AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರುದ್ಯೋಗ ಸಮಸ್ಯೆಗೆ ಮೋದಿ ಟಾನಿಕ್! ವಿಶ್ವ ಹೂಡಿಕೆದಾರರ ದುಂಡುಮೇಜಿನ ಸಭೆ ಇಂದಿನಿಂದ

ದೆಹಲಿ: ನಮ್ಮ ದೇಶದಲ್ಲಿ ಕೊರೊನಾ ವೈರಸ್ ಹಾಗೂ ಲಾಕ್​ಡೌನ್​ನಿಂದಾಗಿ ಜನರು ಉದ್ಯೋಗ ಕಳೆದುಕೊಂಡು ಕೋಟ್ಯಂತರ ಸಂಖ್ಯೆಯಲ್ಲಿ ನಿರುದ್ಯೋಗಿಗಳಾಗಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಸ್ಪಲ್ಪಮಟ್ಟಿಗೆ ನಿವಾರಿಸಲು ಪ್ರಧಾನಿ ಮೋದಿ ಪ್ಲ್ಯಾನ್ ಮಾಡಿದ್ದಾರೆ. ಆ ಪ್ಲ್ಯಾನ್ ಸಕ್ಸಸ್ ಆದ್ರೆ ಕೋಟ್ಯಂತರ ಜನಕ್ಕೆ ಉದ್ಯೋಗವಕಾಶ ದೊರೆಯಲಿದೆ. ಬಂಡವಾಳ ಹರಿದು ಬಂದ್ರೆ ಉದ್ಯೋಗಗಳ ಮಹಾಪೂರ ಕೊರೊನಾ ವೈರಸ್‌ನಿಂದಾಗಿ ಕೋಟ್ಯಂತರ ಜನರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಹೀಗಾಗಿ ಇಂದಿನಿಂದ 2 ವಾರಗಳ ಕಾಲ […]

ನಿರುದ್ಯೋಗ ಸಮಸ್ಯೆಗೆ ಮೋದಿ ಟಾನಿಕ್! ವಿಶ್ವ ಹೂಡಿಕೆದಾರರ ದುಂಡುಮೇಜಿನ ಸಭೆ ಇಂದಿನಿಂದ
ಆಯೇಷಾ ಬಾನು
| Edited By: |

Updated on:Nov 05, 2020 | 11:19 AM

Share

ದೆಹಲಿ: ನಮ್ಮ ದೇಶದಲ್ಲಿ ಕೊರೊನಾ ವೈರಸ್ ಹಾಗೂ ಲಾಕ್​ಡೌನ್​ನಿಂದಾಗಿ ಜನರು ಉದ್ಯೋಗ ಕಳೆದುಕೊಂಡು ಕೋಟ್ಯಂತರ ಸಂಖ್ಯೆಯಲ್ಲಿ ನಿರುದ್ಯೋಗಿಗಳಾಗಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಸ್ಪಲ್ಪಮಟ್ಟಿಗೆ ನಿವಾರಿಸಲು ಪ್ರಧಾನಿ ಮೋದಿ ಪ್ಲ್ಯಾನ್ ಮಾಡಿದ್ದಾರೆ. ಆ ಪ್ಲ್ಯಾನ್ ಸಕ್ಸಸ್ ಆದ್ರೆ ಕೋಟ್ಯಂತರ ಜನಕ್ಕೆ ಉದ್ಯೋಗವಕಾಶ ದೊರೆಯಲಿದೆ.

ಬಂಡವಾಳ ಹರಿದು ಬಂದ್ರೆ ಉದ್ಯೋಗಗಳ ಮಹಾಪೂರ ಕೊರೊನಾ ವೈರಸ್‌ನಿಂದಾಗಿ ಕೋಟ್ಯಂತರ ಜನರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಹೀಗಾಗಿ ಇಂದಿನಿಂದ 2 ವಾರಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಜೊತೆಗೆ ದುಂಡುಮೇಜಿನ ಸಭೆ ನಡೆಸಲು ನಿರ್ಧರಿಸಿದ್ದಾರೆ. ವಿಶ್ವದ ಪ್ರಮುಖ 20 ಮಂದಿ ಹೂಡಿಕೆದಾರರ ಜೊತೆಗೆ ಮೋದಿ ಚರ್ಚೆ ನಡೆಸಲಿದ್ದಾರೆ. ಈ ಚರ್ಚೆಯ ವೇಳೆ ಭಾರತದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ತೆರೆದಿಡಲಿದ್ದಾರೆ.

ಮೋದಿ ಮೀಟಿಂಗ್ ಉದ್ದೇಶವೇನು? ಜಪಾನ್, ಆಸ್ಟ್ರೇಲಿಯಾ, ಯೂರೋಪ್‌ನ ಪ್ರಮುಖ ಬಂಡವಾಳ ಹೂಡಿಕೆದಾರರಿಗೆ ಮೋದಿ ಆಹ್ವಾನ ನೀಡಲಿದ್ದಾರೆ. ಈ 20 ಬಂಡವಾಳ ಹೂಡಿಕೆದಾರರ ಬಳಿ ಒಟ್ಟು 450 ಲಕ್ಷ ಕೋಟಿ ರೂಪಾಯಿ ಬಂಡವಾಳ ಇದೆ. ಈ ಬಂಡವಾಳದಾರರನ್ನು ಭಾರತದಲ್ಲಿ ದೀರ್ಘ ಅವಧಿಗೆ ಹೂಡಿಕೆ ಮಾಡಲು ಮೋದಿ ಆಹ್ವಾನಿಸಲಿದ್ದಾರೆ.

ಆಸ್ಟ್ರೇಲಿಯಾ ಸೂಪರ್ ಅಂಡ್ ಪ್ಯೂಚರ್ ಫಂಡ್, ಜಪಾನ್ ಪೋಸ್ಟ್ ಬ್ಯಾಂಕ್, ಒಂಟಾರಿಯೋ ಪೆನ್ಷನ್ ಸೇರಿದಂತೆ ಅನೇಕ ಕಂಪನಿಗಳ ಸಿಇಒಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಬಳಿಕ ಒಬ್ಬೊಬ್ಬರೊಂದಿಗೂ ಪ್ರತ್ಯೇಕವಾಗಿಯೂ ಮೋದಿ ಚರ್ಚೆ ನಡೆಸಿ ಭಾರತದಲ್ಲಿ ಬಂಡವಾಳ ಹೂಡಿಕೆಗೆ ಇರುವ ವಿಫುಲ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಡಲಿದ್ದಾರೆ. ಕೇಂದ್ರ ಸರ್ಕಾರ ಹೂಡಿಕೆದಾರರಿಗೆ ಎಲ್ಲ ಸೌಲಭ್ಯ ಒದಗಿಸಿಕೊಡಲಿದೆ ಎಂದು ಮೋದಿ ಮನವರಿಕೆ ಮಾಡಿಕೊಡಲಿದ್ದಾರೆ.

ಹೀಗೆ ಪ್ರಧಾನಿ ಮೋದಿ ಜಾಗತಿಕ ಬಂಡವಾಳ ಹೂಡಿಕೆದಾರರ ಜೊತೆಗೆ ಮುಂದಿನ 2 ವಾರಗಳ ಕಾಲ ದುಂಡುಮೇಜಿನ ಸಭೆ ನಡೆಸಲಿದ್ದಾರೆ. ಹೂಡಿಕೆದಾರರೊಂದಿಗಿನ ಮೋದಿ ಮಾತುಕತೆಯು ಯಶಸ್ವಿಯಾದರೇ, ಭಾರತಕ್ಕೆ ಲಕ್ಷ ಕೋಟಿ ರೂಪಾಯಿ ಬಂಡವಾಳ ಹರಿದು ಬರಬಹುದು. ಇದರಿಂದ ಭಾರತದಲ್ಲೇ ಕೋಟಿಗಟ್ಟಲೇ ಉದ್ಯೋಗಗಳು ಸೃಷ್ಟಿಯಾಗುತ್ತವೆ.

ಭಾರತದಲ್ಲಿ ಆಟೋಮೊಬೈಲ್, ಸ್ಮಾರ್ಟ್ ಪೋನ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಸೋಲಾರ್ ವಿದ್ಯುತ್ ಉತ್ಪಾದನೆ, ಮೂಲಸೌಕರ್ಯ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡುವಂತೆ ಮೋದಿ ಆಹ್ವಾನ ನೀಡಲಿದ್ದಾರೆ. ಕೇವಲ ವಿದೇಶಿ ಬಂಡವಾಳ ಹೂಡಿಕೆದಾರರ ಜೊತೆ ಮಾತ್ರವಲ್ಲದೇ, ಭಾರತದ ಖ್ಯಾತ ಉದ್ಯಮಿಗಳ ಜೊತೆಗೂ ಮೋದಿ ದುಂಡುಮೇಜಿನ ಸಭೆ ನಡೆಸಲಿದ್ದಾರೆ.

ಒಟ್ಟಿನಲ್ಲಿ ಲಕ್ಷ ಕೋಟಿ ರೂಪಾಯಿ ವಿದೇಶಿ ಬಂಡವಾಳವು ಭಾರತಕ್ಕೆ ಹರಿದು ಬಂದರೆ, ಕೋಟಿಗಟ್ಟಲೇ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಇದರಿಂದ ಆರ್ಥಿಕತೆಯ ಚೇತರಿಕೆಯೂ ಆಗುತ್ತೆ. ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ, ಗುರಿ ಸಾಧಿಸುವತ್ತ ಭಾರತ ಹೆಜ್ಜೆ ಹಾಕಬಹುದು.

Published On - 11:17 am, Thu, 5 November 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ