AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಯಾವಾಗ? ಇಲ್ಲಿದೆ ಮಾಹಿತಿ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಕಾರ್ಯ ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ದಿನಾಂಕ ನಿಗದಿ ಮಾಡಲಾಗಿದೆ.

Ram Mandir: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಯಾವಾಗ? ಇಲ್ಲಿದೆ ಮಾಹಿತಿ
ನರೇಂದ್ರ ಮೋದಿImage Credit source: Mint
ನಯನಾ ರಾಜೀವ್
|

Updated on:Jun 12, 2023 | 1:04 PM

Share

ಉತ್ತರ ಪ್ರದೇಶದ ಅಯೋಧ್ಯೆ(Ayodhya)ಯಲ್ಲಿ ಶ್ರೀರಾಮಮಂದಿರ ಕಾರ್ಯ ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ದಿನಾಂಕ ನಿಗದಿ ಮಾಡಲಾಗಿದೆ. ಇದೇ ವರ್ಷ ಡಿಸೆಂಬರ್​ ಒಳಗೆ ಶ್ರೀರಾಮ ಮಂದಿರದ ಗರ್ಭಗುಡಿ ಕಾರ್ಯ ಪೂರ್ಣಗೊಳ್ಳಲಿದ್ದು, 2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣ ಪ್ರತಿಷ್ಠೆ ನೆರವೇರಿಸಲಿದ್ದಾರೆ. ದೇವಾಲಯದ ಗರ್ಭಗುಡಿಯಲ್ಲಿ ರಾಮ್ ಲಲ್ಲಾನ ವಿಗ್ರಹವನ್ನು ಸ್ಥಾಪಿಸಲಾಗುವುದು. ಮೂಲಗಳ ಪ್ರಕಾರ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಶ್ಯಾಮಶಿಲಾ (ಬಂಡೆ) ರಾಮಲಲ್ಲಾ ವಿಗ್ರಹವನ್ನು ನಿರ್ಮಿಸಲಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಏಪ್ರಿಲ್‌ನಲ್ಲಿ ದೇವಾಲಯದ ಟ್ರಸ್ಟ್‌ನ ಎರಡು ದಿನಗಳ ಅನೌಪಚಾರಿಕ ಸಭೆಯನ್ನು ನಡೆಸಿತ್ತು. ಶ್ರೀರಾಮ ಹಾಗೂ ಸೀತಾ ಮಾತೆಯ ನೂತನ ವಿಗ್ರಹವನ್ನು ನಿರ್ಮಿಸಲೆಂದು ನೇಪಾಳದ ಗಂಡಕಿ ನದಿಯಲ್ಲಿ ಸಿಕ್ಕ 6 ಕೋಟಿ ವರ್ಷಗಳ ಇತಿಹಾಸ ಇದ್ದು, ಅಧ್ಯಾತ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಎರಡು ಶಿಲೆಗಳನ್ನು ತರಲಾಗಿದೆ.

ಮತ್ತಷ್ಟು ಓದಿ: ರಾಮ ಜನ್ಮಭೂಮಿ ದೇವಾಲಯ ನಿರ್ಮಾಣದ ಭಾಗವಾಗಲು ಜಯನಗರದ ಶರ್ಮಾಲಯ ಚಿಕಿತ್ಸಾಲಯದಲ್ಲಿ 16 ನದಿಗಳ ನೀರು ಮತ್ತು ಮೃತ್ತಿಕೆಯೊಂದಿಗೆ ವಿಶಿಷ್ಟ ಸಂಕಲ್ಪ

2024ರ ಜನವರಿ 14 ರಂದು ಶ್ರೀರಾಮ ಲಲ್ಲಾನ ಪ್ರತಿಷ್ಠಾಪನೆ ಮಾಡಲಾಗುವುದು, ಈ ಹಿಂದೆ ಶ್ರೀರಾಮ ಜನ್ಮಭೂಮಿ ಕ್ಷೇತ್ರ ಟ್ರಸ್ಟ್​ ಹೇಳಿತ್ತು. ಇದೀಗ ಜನವರಿ 22 ರಂದು ಪ್ರತಿಷ್ಠಾಪನೆ ಮಾಡುವುದಾಗಿ ತಿಳಿಸಿದೆ.

2024ರ ಲೋಕಸಭೆ ಚುನಾವಣೆ ಒಳಗೆ ಅಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪನೆ ಮಾಡಿ, ಭಕ್ತರಿಗೆ ದರ್ಶನಕ್ಕೆ ಮುಕ್ತ ಅವಕಾಶ ಮಾಡಲು ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಗಳು ಜಂಟಿಯಾಗಿ ಪ್ರಯತ್ನವನ್ನು ಮಾಡುತ್ತಿವೆ.

ದೇವಸ್ಥಾನದ ಮೇಲ್ಛಾವಣಿಯನ್ನು ಜೂನ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದರು. ವಿಗ್ರಹ ಪ್ರತಿಷ್ಠಾಪನೆಗೆ ನಿಖರವಾದ ದಿನಾಂಕವನ್ನು ಜ್ಯೋತಿಷಿ ವಿದ್ವಾಂಸರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಪ್ರಸನ್ನಾಚಾರ್ಯ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Mon, 12 June 23

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ