಾಲಯ ದೇಶದ ಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿದ್ದು, ಇಲ್ಲಿಗೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತಾರೆ. ಕೇವಲ ಭಾರತದ ಭಕ್ತರಷ್ಟೇ ಅಲ್ಲ, ವಿದೇಶಗಳಿಂದಲೂ ಜನರು ಇಲ್ಲಿಗೆ ಆಗಮಿಸುತ್ತಾರೆ.

ಗುಜರಾತ್​ನ ಜುನಾಗಢ್ ಜಿಲ್ಲೆಯ ಪ್ರಭಾಸ ಎಂಬಲ್ಲಿರುವ ಸೋಮನಾಥ ದೇಗುಲದಲ್ಲಿ ಜ್ಯೋತಿರ್ಲಿಂಗ ಪೂಜೆ ನಡೆಯುತ್ತದೆ. ಸರ್ದಾರ್ ವಲ್ಲಭಭಾಯಿ ಪಟೇಲ್​ರು ಇದನ್ನು ಕಟ್ಟಿಸಿದ್ದು, ಪ್ರಧಾನಿ ಮೋದಿಯವರು ಕೂಡ ಹಲವು ನವೀಕರಣ ಕೆಲಸಗಳನ್ನು ಇಲ್ಲಿ ಮಾಡಿಸಿದ್ದಾರೆ. ಹೀಗೆ ದೇಶ-ವಿದೇಶಗಳಿಂದ ಅನೇಕ ಭಕ್ತರು ಇಲ್ಲಿಗೆ ಬರುತ್ತಿರುವುದರಿಂದ ಒಂದು ಸರ್ಕೀಟ್ ಹೌಸ್ ಅಗತ್ಯವಿತ್ತು ಎಂಬುದನ್ನು ಗಮನಿಸಿ, ದೇಗುಲದ ಸಮೀಪದಲ್ಲೇ 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಸದ್ಯ ಇಲ್ಲಿಗೆ ಭಕ್ತರು ಉಳಿದುಕೊಳ್ಳಲು ಸರ್ಕಾರದಿಂದ ಮಾಡಲಾದ ವಸತಿ ವ್ಯವಸ್ಥೆಗಳೆಲ್ಲ ದೇಗುಲದಿಂದ ದೂರದಲ್ಲಿವೆ. ಹಾಗಾಗಿ ಭಕ್ತರಿಗೆ ಇನ್ನಷ್ಟು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ದೇವಾಲಯದ ಬಳಿಯೇ ಸರ್ಕೀಟ್​ ಹೌಸ್ ಕಟ್ಟಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.

ಜನವರಿ 21ರಂದು ಬೆಳಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ಕೀಟ್ ಹೌಸ್​ ಉದ್ಘಾಟನೆ ಮಾಡಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಇದೀಗ ಹೊಸದಾಗಿ ನಿರ್ಮಾಣವಾದ ಸರ್ಕೀಟ್ ಹೌಸ್​ನಲ್ಲಿ ಐಷಾರಾಮಿ ವ್ಯವಸ್ಥೆಗಳಿವೆ. ವಿಐಪಿ ಕೊಠಡಿಗಳನ್ನು ಹೊಂದಿದೆ. ಕಾನ್ಫರೆನ್ಸ್​ ಕೊಠಡಿಗಳಿವೆ, ಅಡಿಟೋರಿಯಂ ಹಾಲ್​ ಇದೆ ಎಂದೂ ಪಿಎಂಒ ತಿಳಿಸಿದೆ.

ಇದನ್ನೂ ಓದಿ:  Petrol- Diesel Price: ತೈಲ ಬೆಲೆ 7 ವರ್ಷದ ಗರಿಷ್ಠ, 4 ವಾರಗಳಲ್ಲಿ ಶೇ 25ರಷ್ಟು ಹೆಚ್ಚಳ; ಪೆಟ್ರೋಲ್, ಡೀಸೆಲ್ ದರ ಏರಿಕೆ ಸಾಧ್ಯತೆ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್