AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿಗೆ ಇಂದು ಪ್ರಧಾನಿ ನರೇಂದ್ರ ಮೋದಿ: ಪ್ರಯಾಗ್​ರಾಜ್-ವಾರಣಾಸಿ ಹೆದ್ದಾರಿ ಕಾಮಗಾರಿಗೆ ಚಾಲನೆ

ಸ್ವಕ್ಷೇತ್ರ, ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನ.30) ಭೇಟಿ ನೀಡಲಿದ್ದು, ವಾರಣಾಸಿ-ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗಂಗಾ ನದಿಯ ತಟದಲ್ಲಿ ನಡೆಯಲಿರುವ ದೀಪೋತ್ಸವದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

ವಾರಣಾಸಿಗೆ ಇಂದು ಪ್ರಧಾನಿ ನರೇಂದ್ರ ಮೋದಿ: ಪ್ರಯಾಗ್​ರಾಜ್-ವಾರಣಾಸಿ ಹೆದ್ದಾರಿ ಕಾಮಗಾರಿಗೆ ಚಾಲನೆ
ಪ್ರಧಾನಿ ಭೇಟಿಯ ಮುನ್ನಾ ದಿನವಾದ ಭಾನುವಾರ ದೀಪ ಬೆಳಗಿ ಸಂಭ್ರಮಿಸಿದ ವಾರಣಾಸಿ ನಿವಾಸಿಗಳು
Ghanashyam D M | ಡಿ.ಎಂ.ಘನಶ್ಯಾಮ
|

Updated on: Nov 30, 2020 | 10:41 AM

Share

ದೆಹಲಿ: ಸ್ವಕ್ಷೇತ್ರ, ಉತ್ತರ ಪ್ರದೇಶದ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನ.30) ಭೇಟಿ ನೀಡಲಿದ್ದು, ವಾರಣಾಸಿ-ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗಂಗಾ ನದಿಯ ತಟದಲ್ಲಿ ನಡೆಯಲಿರುವ ದೀಪೋತ್ಸವದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಭೇಟಿಗೆ ನಗರವು ಸಜ್ಜಾಗಿದೆ. ಶ್ವಾನದಳದೊಂದಿಗೆ ಬೀದಿಬೀದಿಗಳಲ್ಲಿ ಸಂಚರಿಸುತ್ತಿರುವ ಭದ್ರತಾ ಸಿಬ್ಬಂದಿ ದಡದಲ್ಲಿ ನಿಂತಿರುವ ದೋಣಿಗಳ ತಪಾಸಣೆ ನಡೆಸುತ್ತಿದ್ದಾರೆ. ರಾಜಘಾಟ್​ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರತಿ ಇಂಚನ್ನೂ ಜಾಲಾಡುತ್ತಿದ್ದಾರೆ.

ವಾರಣಾಸಿ ಭೇಟಿ ಸಂದರ್ಭ ಪ್ರಧಾನಿ ಹಾಂದಿಯಾ (ಪ್ರಯಾಗ್​ರಾಜ್) – ರಾಜ್​ತಲಾಬ್ (ವಾರಣಾಸಿ) ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು 6 ಲೇನ್​ಗೆ ವಿಸ್ತರಿಸುವ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ₹ 2447 ಕೋಟಿ ಅಂದಾಜು ವೆಚ್ಚದ ಈ ಕಾಮಗಾರಿ ಪೂರ್ಣಗೊಂಡ ನಂತರ, 73 ಕಿ.ಮೀ. ಅಂತರದದ ಪ್ರಯಾಗ್​ರಾಜ್ ಮತ್ತು ವಾರಣಾಸಿ ನಡುವಣ ಪ್ರಯಾಣದ ಅವಧಿ ಸುಮಾರು 1 ಗಂಟೆಯಷ್ಟು ಕಡಿಮೆಯಾಗಲಿದೆ ಎಂದು ಪ್ರಧಾನಿ ಕಚೇರಿ ಹೇಳಿಕೆ ತಿಳಿಸಿದೆ.

ಇಂದು ಕಾರ್ತೀಕ ಮಾಸದ ಹುಣ್ಣಿಮೆಯ ಪ್ರಯುಕ್ತ ವಾರಣಾಸಿಯಲ್ಲಿ ಸಂಪ್ರದಾಯದಂತೆ ದೇವ ದೀಪಾವಳಿ ಉತ್ಸವ ನಡೆಯಲಿದೆ. ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಧಾನಿ, ರಾಜ್​ಘಾಟ್​ನಲ್ಲಿ ಹಣತೆಯೊಂದನ್ನು ಹಚ್ಚಲಿದ್ದಾರೆ. ನಂತರ ಗಂಗೆಯ ಎರಡೂ ತಟಗಳಲ್ಲಿ 11 ಲಕ್ಷ ಹಣತೆಗಳನ್ನು ಬೆಳಗಲಾಗುತ್ತದೆ.

ಪ್ರವಾಸದ ವೇಳೆ ಕಾಶಿ ವಿಶ್ವನಾಥ ದೇಗುಲ ಪಥ ಕಾಮಗಾರಿಯ ಸ್ಥಳಪರಿಶೀಲಿಸಲಿದ್ದಾರೆ. ಪುರಾತನ ಸ್ಮಾರಕ ಸಾರನಾಥದಲ್ಲಿ ನಡೆಯಲಿರುವ ಧ್ವನಿ-ಬೆಳಕು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: 100 ವರ್ಷಗಳ ಹಿಂದೆ ಕಳುವಾಗಿದ್ದ ಅನ್ನಪೂರ್ಣಾ ವಿಗ್ರಹ ಮರಳಿ ಭಾರತಕ್ಕೆ: ಮನ್​ ಕಿ ಬಾತ್​ನಲ್ಲಿ ಮೋದಿ ಖುಷಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ