AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Hyderabad Visit: ಪ್ರಧಾನಿ ಮೋದಿ ಇಂದು ತೆಲಂಗಾಣ ಭೇಟಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ

ಪ್ರಧಾನಿ ಮೋದಿಯವರು ಸಿಕಂದರಾಬಾದ್​​ ಮತ್ತು ತಿರುಪತಿ ಮಧ್ಯೆ ಸಂಚರಿಸುವ ವಂದೇ ಭಾರತ ಎಕ್ಸಪ್ರೆಸ್​ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

PM Modi Hyderabad Visit: ಪ್ರಧಾನಿ ಮೋದಿ ಇಂದು ತೆಲಂಗಾಣ ಭೇಟಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on:Apr 08, 2023 | 9:25 AM

Share

ಹೈದರಾಬಾದ್​: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು (ಏಪ್ರಿಲ್​ 8) ತೆಲಂಗಾಣ (Telangana) ಮತ್ತು ತಮೀಳನಾಡು (Tamilnadu) ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ತೆಲಂಗಾಣ ಭೇಟಿ ವೇಳೆ ಪ್ರಧಾನಿ ಮೋದಿಯವರು 11,300 ಕೋಟಿ ರೂ. ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿಯವರು ಸಿಕಂದರಾಬಾದ್​​ ಮತ್ತು ತಿರುಪತಿ ಮಧ್ಯೆ ಸಂಚರಿಸುವ ವಂದೇ ಭಾರತ ಎಕ್ಸಪ್ರೆಸ್​ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಸಿಕಂದರಾಬಾದ್​​ನಲ್ಲಿ 720 ಕೋಟಿ ವೆಚ್ಚದ ​​ರೈಲು ನಿಲ್ದಾಣದ ಪುನರಾಭಿವೃದ್ದಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಿಬಿನಗರದಲ್ಲಿ ಏಮ್ಸ್​ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡುತ್ತಾರೆ. ಏಮ್ಸ್ ಅನ್ನು 1,350 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಬಳಿಕ 1,410 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಿಕಂದರಾಬಾದ್​-ಮಹಬೂಬ್​ನಗರ ನಡುವಿನ 84ಕಿ.ಮೀ ವಿದ್ಯದೀಕೃತ ಜೋಡಿ ಮಾರ್ಗ ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ 7850 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಈ ರಸ್ತೆ ಯೋಜನೆಗಳು ತೆಲಂಗಾಣ ಮತ್ತು ಆಂಧ್ರಪ್ರದೇಶ ಎರಡರ ರಸ್ತೆ ಸಂಪರ್ಕವನ್ನು ವೃದ್ಧಿಸುತ್ತದೆ ಮತ್ತು ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸಹಾಯವಾಗುತ್ತದೆ.

ಇದನ್ನೂ ಓದಿ: ಅದಾನಿ-ಹಿಂಡೆನ್​​ಬರ್ಗ್ ವಿಚಾರದಲ್ಲಿ ಶರದ್ ಪವಾರ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ನಲ್ಗೊಂಡ, ಗುಂಟೂರು, ಓಂಗೋಲ್ ಮತ್ತು ನೆಲ್ಲೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದ್ದು, ನಗರಗಳ ನಡುವೆ 660 ಕಿಮೀ ಪ್ರಯಾಣವನ್ನು ಒಳಗೊಂಡಿದೆ. ಆದರೆ, ಉದ್ಘಾಟನಾ ರೈಲಿನ ಮಾರ್ಗವು ವಿಭಿನ್ನವಾಗಿರುತ್ತದೆ. ಈ ಮಾರ್ಗದ ಮೊದಲ ರೈಲು ನಲ್ಗೊಂಡ, ಮಿರ್ಯಾಲಗುಡ, ಪಿದುಗುರಳ್ಳ, ಗುಂಟೂರು, ತೆನಾಲಿ, ಬಾಪಟ್ಲ, ಚಿರಾಲ, ಓಂಗೋಳೆ, ನೆಲ್ಲೂರು ಮತ್ತು ಗುಡೂರು ನಿಲ್ದಾಣಗಳಲ್ಲಿ ನಿಲುಗಡೆಯಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 am, Sat, 8 April 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!