AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Hyderabad Visit: ಪ್ರಧಾನಿ ಮೋದಿ ಇಂದು ತೆಲಂಗಾಣ ಭೇಟಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ

ಪ್ರಧಾನಿ ಮೋದಿಯವರು ಸಿಕಂದರಾಬಾದ್​​ ಮತ್ತು ತಿರುಪತಿ ಮಧ್ಯೆ ಸಂಚರಿಸುವ ವಂದೇ ಭಾರತ ಎಕ್ಸಪ್ರೆಸ್​ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

PM Modi Hyderabad Visit: ಪ್ರಧಾನಿ ಮೋದಿ ಇಂದು ತೆಲಂಗಾಣ ಭೇಟಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on:Apr 08, 2023 | 9:25 AM

Share

ಹೈದರಾಬಾದ್​: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು (ಏಪ್ರಿಲ್​ 8) ತೆಲಂಗಾಣ (Telangana) ಮತ್ತು ತಮೀಳನಾಡು (Tamilnadu) ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ತೆಲಂಗಾಣ ಭೇಟಿ ವೇಳೆ ಪ್ರಧಾನಿ ಮೋದಿಯವರು 11,300 ಕೋಟಿ ರೂ. ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿಯವರು ಸಿಕಂದರಾಬಾದ್​​ ಮತ್ತು ತಿರುಪತಿ ಮಧ್ಯೆ ಸಂಚರಿಸುವ ವಂದೇ ಭಾರತ ಎಕ್ಸಪ್ರೆಸ್​ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಸಿಕಂದರಾಬಾದ್​​ನಲ್ಲಿ 720 ಕೋಟಿ ವೆಚ್ಚದ ​​ರೈಲು ನಿಲ್ದಾಣದ ಪುನರಾಭಿವೃದ್ದಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಿಬಿನಗರದಲ್ಲಿ ಏಮ್ಸ್​ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡುತ್ತಾರೆ. ಏಮ್ಸ್ ಅನ್ನು 1,350 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಬಳಿಕ 1,410 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಿಕಂದರಾಬಾದ್​-ಮಹಬೂಬ್​ನಗರ ನಡುವಿನ 84ಕಿ.ಮೀ ವಿದ್ಯದೀಕೃತ ಜೋಡಿ ಮಾರ್ಗ ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ 7850 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಈ ರಸ್ತೆ ಯೋಜನೆಗಳು ತೆಲಂಗಾಣ ಮತ್ತು ಆಂಧ್ರಪ್ರದೇಶ ಎರಡರ ರಸ್ತೆ ಸಂಪರ್ಕವನ್ನು ವೃದ್ಧಿಸುತ್ತದೆ ಮತ್ತು ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸಹಾಯವಾಗುತ್ತದೆ.

ಇದನ್ನೂ ಓದಿ: ಅದಾನಿ-ಹಿಂಡೆನ್​​ಬರ್ಗ್ ವಿಚಾರದಲ್ಲಿ ಶರದ್ ಪವಾರ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ನಲ್ಗೊಂಡ, ಗುಂಟೂರು, ಓಂಗೋಲ್ ಮತ್ತು ನೆಲ್ಲೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದ್ದು, ನಗರಗಳ ನಡುವೆ 660 ಕಿಮೀ ಪ್ರಯಾಣವನ್ನು ಒಳಗೊಂಡಿದೆ. ಆದರೆ, ಉದ್ಘಾಟನಾ ರೈಲಿನ ಮಾರ್ಗವು ವಿಭಿನ್ನವಾಗಿರುತ್ತದೆ. ಈ ಮಾರ್ಗದ ಮೊದಲ ರೈಲು ನಲ್ಗೊಂಡ, ಮಿರ್ಯಾಲಗುಡ, ಪಿದುಗುರಳ್ಳ, ಗುಂಟೂರು, ತೆನಾಲಿ, ಬಾಪಟ್ಲ, ಚಿರಾಲ, ಓಂಗೋಳೆ, ನೆಲ್ಲೂರು ಮತ್ತು ಗುಡೂರು ನಿಲ್ದಾಣಗಳಲ್ಲಿ ನಿಲುಗಡೆಯಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 am, Sat, 8 April 23

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ