AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Jan Dhan Yojana: ಪ್ರಧಾನಮಂತ್ರಿ ಜನ-ಧನ ಯೋಜನೆಗೆ 7 ವರ್ಷ ಪೂರ್ಣ; ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

ನಮ್ಮ ದೇಶದಲ್ಲಿ ಅದೆಷ್ಟೋ ಹಿಂದುಳಿದ ಜನರಿಗೆ ಬ್ಯಾಂಕಿಂಗ್​ ವ್ಯವಸ್ಥೆಯ ಪರಿಚಯವೇ ಇರಲಿಲ್ಲ. ಈ ಪಿಎಂ ಜನ-ಧನ ಯೋಜನೆ ಮೂಲಕ ಅವರಲ್ಲೂ, ಬ್ಯಾಂಕಿಂಗ್​/ ಉಳಿತಾಯ, ಠೇವಣಿ, ಸಾಲ, ವಿಮೆ, ಪೆನ್ಶನ್​ ಬಗ್ಗೆ ಪ್ರ್ಯಾಕ್ಟಿಕಲ್​ ಆಗಿ ಅರಿವು ಮೂಡಿಸಲಾಗಿದೆ.

PM Jan Dhan Yojana: ಪ್ರಧಾನಮಂತ್ರಿ ಜನ-ಧನ ಯೋಜನೆಗೆ 7 ವರ್ಷ ಪೂರ್ಣ; ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde

Updated on: Aug 28, 2021 | 1:25 PM

Share

ಪ್ರಧಾನಮಂತ್ರಿ ಜನ ​ಧನ​ ಯೋಜನೆ (PMJDY)ಗೆ ಏಳುವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಯೋಜನೆ ಪ್ರಾರಂಭಿಸಿ, ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಜನ-ಧನ ಯೋಜನೆಯಿಂದಾಗಿ ಭಾರತದ ಅನೇಕ ಜನರು ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ ಎಂದೂ ಹೇಳಿದ್ದಾರೆ.

ಎರಡು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಅಭಿವೃದ್ಧಿ ಪಥವನ್ನು ಪರಿವರ್ತಿಸಿದ ಪಿಎಂ ಜನ -ಧನ ಯೋಜನೆ ಶುರುವಾಗಿ ಏಳುವರ್ಷವಾಯಿತು. ಇದು ದೇಶದ ಅಸಂಖ್ಯಾತ ಜನರ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಮತ್ತು ಪಾರದರ್ಶಕತೆಯಿಂದ ಕೂಡಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಹಾಗೇ, ಇನ್ನೊಂದು ಟ್ವೀಟ್​ನಲ್ಲಿ ಯೋಜನೆ ಅನುಷ್ಠಾನ, ಯಶಸ್ವಿಗೆ ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಏನಿದು ಜನ-ಧನ ಯೋಜನೆ? ಪ್ರಧಾನಮಂತ್ರಿ ಜನ-ಧನ ಯೋಜನೆ ಜನರಿಗೆ ಆರ್ಥಿಕ ಸಬಲತೆಯನ್ನು ಸೃಷ್ಟಿಸಿಕೊಟ್ಟ ಯೋಜನೆ. ಅಂದರೆ ನಮ್ಮ ದೇಶದಲ್ಲಿ ಅದೆಷ್ಟೋ ಹಿಂದುಳಿದ ಜನರಿಗೆ ಬ್ಯಾಂಕಿಂಗ್​ ವ್ಯವಸ್ಥೆಯ ಪರಿಚಯವೇ ಇರಲಿಲ್ಲ. ಈ ಪಿಎಂ ಜನ-ಧನ ಯೋಜನೆ ಮೂಲಕ ಅವರಲ್ಲೂ, ಬ್ಯಾಂಕಿಂಗ್​/ ಉಳಿತಾಯ, ಠೇವಣಿ, ಸಾಲ, ವಿಮೆ, ಪೆನ್ಶನ್​ ಬಗ್ಗೆ ಪ್ರ್ಯಾಕ್ಟಿಕಲ್​ ಆಗಿ ಅರಿವು ಮೂಡಿಸಲಾಗಿದೆ. ಪಿಎಂ ಯೋಜನೆಯಡಿ ಬ್ಯಾಂಕ್​​ನಲ್ಲಿ ಶೂನ್ಯ ಬ್ಯಾಲೆನ್ಸ್​​ನಲ್ಲಿ ಖಾತೆ ತೆರೆಯಬಹುದಾಗಿದೆ. ಈ ಖಾತೆದಾರರು ಅಪಘಾತವಾದ ಸಂದರ್ಭದಲ್ಲಿ 1 ಲಕ್ಷ ರೂ.ದೊಂದಿಗೆ 30 ಸಾವಿರ ರೂ. ಸಾಮಾನ್ಯ ವಿಮೆ ಸೌಲಭ್ಯ ಪಡೆಯುತ್ತಾರೆ. ಪಿಎಂ ಜನ-ಧನ ಯೋಜನೆ ಶುರುವಾದಾಗಿನಿಂದ ಇಲ್ಲಿಯವರೆಗೆ 43.04 ಕೋಟಿ ಮಂದಿ ಬ್ಯಾಂಕ್​ ಖಾತೆ ತೆರೆದು, ಬ್ಯಾಂಕಿಂಗ್​ ವಹಿವಾಟು ಶುರುಮಾಡಿದ್ದಾರೆ.

ಇದನ್ನೂ ಓದಿ:ಅಫ್ಘನ್​ನಿಂದ ಪಾರಾಗಿ ಬೆಲ್ಜಿಯಂನ ವಿಮಾನ ನಿಲ್ದಾಣದಲ್ಲಿ ಇಳಿದಾಗ ಪುಟ್ಟ ಬಾಲಕಿಯ ಸಂಭ್ರಮ ನೋಡಿ  

ಬಾಲ ಆರೋಪಿ ಸೇರಿ ಐವರ ಬಂಧನವಾಗಿದೆ; ಡಿಜಿ ಐಜಿಪಿ ಪ್ರವೀಣ್​ ಸೂದ್ ನೀಡಿದ ಕಾರ್ಯಾಚರಣೆಯ ಸಂಪೂರ್ಣ ವಿವರ ಇಲ್ಲಿದೆ

ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ