AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 7ರಿಂದ 8ರವರೆಗೆ ಅಧಿಕೃತ ಭೇಟಿಗಾಗಿ ಮಲೇಷ್ಯಾಕ್ಕೆ ಪ್ರಯಾಣಿಸಲಿದ್ದಾರೆ. ಇದು ಪ್ರಧಾನಿ ಮೋದಿ ಅವರ ಮೂರನೇ ಮಲೇಷ್ಯಾ ಭೇಟಿಯಾಗಿದೆ. ಆಗಸ್ಟ್ 2024ರಲ್ಲಿ ಪ್ರಧಾನಿ ಮೋದಿ ಮಲೇಷ್ಯಾಕ್ಕೆ ಭೇಟಿ ನೀಡಿದ್ದರು. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಈ ಭೇಟಿ ಬಹಳ ಮುಖ್ಯದ್ದವಾಗಿದೆ. ಭಾರತ ಮತ್ತು ಮಲೇಷ್ಯಾ ಇತಿಹಾಸ, ನಾಗರಿಕತೆ ಮತ್ತು ಸಂಸ್ಕೃತಿಯಲ್ಲಿ ಬೇರೂರಿರುವ ಆಳವಾದ ಮತ್ತು ದೀರ್ಘಕಾಲೀನ ಸಂಬಂಧಗಳನ್ನು ಹಂಚಿಕೊಂಡಿವೆ.

ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
Pm Modi With Malaysia PmImage Credit source: x
ಸುಷ್ಮಾ ಚಕ್ರೆ
|

Updated on: Feb 04, 2026 | 8:12 PM

Share

ನವದೆಹಲಿ, ಫೆಬ್ರವರಿ 4: ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ವಾರದ ಕೊನೆಯಲ್ಲಿ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಫೆಬ್ರವರಿ 7 ಹಾಗೂ 8ರಂದು ನಡೆಯಲಿರುವ ಈ ಭೇಟಿ ಪ್ರಧಾನಿ ಮೋದಿ ಅವರ ಮಲೇಷ್ಯಾಕ್ಕೆ ಮೂರನೇ ಭೇಟಿಯಾಗಿದೆ.

ಈ ಮೊದಲು ಆಗಸ್ಟ್ 2024ರಲ್ಲಿ ಭಾರತ-ಮಲೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ’ಗೆ ಏರಿಸಿದ ನಂತರ ಮಲೇಷ್ಯಾಕ್ಕೆ ಇದು ಪ್ರಧಾನಿ ಮೋದಿಯವರ ಮೊದಲ ಭೇಟಿಯಾಗಿದೆ. ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ. ಹಾಗೇ, ಪ್ರಧಾನಿ ಮೋದಿ ಭಾರತೀಯ ಸಮುದಾಯದ ಸದಸ್ಯರು ಹಾಗೂ ಕೈಗಾರಿಕೆ, ವ್ಯಾಪಾರ ಪ್ರತಿನಿಧಿಗಳನ್ನು ಬೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ:

“ಭಾರತ ಮತ್ತು ಮಲೇಷ್ಯಾ ಐತಿಹಾಸಿಕ, ನಾಗರಿಕ ಮತ್ತು ಸಾಂಸ್ಕೃತಿಕ ಸಂಪರ್ಕಗಳ ಆಧಾರದ ಮೇಲೆ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹಂಚಿಕೊಂಡಿವೆ. ವಿಶ್ವದ ಮೂರನೇ ಅತಿದೊಡ್ಡ ದೇಶವಾದ ಮಲೇಷ್ಯಾದಲ್ಲಿ 2.9 ಮಿಲಿಯನ್ ಭಾರತೀಯ ವಲಸೆಗಾರರ ​​ಉಪಸ್ಥಿತಿಯಿಂದ ಈ ಸಂಬಂಧವು ಮತ್ತಷ್ಟು ಬಲಗೊಂಡಿದೆ” ಎಂದು ವಿದೇಶಾಂಗ ಸಚಿವಾಲಯದ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ

“ಭಾರತ ಹಾಗೂ ಮಲೇಷ್ಯಾ ಸಂಬಂಧವು ಬಹುಮುಖಿ ಮತ್ತು ಬೆಳೆಯುತ್ತಿದೆ. ಪ್ರಧಾನ ಮಂತ್ರಿ ಮೋದಿಯವರ ಮುಂಬರುವ ಭೇಟಿಯು ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ ಮತ್ತು ಕಡಲ ಸಹಕಾರದಿಂದ ಹಿಡಿದು ಡಿಜಿಟಲ್ ಮತ್ತು ಹಣಕಾಸು ತಂತ್ರಜ್ಞಾನ, ಇಂಧನ, ಆರೋಗ್ಯ ರಕ್ಷಣೆ, ಶಿಕ್ಷಣ, ಸಂಸ್ಕೃತಿ, ಪ್ರವಾಸೋದ್ಯಮ ಮುಂತಾದ ದ್ವಿಪಕ್ಷೀಯ ಸಹಕಾರದ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸುತ್ತದೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ