AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Jan Dhan Yojana: ಪ್ರಧಾನಮಂತ್ರಿ ಜನ-ಧನ ಯೋಜನೆಗೆ 7 ವರ್ಷ ಪೂರ್ಣ; ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

ನಮ್ಮ ದೇಶದಲ್ಲಿ ಅದೆಷ್ಟೋ ಹಿಂದುಳಿದ ಜನರಿಗೆ ಬ್ಯಾಂಕಿಂಗ್​ ವ್ಯವಸ್ಥೆಯ ಪರಿಚಯವೇ ಇರಲಿಲ್ಲ. ಈ ಪಿಎಂ ಜನ-ಧನ ಯೋಜನೆ ಮೂಲಕ ಅವರಲ್ಲೂ, ಬ್ಯಾಂಕಿಂಗ್​/ ಉಳಿತಾಯ, ಠೇವಣಿ, ಸಾಲ, ವಿಮೆ, ಪೆನ್ಶನ್​ ಬಗ್ಗೆ ಪ್ರ್ಯಾಕ್ಟಿಕಲ್​ ಆಗಿ ಅರಿವು ಮೂಡಿಸಲಾಗಿದೆ.

PM Jan Dhan Yojana: ಪ್ರಧಾನಮಂತ್ರಿ ಜನ-ಧನ ಯೋಜನೆಗೆ 7 ವರ್ಷ ಪೂರ್ಣ; ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Aug 28, 2021 | 1:25 PM

Share

ಪ್ರಧಾನಮಂತ್ರಿ ಜನ ​ಧನ​ ಯೋಜನೆ (PMJDY)ಗೆ ಏಳುವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಯೋಜನೆ ಪ್ರಾರಂಭಿಸಿ, ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಜನ-ಧನ ಯೋಜನೆಯಿಂದಾಗಿ ಭಾರತದ ಅನೇಕ ಜನರು ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ ಎಂದೂ ಹೇಳಿದ್ದಾರೆ.

ಎರಡು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಅಭಿವೃದ್ಧಿ ಪಥವನ್ನು ಪರಿವರ್ತಿಸಿದ ಪಿಎಂ ಜನ -ಧನ ಯೋಜನೆ ಶುರುವಾಗಿ ಏಳುವರ್ಷವಾಯಿತು. ಇದು ದೇಶದ ಅಸಂಖ್ಯಾತ ಜನರ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಮತ್ತು ಪಾರದರ್ಶಕತೆಯಿಂದ ಕೂಡಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಹಾಗೇ, ಇನ್ನೊಂದು ಟ್ವೀಟ್​ನಲ್ಲಿ ಯೋಜನೆ ಅನುಷ್ಠಾನ, ಯಶಸ್ವಿಗೆ ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಏನಿದು ಜನ-ಧನ ಯೋಜನೆ? ಪ್ರಧಾನಮಂತ್ರಿ ಜನ-ಧನ ಯೋಜನೆ ಜನರಿಗೆ ಆರ್ಥಿಕ ಸಬಲತೆಯನ್ನು ಸೃಷ್ಟಿಸಿಕೊಟ್ಟ ಯೋಜನೆ. ಅಂದರೆ ನಮ್ಮ ದೇಶದಲ್ಲಿ ಅದೆಷ್ಟೋ ಹಿಂದುಳಿದ ಜನರಿಗೆ ಬ್ಯಾಂಕಿಂಗ್​ ವ್ಯವಸ್ಥೆಯ ಪರಿಚಯವೇ ಇರಲಿಲ್ಲ. ಈ ಪಿಎಂ ಜನ-ಧನ ಯೋಜನೆ ಮೂಲಕ ಅವರಲ್ಲೂ, ಬ್ಯಾಂಕಿಂಗ್​/ ಉಳಿತಾಯ, ಠೇವಣಿ, ಸಾಲ, ವಿಮೆ, ಪೆನ್ಶನ್​ ಬಗ್ಗೆ ಪ್ರ್ಯಾಕ್ಟಿಕಲ್​ ಆಗಿ ಅರಿವು ಮೂಡಿಸಲಾಗಿದೆ. ಪಿಎಂ ಯೋಜನೆಯಡಿ ಬ್ಯಾಂಕ್​​ನಲ್ಲಿ ಶೂನ್ಯ ಬ್ಯಾಲೆನ್ಸ್​​ನಲ್ಲಿ ಖಾತೆ ತೆರೆಯಬಹುದಾಗಿದೆ. ಈ ಖಾತೆದಾರರು ಅಪಘಾತವಾದ ಸಂದರ್ಭದಲ್ಲಿ 1 ಲಕ್ಷ ರೂ.ದೊಂದಿಗೆ 30 ಸಾವಿರ ರೂ. ಸಾಮಾನ್ಯ ವಿಮೆ ಸೌಲಭ್ಯ ಪಡೆಯುತ್ತಾರೆ. ಪಿಎಂ ಜನ-ಧನ ಯೋಜನೆ ಶುರುವಾದಾಗಿನಿಂದ ಇಲ್ಲಿಯವರೆಗೆ 43.04 ಕೋಟಿ ಮಂದಿ ಬ್ಯಾಂಕ್​ ಖಾತೆ ತೆರೆದು, ಬ್ಯಾಂಕಿಂಗ್​ ವಹಿವಾಟು ಶುರುಮಾಡಿದ್ದಾರೆ.

ಇದನ್ನೂ ಓದಿ:ಅಫ್ಘನ್​ನಿಂದ ಪಾರಾಗಿ ಬೆಲ್ಜಿಯಂನ ವಿಮಾನ ನಿಲ್ದಾಣದಲ್ಲಿ ಇಳಿದಾಗ ಪುಟ್ಟ ಬಾಲಕಿಯ ಸಂಭ್ರಮ ನೋಡಿ  

ಬಾಲ ಆರೋಪಿ ಸೇರಿ ಐವರ ಬಂಧನವಾಗಿದೆ; ಡಿಜಿ ಐಜಿಪಿ ಪ್ರವೀಣ್​ ಸೂದ್ ನೀಡಿದ ಕಾರ್ಯಾಚರಣೆಯ ಸಂಪೂರ್ಣ ವಿವರ ಇಲ್ಲಿದೆ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್