AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chief Secretaries meeting: ಜನವರಿ 6 ಮತ್ತು 7ರಂದು ಮುಖ್ಯ ಕಾರ್ಯದರ್ಶಿಗಳ ಎರಡನೇ ಸಮಾವೇಶ, ಪ್ರಧಾನಿ ಮೋದಿ ಭಾಗಿ

PM Modi to meet chief secretaries: ಜನವರಿ 5 ರಂದು ಪ್ರಾರಂಭವಾಗುವ ಮೂರು ದಿನಗಳ ಸಮ್ಮೇಳನವು ಎಂಎಸ್‌ಎಂಇಗಳು, ಮೂಲಸೌಕರ್ಯ ಸೇರಿದಂತೆ ಒಟ್ಟು ಆರು ವಿಷಯಗಳ ಮೇಲೆ ಚರ್ಚೆಗಳು ನಡೆಯಲಿವೆ.

Chief Secretaries meeting: ಜನವರಿ 6 ಮತ್ತು 7ರಂದು ಮುಖ್ಯ ಕಾರ್ಯದರ್ಶಿಗಳ ಎರಡನೇ ಸಮಾವೇಶ, ಪ್ರಧಾನಿ ಮೋದಿ ಭಾಗಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: Rakesh Nayak Manchi|

Updated on: Jan 05, 2023 | 7:02 AM

Share

ನವ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನ (National Conference of Chief Secretaries)ವನ್ನು ಜನವರಿ 6 ಮತ್ತು 7ರಂದು ದೆಹಲಿಯಲ್ಲಿ ಆಯೋಜಿಸಲಾಗಿದ್ದು, ಸಮಾವೇಶದ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಹಿಸಲಿದ್ದಾರೆ. ನೀತಿ ಆಯೋಗ ಆಯೋಜಿಸಿರುವ ಈ ಸಭೆಯು ಪುಸಾ ರಸ್ತೆಯಲ್ಲಿರುವ ICAR-ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿದೆ. ಸಮ್ಮೇಳನವು ರಾಜ್ಯಗಳ ಸಹಭಾಗಿತ್ವದಲ್ಲಿ ತ್ವರಿತ ಮತ್ತು ನಿರಂತರ ಆರ್ಥಿಕ ಬೆಳವಣಿಗೆಯನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಕೇಂದ್ರ ಸರ್ಕಾರದ 200ಕ್ಕೂ ಹೆಚ್ಚು ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಇತರ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರದೊಂದಿಗೆ ಸಂಪರ್ಕ ಹೊಂದಿರುವ ಡೊಮೇನ್ ತಜ್ಞರು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಜನವರಿ 5 ರಂದು ಪ್ರಾರಂಭವಾಗುವ ಮೂರು ದಿನಗಳ ಸಮ್ಮೇಳನದಲ್ಲಿ ಎಂಎಸ್‌ಎಂಇ, ಮೂಲಸೌಕರ್ಯ ಮತ್ತು ಹೂಡಿಕೆಗಳು, ಮಹಿಳಾ ಸಬಲೀಕರಣ, ಆರೋಗ್ಯ ಮತ್ತು ಪೋಷಣೆ ಮತ್ತು ಕೌಶಲ್ಯ ಅಭಿವೃದ್ಧಿ ವಿಷಯಗಳ ಮೇಲೆ ಚರ್ಚೆಗಳು ನಡೆಯಲಿವೆ ಎಂದು ಎಂದು ಪ್ರಧಾನ ಮಂತ್ರಿ ಕಚೇರಿ (PMO) ಹೇಳಿಕೆ ತಿಳಿಸಿದೆ. “ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಅಂತರ್ಗತ ಮಾನವ ಅಭಿವೃದ್ಧಿಯ ಮೇಲೆ ಒತ್ತು ನೀಡುವ ವಿಕ್ಷಿತ್ ಭಾರತವನ್ನು ಸಾಧಿಸಲು ಸಹಕಾರಿ ಕ್ರಮಕ್ಕೆ ಸಮ್ಮೇಳನವು ಅಡಿಪಾಯ ಹಾಕುತ್ತದೆ” ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ನಡೆದ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿ ಭಾಷಣ ಮಾಡಿದ್ದ ಸಿದ್ದೇಶ್ವರ ಸ್ವಾಮೀಜಿ

ಸಮ್ಮೇಳನದಲ್ಲಿ ವಿಕ್ಸಿತ್ ಭಾರತ ಕುರಿತು ಮೂರು ವಿಶೇಷ ಗೋಷ್ಠಿಗಳನ್ನು ಸಹ ನಡೆಸಲಾಗುತ್ತದೆ. ಕೊನೆಯ ಮೈಲಿಯನ್ನು ತಲುಪುವುದು, ಜಿಎಸ್‌ಟಿ ಮತ್ತು ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳು ಮತ್ತು ಭಾರತದ ಪ್ರತಿಕ್ರಿಯೆ ಕುರಿತು ಮೂರು ವಿಶೇಷ ಚರ್ಚೆಗಳು ನಡೆಯಲಿವೆ.

ಮುಖ್ಯ ಕಾರ್ಯದರ್ಶಿಗಳೊಂದಿಗಿನ ಸಮ್ಮೇಳನ ಇದು ಎರಡನೇ ಆವೃತ್ತಿಯಾಗಿದೆ. 2022ರ ಜೂನ್ ತಿಂಗಳಲ್ಲಿ ಧರ್ಮಶಾಲಾದಲ್ಲಿ ಮೊದಲ ಸಮ್ಮೇಳನ ನಡೆದಿತ್ತು. 2022ರಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗಿನ ಇದೇ ರೀತಿಯ ಸಮ್ಮೇಳನದಲ್ಲಿ, ಮೋದಿ ಅವರು ಹೊಸ ಶಿಕ್ಷಣ ನೀತಿ (ಎನ್‌ಇಪಿ), ನಗರ ಆಡಳಿತ ಮತ್ತು ಬೆಳೆ ವೈವಿಧ್ಯೀಕರಣ ಮತ್ತು ಕೃಷಿ ಸರಕುಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸುವಂತಹ ನಿರ್ಣಾಯಕ ವಿಷಯಗಳ ಕುರಿತು ಚರ್ಚಿಸಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ