AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Hyderabad Visit: ಪ್ರಧಾನಿ ಮೋದಿ ಇಂದು ತೆಲಂಗಾಣ ಭೇಟಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ

ಪ್ರಧಾನಿ ಮೋದಿಯವರು ಸಿಕಂದರಾಬಾದ್​​ ಮತ್ತು ತಿರುಪತಿ ಮಧ್ಯೆ ಸಂಚರಿಸುವ ವಂದೇ ಭಾರತ ಎಕ್ಸಪ್ರೆಸ್​ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

PM Modi Hyderabad Visit: ಪ್ರಧಾನಿ ಮೋದಿ ಇಂದು ತೆಲಂಗಾಣ ಭೇಟಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 08, 2023 | 9:25 AM

Share

ಹೈದರಾಬಾದ್​: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು (ಏಪ್ರಿಲ್​ 8) ತೆಲಂಗಾಣ (Telangana) ಮತ್ತು ತಮೀಳನಾಡು (Tamilnadu) ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ತೆಲಂಗಾಣ ಭೇಟಿ ವೇಳೆ ಪ್ರಧಾನಿ ಮೋದಿಯವರು 11,300 ಕೋಟಿ ರೂ. ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿಯವರು ಸಿಕಂದರಾಬಾದ್​​ ಮತ್ತು ತಿರುಪತಿ ಮಧ್ಯೆ ಸಂಚರಿಸುವ ವಂದೇ ಭಾರತ ಎಕ್ಸಪ್ರೆಸ್​ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಸಿಕಂದರಾಬಾದ್​​ನಲ್ಲಿ 720 ಕೋಟಿ ವೆಚ್ಚದ ​​ರೈಲು ನಿಲ್ದಾಣದ ಪುನರಾಭಿವೃದ್ದಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಿಬಿನಗರದಲ್ಲಿ ಏಮ್ಸ್​ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡುತ್ತಾರೆ. ಏಮ್ಸ್ ಅನ್ನು 1,350 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಬಳಿಕ 1,410 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಿಕಂದರಾಬಾದ್​-ಮಹಬೂಬ್​ನಗರ ನಡುವಿನ 84ಕಿ.ಮೀ ವಿದ್ಯದೀಕೃತ ಜೋಡಿ ಮಾರ್ಗ ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ 7850 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಈ ರಸ್ತೆ ಯೋಜನೆಗಳು ತೆಲಂಗಾಣ ಮತ್ತು ಆಂಧ್ರಪ್ರದೇಶ ಎರಡರ ರಸ್ತೆ ಸಂಪರ್ಕವನ್ನು ವೃದ್ಧಿಸುತ್ತದೆ ಮತ್ತು ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸಹಾಯವಾಗುತ್ತದೆ.

ಇದನ್ನೂ ಓದಿ: ಅದಾನಿ-ಹಿಂಡೆನ್​​ಬರ್ಗ್ ವಿಚಾರದಲ್ಲಿ ಶರದ್ ಪವಾರ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ನಲ್ಗೊಂಡ, ಗುಂಟೂರು, ಓಂಗೋಲ್ ಮತ್ತು ನೆಲ್ಲೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದ್ದು, ನಗರಗಳ ನಡುವೆ 660 ಕಿಮೀ ಪ್ರಯಾಣವನ್ನು ಒಳಗೊಂಡಿದೆ. ಆದರೆ, ಉದ್ಘಾಟನಾ ರೈಲಿನ ಮಾರ್ಗವು ವಿಭಿನ್ನವಾಗಿರುತ್ತದೆ. ಈ ಮಾರ್ಗದ ಮೊದಲ ರೈಲು ನಲ್ಗೊಂಡ, ಮಿರ್ಯಾಲಗುಡ, ಪಿದುಗುರಳ್ಳ, ಗುಂಟೂರು, ತೆನಾಲಿ, ಬಾಪಟ್ಲ, ಚಿರಾಲ, ಓಂಗೋಳೆ, ನೆಲ್ಲೂರು ಮತ್ತು ಗುಡೂರು ನಿಲ್ದಾಣಗಳಲ್ಲಿ ನಿಲುಗಡೆಯಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 am, Sat, 8 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ