AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿಗೆ ಇಂದು ಪ್ರಧಾನಿ ನರೇಂದ್ರ ಮೋದಿ: ಪ್ರಯಾಗ್​ರಾಜ್-ವಾರಣಾಸಿ ಹೆದ್ದಾರಿ ಕಾಮಗಾರಿಗೆ ಚಾಲನೆ

ಸ್ವಕ್ಷೇತ್ರ, ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನ.30) ಭೇಟಿ ನೀಡಲಿದ್ದು, ವಾರಣಾಸಿ-ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗಂಗಾ ನದಿಯ ತಟದಲ್ಲಿ ನಡೆಯಲಿರುವ ದೀಪೋತ್ಸವದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

ವಾರಣಾಸಿಗೆ ಇಂದು ಪ್ರಧಾನಿ ನರೇಂದ್ರ ಮೋದಿ: ಪ್ರಯಾಗ್​ರಾಜ್-ವಾರಣಾಸಿ ಹೆದ್ದಾರಿ ಕಾಮಗಾರಿಗೆ ಚಾಲನೆ
ಪ್ರಧಾನಿ ಭೇಟಿಯ ಮುನ್ನಾ ದಿನವಾದ ಭಾನುವಾರ ದೀಪ ಬೆಳಗಿ ಸಂಭ್ರಮಿಸಿದ ವಾರಣಾಸಿ ನಿವಾಸಿಗಳು
Ghanashyam D M | ಡಿ.ಎಂ.ಘನಶ್ಯಾಮ
|

Updated on: Nov 30, 2020 | 10:41 AM

Share

ದೆಹಲಿ: ಸ್ವಕ್ಷೇತ್ರ, ಉತ್ತರ ಪ್ರದೇಶದ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನ.30) ಭೇಟಿ ನೀಡಲಿದ್ದು, ವಾರಣಾಸಿ-ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗಂಗಾ ನದಿಯ ತಟದಲ್ಲಿ ನಡೆಯಲಿರುವ ದೀಪೋತ್ಸವದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಭೇಟಿಗೆ ನಗರವು ಸಜ್ಜಾಗಿದೆ. ಶ್ವಾನದಳದೊಂದಿಗೆ ಬೀದಿಬೀದಿಗಳಲ್ಲಿ ಸಂಚರಿಸುತ್ತಿರುವ ಭದ್ರತಾ ಸಿಬ್ಬಂದಿ ದಡದಲ್ಲಿ ನಿಂತಿರುವ ದೋಣಿಗಳ ತಪಾಸಣೆ ನಡೆಸುತ್ತಿದ್ದಾರೆ. ರಾಜಘಾಟ್​ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರತಿ ಇಂಚನ್ನೂ ಜಾಲಾಡುತ್ತಿದ್ದಾರೆ.

ವಾರಣಾಸಿ ಭೇಟಿ ಸಂದರ್ಭ ಪ್ರಧಾನಿ ಹಾಂದಿಯಾ (ಪ್ರಯಾಗ್​ರಾಜ್) – ರಾಜ್​ತಲಾಬ್ (ವಾರಣಾಸಿ) ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು 6 ಲೇನ್​ಗೆ ವಿಸ್ತರಿಸುವ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ₹ 2447 ಕೋಟಿ ಅಂದಾಜು ವೆಚ್ಚದ ಈ ಕಾಮಗಾರಿ ಪೂರ್ಣಗೊಂಡ ನಂತರ, 73 ಕಿ.ಮೀ. ಅಂತರದದ ಪ್ರಯಾಗ್​ರಾಜ್ ಮತ್ತು ವಾರಣಾಸಿ ನಡುವಣ ಪ್ರಯಾಣದ ಅವಧಿ ಸುಮಾರು 1 ಗಂಟೆಯಷ್ಟು ಕಡಿಮೆಯಾಗಲಿದೆ ಎಂದು ಪ್ರಧಾನಿ ಕಚೇರಿ ಹೇಳಿಕೆ ತಿಳಿಸಿದೆ.

ಇಂದು ಕಾರ್ತೀಕ ಮಾಸದ ಹುಣ್ಣಿಮೆಯ ಪ್ರಯುಕ್ತ ವಾರಣಾಸಿಯಲ್ಲಿ ಸಂಪ್ರದಾಯದಂತೆ ದೇವ ದೀಪಾವಳಿ ಉತ್ಸವ ನಡೆಯಲಿದೆ. ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಧಾನಿ, ರಾಜ್​ಘಾಟ್​ನಲ್ಲಿ ಹಣತೆಯೊಂದನ್ನು ಹಚ್ಚಲಿದ್ದಾರೆ. ನಂತರ ಗಂಗೆಯ ಎರಡೂ ತಟಗಳಲ್ಲಿ 11 ಲಕ್ಷ ಹಣತೆಗಳನ್ನು ಬೆಳಗಲಾಗುತ್ತದೆ.

ಪ್ರವಾಸದ ವೇಳೆ ಕಾಶಿ ವಿಶ್ವನಾಥ ದೇಗುಲ ಪಥ ಕಾಮಗಾರಿಯ ಸ್ಥಳಪರಿಶೀಲಿಸಲಿದ್ದಾರೆ. ಪುರಾತನ ಸ್ಮಾರಕ ಸಾರನಾಥದಲ್ಲಿ ನಡೆಯಲಿರುವ ಧ್ವನಿ-ಬೆಳಕು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: 100 ವರ್ಷಗಳ ಹಿಂದೆ ಕಳುವಾಗಿದ್ದ ಅನ್ನಪೂರ್ಣಾ ವಿಗ್ರಹ ಮರಳಿ ಭಾರತಕ್ಕೆ: ಮನ್​ ಕಿ ಬಾತ್​ನಲ್ಲಿ ಮೋದಿ ಖುಷಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!