AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಣಾಸಿಗೆ ಇಂದು ಪ್ರಧಾನಿ ನರೇಂದ್ರ ಮೋದಿ: ಪ್ರಯಾಗ್​ರಾಜ್-ವಾರಣಾಸಿ ಹೆದ್ದಾರಿ ಕಾಮಗಾರಿಗೆ ಚಾಲನೆ

ಸ್ವಕ್ಷೇತ್ರ, ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನ.30) ಭೇಟಿ ನೀಡಲಿದ್ದು, ವಾರಣಾಸಿ-ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗಂಗಾ ನದಿಯ ತಟದಲ್ಲಿ ನಡೆಯಲಿರುವ ದೀಪೋತ್ಸವದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

ವಾರಣಾಸಿಗೆ ಇಂದು ಪ್ರಧಾನಿ ನರೇಂದ್ರ ಮೋದಿ: ಪ್ರಯಾಗ್​ರಾಜ್-ವಾರಣಾಸಿ ಹೆದ್ದಾರಿ ಕಾಮಗಾರಿಗೆ ಚಾಲನೆ
ಪ್ರಧಾನಿ ಭೇಟಿಯ ಮುನ್ನಾ ದಿನವಾದ ಭಾನುವಾರ ದೀಪ ಬೆಳಗಿ ಸಂಭ್ರಮಿಸಿದ ವಾರಣಾಸಿ ನಿವಾಸಿಗಳು
Ghanashyam D M | ಡಿ.ಎಂ.ಘನಶ್ಯಾಮ
|

Updated on: Nov 30, 2020 | 10:41 AM

Share

ದೆಹಲಿ: ಸ್ವಕ್ಷೇತ್ರ, ಉತ್ತರ ಪ್ರದೇಶದ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನ.30) ಭೇಟಿ ನೀಡಲಿದ್ದು, ವಾರಣಾಸಿ-ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗಂಗಾ ನದಿಯ ತಟದಲ್ಲಿ ನಡೆಯಲಿರುವ ದೀಪೋತ್ಸವದಲ್ಲಿಯೂ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಭೇಟಿಗೆ ನಗರವು ಸಜ್ಜಾಗಿದೆ. ಶ್ವಾನದಳದೊಂದಿಗೆ ಬೀದಿಬೀದಿಗಳಲ್ಲಿ ಸಂಚರಿಸುತ್ತಿರುವ ಭದ್ರತಾ ಸಿಬ್ಬಂದಿ ದಡದಲ್ಲಿ ನಿಂತಿರುವ ದೋಣಿಗಳ ತಪಾಸಣೆ ನಡೆಸುತ್ತಿದ್ದಾರೆ. ರಾಜಘಾಟ್​ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರತಿ ಇಂಚನ್ನೂ ಜಾಲಾಡುತ್ತಿದ್ದಾರೆ.

ವಾರಣಾಸಿ ಭೇಟಿ ಸಂದರ್ಭ ಪ್ರಧಾನಿ ಹಾಂದಿಯಾ (ಪ್ರಯಾಗ್​ರಾಜ್) – ರಾಜ್​ತಲಾಬ್ (ವಾರಣಾಸಿ) ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು 6 ಲೇನ್​ಗೆ ವಿಸ್ತರಿಸುವ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ₹ 2447 ಕೋಟಿ ಅಂದಾಜು ವೆಚ್ಚದ ಈ ಕಾಮಗಾರಿ ಪೂರ್ಣಗೊಂಡ ನಂತರ, 73 ಕಿ.ಮೀ. ಅಂತರದದ ಪ್ರಯಾಗ್​ರಾಜ್ ಮತ್ತು ವಾರಣಾಸಿ ನಡುವಣ ಪ್ರಯಾಣದ ಅವಧಿ ಸುಮಾರು 1 ಗಂಟೆಯಷ್ಟು ಕಡಿಮೆಯಾಗಲಿದೆ ಎಂದು ಪ್ರಧಾನಿ ಕಚೇರಿ ಹೇಳಿಕೆ ತಿಳಿಸಿದೆ.

ಇಂದು ಕಾರ್ತೀಕ ಮಾಸದ ಹುಣ್ಣಿಮೆಯ ಪ್ರಯುಕ್ತ ವಾರಣಾಸಿಯಲ್ಲಿ ಸಂಪ್ರದಾಯದಂತೆ ದೇವ ದೀಪಾವಳಿ ಉತ್ಸವ ನಡೆಯಲಿದೆ. ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಧಾನಿ, ರಾಜ್​ಘಾಟ್​ನಲ್ಲಿ ಹಣತೆಯೊಂದನ್ನು ಹಚ್ಚಲಿದ್ದಾರೆ. ನಂತರ ಗಂಗೆಯ ಎರಡೂ ತಟಗಳಲ್ಲಿ 11 ಲಕ್ಷ ಹಣತೆಗಳನ್ನು ಬೆಳಗಲಾಗುತ್ತದೆ.

ಪ್ರವಾಸದ ವೇಳೆ ಕಾಶಿ ವಿಶ್ವನಾಥ ದೇಗುಲ ಪಥ ಕಾಮಗಾರಿಯ ಸ್ಥಳಪರಿಶೀಲಿಸಲಿದ್ದಾರೆ. ಪುರಾತನ ಸ್ಮಾರಕ ಸಾರನಾಥದಲ್ಲಿ ನಡೆಯಲಿರುವ ಧ್ವನಿ-ಬೆಳಕು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: 100 ವರ್ಷಗಳ ಹಿಂದೆ ಕಳುವಾಗಿದ್ದ ಅನ್ನಪೂರ್ಣಾ ವಿಗ್ರಹ ಮರಳಿ ಭಾರತಕ್ಕೆ: ಮನ್​ ಕಿ ಬಾತ್​ನಲ್ಲಿ ಮೋದಿ ಖುಷಿ

ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ