AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viksit Bharat @2047: ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಪ್ರಧಾನಿ ಮೋದಿ

ಇಂದು ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ 'ವಿಕ್ಷಿತ್ ಭಾರತ್ @2047ನಲ್ಲಿ ಪ್ರಧಾನಿ ಮೋದಿ "ಟೀಮ್ ಇಂಡಿಯಾದ ಪಾತ್ರ" ವಿಷಯದ ಕುರಿತು ಮಾತನಾಡಲಿದ್ದು, ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

Viksit Bharat @2047: ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 11:12 AM

Share

ದೆಹಲಿ: ಇಂದು ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ‘ವಿಕ್ಷಿತ್ ಭಾರತ್ @2047ನಲ್ಲಿ ಪ್ರಧಾನಿ ಮೋದಿ “ಟೀಮ್ ಇಂಡಿಯಾದ ಪಾತ್ರ” ವಿಷಯದ ಕುರಿತು ಮಾತನಾಡಲಿದ್ದು, ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನೀತಿ ಆಯೋಗದ ಅಧ್ಯಕ್ಷರಾಗಿ ಪ್ರಧಾನಿ ಮೋದಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ವಿಕ್ಷಿತ್ ಭಾರತ್ @2047 ಕಾರ್ಯಕ್ರಮದಲ್ಲಿ Viksit Bharat@2047, MSMEಗಳ ಮೇಲೆ ಒತ್ತು, ಮೂಲಸೌಕರ್ಯ ಮತ್ತು ಹೂಡಿಕೆಗಳು, ಅನುಸರಣೆಗಳನ್ನು ಕಡಿಮೆಗೊಳಿಸುವುದು, ಮಹಿಳಾ ಸಬಲೀಕರಣ, ಸೇರಿದಂತೆ ಎಂಟು ಪ್ರಮುಖ ವಿಷಯಗಳನ್ನು ದಿನದ ಸಭೆಯಲ್ಲಿ ಚರ್ಚಿಸಲಾಗುವುದು. ಆರೋಗ್ಯ ಮತ್ತು ಪೋಷಣೆ, ಕೌಶಲ್ಯ ಅಭಿವೃದ್ಧಿ, ಪ್ರದೇಶಾಭಿವೃದ್ಧಿ ಮತ್ತು ಸಾಮಾಜಿಕ ಮೂಲಸೌಕರ್ಯಕ್ಕಾಗಿ ಗತಿ ಶಕ್ತಿ” ಬಗ್ಗೆ NITI ಆಯೋಗದ ಈ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು/ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಮಂತ್ರಿಗಳು NITI ಆಯೋಗದ ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕ ರಾಜ್ಯದ ಮುಖ್ಯಮಂತ್ರಿಗಳು ದೆಹಲಿಯತ್ತ ಪ್ರಯಾಣ ಮಾಡಿದ್ದಾರೆ.

ಇದನ್ನೂ ಓದಿ;9 Years Of PM Modi: ಹಿಂದೂ ದೇವಾಲಯಗಳನ್ನು ಪುನರುಜ್ಜೀವನಗೊಳಿಸುವ ಪ್ರಧಾನಿ ಮೋದಿ ಪ್ರಯತ್ನಗಳೆಡೆಗೆ ಒಂದು ನೋಟ

8ನೇ ಆಡಳಿತ ಮಂಡಳಿ ಸಭೆಯ ಪೂರ್ವಸಿದ್ಧತಾ ಪೂರ್ವಭಾವಿಯಾಗಿ, ಎರಡನೇ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನವನ್ನು ಜನವರಿ 2023 ರಲ್ಲಿ ನಡೆಸಲಾಯಿತು, ಅಲ್ಲಿ ಈ ವಿಷಯಗಳನ್ನು ವ್ಯಾಪಕವಾಗಿ ಚರ್ಚಿಸಲಾಯಿತು. NITI ಆಯೋಗ, ಈ 8ನೇ ಆಡಳಿತ ಮಂಡಳಿ ಸಭೆಯನ್ನು ಭಾರತದ G20 ಪ್ರೆಸಿಡೆನ್ಸಿಯ ಹಿನ್ನೆಲೆಯಲ್ಲಿ ನಡೆಸಲಾಗುತ್ತಿದೆ. ಭಾರತದ G20 ಧ್ಯೇಯವಾಕ್ಯ ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಅದರ ನಾಗರಿಕತೆಯ ಮೌಲ್ಯಗಳನ್ನು ಮತ್ತು ನಮ್ಮ ಗ್ರಹದ ಭವಿಷ್ಯವನ್ನು ರಚಿಸುವಲ್ಲಿ ಪ್ರತಿ ದೇಶದ ಪಾತ್ರದ ದೃಷ್ಟಿಕೋನವನ್ನು ತಿಳಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!